ಆಲಂಕಾರು ಪೇಟೆ: ಕುಡಿಯುವ ನೀರಿಗೂ ಹಾಹಾಕಾರ !


Team Udayavani, Feb 25, 2019, 5:38 AM IST

25-february-4.jpg

ಆಲಂಕಾರು : ಕಡಬ ತಾ| ನ ಬೆಳೆಯುತ್ತಿರುವ ಪಟ್ಟಣಗಳಲ್ಲಿ ಆಲಂಕಾರು ಗ್ರಾಮ ಮತ್ತು ಪೇಟೆ ಹಲವು ಗ್ರಾಮಗಳ ಸಂಪರ್ಕಕ್ಕೆ ರಹದಾರಿಯನ್ನೇ ನಿರ್ಮಿಸಿದೆ. ಇಂತಹ ಪಟ್ಟಣದಲ್ಲೇ ಸಾರ್ವಜನಿಕರು ಕುಡಿಯುವ ನೀರಿಗಾಗಿ ಬವಣೆ ಪಡುವಂತಾಗಿದೆ.

ಕುಮಾರಧಾರಾ ನದಿಗೆ ಶಾಂತಿಮೊಗರು ಸೇತುವೆ ಸಂಪರ್ಕಕ್ಕೆ ಮುಕ್ತವಾದ ಬಳಿಕ ಆಲಂಕಾರು ಪೇಟೆಯು ಹಲವು ಗ್ರಾಮಗಳನ್ನು ಸಂಪರ್ಕಿಸುವ ಕೇಂದ್ರವಾಗಿದೆ. ನೆಲ್ಯಾಡಿ, ಕುಂತೂರು, ಪೆರಾಬೆ ಮೊದಲಾದ ಪ್ರದೇಶಗಳಿಂದ ಪುತ್ತೂರಿಗೆ ಹೋಗುವ ಜನ ಆಲಂಕಾರು ಪೇಟೆಯಾಗಿಯೇ ಪ್ರಯಾಣ ಬೆಳೆಸುತ್ತಾರೆ. 

ಈ ಕಾರಣದಿಂದಾಗಿ ಆಲಂಕಾರು ಪೇಟೆಯು ಬೆಳಗ್ಗೆಯಿಂದ ಸಂಜೆವರೆಗೆ ಜನಸಂದಣಿಯಿಂದ ತುಂಬಿರುತ್ತದೆ. ಅವರು ಪೇಟೆಯಲ್ಲಿರುವ ಹೊಟೇಲ್‌ಗ‌ಳಿಗೆ ಧಾವಿಸಿ ನೀರು ಕುಡಿಯಬೇಕು ಅಥವಾ ಬಾಟಲಿ ನೀರು ಖರೀದಿಸಿ ಕುಡಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಥಳಿಯಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.

ಟ್ಯಾಂಕ್‌ ನಿರ್ಮಾಣವಾಗಿಲ್ಲ
ಕೆಲ ವರ್ಷಗಳ ಹಿಂದೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಲಂಕಾರು ಗ್ರಾಮದ ಒಕ್ಕೂಟಗಳು ಪೇಟೆ ಪ್ರವೇಶ ದ್ವಾರದ ಬಳಿ ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕ್‌ ಅನ್ನು ನಿರ್ಮಿಸಿ ಜನತೆಗೆ ನೀಡಿತ್ತು. ಇದಕ್ಕೆ ಗ್ರಾಮ ಪಂಚಾಯತ್‌ ಉಚಿತ ನೀರಿನ ವ್ಯವಸ್ಥೆಯನ್ನು ಕಲ್ಪಿಸಿ ಯೋಜನೆಯ ಉದ್ದೇಶವನ್ನು ಯಶಸ್ವಿಗೊಳಿಸಿತ್ತು. ಆದರೆ ರಸ್ತೆ ದುರಸ್ತಿಯ ನೆಪದಲ್ಲಿ ತೆರವಾದ ಟ್ಯಾಂಕ್‌ ಅನ್ನು
ಮರು ಸ್ಥಾಪಿಸಲು ಯಾವ ಸಂಘಟನೆಯಾಗಲೀ, ಸ್ಥಳೀಯಾಡಳಿತ ಮಂಡಳಿಯಾಗಲೀ, ನೀರಿನ ಟ್ಯಾಂಕ್‌ ಅಳವಡಿಸಲು ಮುತುವರ್ಜಿ ವಹಿಸದಿರುವುದು ಸಮಸ್ಯೆಗೆ ಮೂಲ ಕಾರಣವಾಗಿದೆ. ಅಂದು ಇದ್ದ ನೂರು ಲೀಟರ್‌ನ ಸಿಂಟೆಕ್ಸ್‌ ಡ್ರಂ ಸಹ ಇಂದು ಮಾಯವಾಗಿದೆ.

ಮುಂದೆ ಬಾರದ ಸಂಘಟನೆಗಳು
ಆಲಂಕಾರು ವ್ಯಾಪ್ತಿಯಲ್ಲಿ ಕಾರ್ಯಾಚರಿಸುವ ವಿವಿಧ ಸಂಘಟನೆಗಳು ಸ್ಥಳೀಯಾಡಳಿತದೊಂದಿಗೆ ಸದಾ ಕೈ ಜೋಡಿಸಿಕೊಂಡು ಗ್ರಾಮದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿವೆ. ಆದರೆ ಈ ಸುಡು ಬಿಸಿಲಿನ ತಾಪಕ್ಕೆ ಆಲಂಕಾರು ಪೇಟೆಯನ್ನು ಸಂಪರ್ಕಿಸುವ ಸಾರ್ವಜನಿಕರು ಕುಡಿಯುವ ನೀರಿನ ವ್ಯವಸ್ಥೆಯಿಂದ ವಂಚಿತರಾಗಿದ್ದಾರೆ ಎನ್ನುವುದು ಯಾವ ಸಂಘಟನೆಗೂ ಇನ್ನೂ ಮನವರಿಕೆಯಾಗದಿರುವುದು ವಿಶೇಷವಾಗಿದೆ. ಈ ವಿಚಾರ ಆಲಂಕಾರಿನಲ್ಲಿ ಕಾರ್ಯಾಚರಿಸುವ ಯಾವುದೇ ಸಂಘಟನೆಗಳಿಗೆ ಈ ಮೊದಲೇ ತಿಳಿದಿದ್ದರೆ ಸ್ಥಳಿಯಾಡಳಿತವನ್ನು ಕಾಯದೆ ಯಾವಾಗಲೂ ನೀರಿನ ಟ್ಯಾಂಕ್‌ ನಿರ್ಮಾಣ ಆಗುತ್ತಿತ್ತು ಎಂದು ಸಾರ್ವಜನಿಕ ವಲಯದಿಂದ ಕೇಳಿಬಂದಿದೆ.

ನೀರಿನ ವ್ಯವಸ್ಥೆ: ಚರ್ಚೆ
ಪೇಟೆಯಲ್ಲಿ ಸಾರ್ವಜನಿಕರು ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ ಎನ್ನುವ ವಿಚಾರ ಮನವರಿಕೆಯಾಗಿದೆ. ಈಗಾಗಲೇ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣವಾಗಿದ್ದರೂ, ನೀರು ಪೂರೈಕೆಗೆ ಕಂಪೆನಿ ವಿಳಂಬ ನೀತಿ ಅನುಸರಿಸುತ್ತಿದೆ. ಯಾವುದೇ ಸಂಘ ಸಂಸ್ಥೆಗಳು ಟ್ಯಾಂಕ್‌ ಅಳವಡಿಕೆಗೆ ಮುಂದಾದರೆ ಗ್ರಾಮ ಪಂಚಾಯತ್‌ನಿಂದ ಉಚಿತ ನೀರು ಸರಬರಾಜು ಮಾಡಲಾಗುವುದು. ಅಲ್ಲದೆ ಈ ಬಗ್ಗೆ ಮುಂದಿನ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. 
– ಸುನಂದಾ ಬಾರ್ಕುಲಿ
ಆಲಂಕಾರು ಗ್ರಾ.ಪಂ. ಅಧ್ಯಕ್ಷೆ 

ಸದಾನಂದ ಆಲಂಕಾರು

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

1-wewewqeqwewqe

Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ

Madikeri ಭಾಗದ ಅಪರಾಧ ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.