ರಸ್ತೆ ಸುರಕ್ಷಾ ಯೋಜನೆಗೆ 1 ಕೋ.ರೂ. ಅನುದಾನ 


Team Udayavani, Feb 28, 2019, 1:00 AM IST

raste-suraksha.jpg

ಮಣಿಪಾಲ: 2013-18ರ ಅವಧಿಯಲ್ಲಿ 13 ಗಂಭೀರ ಅಪಘಾತಗಳು ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಅಲೆವೂರು ಬ್ಲ್ಯಾಕ್‌ಸ್ಪಾಟ್‌ ರಸ್ತೆಯಲ್ಲಿ ಸಂಚಾರ ಸುರಕ್ಷಿತಗೊಳಿಸುವ ನಿಟ್ಟಿನಲ್ಲಿ 1 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಟೆಂಡರ್‌ ನೀಡಲಾಗಿದೆ. 

ಕಡಿದಾದ ತಿರುವು, ಸೇತುವೆ, ರಸ್ತೆಯ ಇಬ್ಬದಿಯಲ್ಲಿ ತಗ್ಗಿನಲ್ಲಿ ಗದ್ದೆಗಳಿರುವ ಈ ರಸ್ತೆಯಲ್ಲಿ ದಾಖಲಾದ ಅಪಘಾತ ಪ್ರಕರಣ ಗಳಿಷ್ಟಾದರೂ, ಬಿದ್ದು ಗಾಯ ಗೊಂಡಿರುವವರು ಹಲವಾರು ಮಂದಿ ಇದ್ದಾರೆ. ತಿರುವು ಮತ್ತು ರಸ್ತೆಗೆ ತಾಗಿಯೇ ಬಂಡೆ ಇರುವುದೂ ಇದಕ್ಕೆ ಕಾರಣ. ವೇಗವಾಗಿ ಬರುವ ವಾಹನಗಳು ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿರುವ ಪ್ರಕರಣಗಳೂ ನಡೆದಿವೆ. 

ಉಡುಪಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಈ ಭಾಗದಲ್ಲಿ ಸುರಕ್ಷಿತ ಸಂಚಾರ ಕಲ್ಪಿಸುವ ನಿಟ್ಟಿನಲ್ಲಿ 1 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಲೋಕೋಪಯೋಗಿ ಇಲಾಖೆಯಿಂದ ಟೆಂಡರ್‌ ಕೂಡಾ ನೀಡಲಾಗಿದೆ. ಶೀಘ್ರ ಕಾಮಗಾರಿ ಆರಂಭವಾಗಲಿದೆ. 

ಏನಿದು ಸುರಕ್ಷತಾ ಯೋಜನೆ?
ತಿರುವು ಹಾಗೂ ಅವೈಜ್ಞಾನಿಕ ರಸ್ತೆಯಿಂದಾಗಿ ರಾಜ್ಯ ಹೆದ್ದಾರಿಗಳಲ್ಲಿ ಸಂಭವಿಸುವ ಅಪಘಾತಗಳನ್ನು ತಡೆಯುವ ಲೋಕೋಪಯೋಗಿ ಇಲಾಖೆಯ ಯೋಜನೆಯೇ ರಸ್ತೆ ಸುರಕ್ಷತಾ ಯೋಜನೆ. ಈ ಯೋಜನೆಯಲ್ಲಿ ರಸ್ತೆಯನ್ನು ಅಗಲ ಮಾಡುವುದು, ಸುರಕ್ಷಾ ತಡೆ ನಿರ್ಮಿಸುವುದು, ತಿರುವುಗಳನ್ನು ತೆರವುಗೊಳಿ ಸುವ ಕಾಮಗಾರಿಗಳನ್ನು ಮಾಡಲಾಗುತ್ತದೆ. 

ಸುರಕ್ಷಾ ತಡೆ
ಅಲೆವೂರು ಸೇತುವೆ ಬಳಿ ವಾಹನಗಳು ನಿಯಂತ್ರಣ ತಪ್ಪಿ ಕಮರಿಗೆ ಉರುಳುವುದನ್ನು ತಪ್ಪಿಸಲು ಸುರಕ್ಷತಾ ತಡೆ ನಿರ್ಮಿಸಲಾಗುತ್ತಿದೆ. ಈಗಾಗಲೇ ಕಾಮಗಾರಿ ಆರಂಭಗೊಂಡಿದ್ದು ಶೀಘ್ರ ಸಂಪನ್ನಗೊಳ್ಳಲಿದೆ. ಹಿಂದೆ ಟಿಪ್ಪರ್‌ವೊಂದು ಕಮರಿಗೆ ಉರುಳುವ ಸಂದರ್ಭ ತಡೆ ಮುರಿದು ಹೋಗಿತ್ತು. ಹೆಚ್ಚು ಸಾಮರ್ಥ್ಯದ ತಡೆ ಅಳವಡಿಸುವ ನಿಟ್ಟಿನಲ್ಲಿ ಲೋಕೋಪಯೋಗಿ ಇಲಾಖೆ ಕ್ರಮ ಕೈಗೊಂಡಿದೆ. 

ಪೊಲೀಸ್‌ ವರದಿ ಪರಿಣಾಮ 
ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಬರುವ ರಾಂಪುರ- ಅಲೆವೂರು ಮಾರ್ಗದಲ್ಲಿ ಹೆಚ್ಚಿನ ಅಪಘಾತ ಪ್ರಕರಣಗಳು ನಡೆಯುತ್ತಿರುವ ಬಗ್ಗೆ ಮಣಿಪಾಲ ಪೊಲೀಸರು ಲೋಕೋಪಯೋಗಿ ಇಲಾಖೆಗೆ ವರದಿ ನೀಡಿದ್ದರು. ಈ ವರದಿಯನ್ನು ಪರಿಶೀಲಿಸಿರುವ ಇಲಾಖೆ ರಸ್ತೆ ಸುರಕ್ಷಾ ಯೋಜನೆ ಅನುಷ್ಠಾನಿಸಿದೆ.

ಏನೇನು ಕಾಮಗಾರಿ?
– 7 ಮೀ. ಅಗಲ ರಸ್ತೆ 
– ಸೈಡ್‌ ಪಿಚ್ಚಿಂಗ್‌
– ತಿರುವು ತೆರವು
– ರಸ್ತೆ ಬದಿಯ ಬಂಡೆ ತೆರವು
– ಸುರಕ್ಷತಾ ತಡೆ; 1.5 ಮೀ. ಎತ್ತರ 
– ಲೇನ್‌ ಮಾರ್ಕಿಂಗ್‌
– ರಿಫ್ಲೆಕ್ಟರ್‌
– ಸುರಕ್ಷಾ ಸಂಜ್ಞೆಗಳು

ಶೀಘ್ರ ಕಾಮಗಾರಿ 
1 ಕೋಟಿ ರೂ. ಅನುದಾನದಲ್ಲಿ ರಸ್ತೆ ಸುರಕ್ಷಾ ಯೋಜನೆ ಅನುಷ್ಠಾನಿಸಲಾಗುತ್ತಿದೆ. ಮಣಿಪಾಲ ಪೊಲೀಸರ ವರದಿಯೊಂದಿಗೆ ಸುರಕ್ಷಾ ರಸ್ತೆ ಯೋಜನೆಗೆ ಪ್ರಸ್ತಾವ ಸಲ್ಲಿಸಿದ್ದು ಅನುಮೋದನೆ ದೊರೆತಿದೆ. ಟೆಂಡರ್‌ ನೀಡಲಾಗಿದ್ದು ಶೀಘ್ರ ಕಾಮಗಾರಿ ಆರಂಭವಾಗಲಿದೆ. 
-ಜಗದೀಶ್‌ ಭಟ್‌, ಎಇಇ, ಲೋಕೋಪಯೋಗಿ ಇಲಾಖೆ, ಉಡುಪಿ

ಟಾಪ್ ನ್ಯೂಸ್

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು

IPL retention: IPL new rule gave good news to Chennai-Mumbai Franchise

IPL retention: ಚೆನ್ನೈ-ಮುಂಬೈಗೆ ಗುಡ್‌ ನ್ಯೂಸ್‌ ನೀಡಿದ ಐಪಿಎಲ್‌ ಹೊಸ ನಿಯಮ

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

Food-1

Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!

001

BBK11: ಬಿಗ್‌ ಬಾಸ್‌ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Manorama-Bhat

Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

002

Karkala: ಎದೆ ನೋವಿನಿಂದ ಕೃಷಿಕ ಸಾವು

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Udupi: ರಸ್ತೆ ಮಾರ್ಜಿನ್‌ ಮಾಹಿತಿ ಇಲ್ಲದೆ ಸಂಕಷ್ಟ: ನಗರಕ್ಕೆ 21ಮೀ.,ಗ್ರಾಮಾಂತರಕ್ಕೆ 40 ಮೀ.

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Coconut: ಅಧಿಕ ಮಳೆ, ರೋಗಬಾಧೆ: ಕೆ.ಜಿ.ಗೆ 50 ರೂ. ಗಡಿ ದಾಟಿದ ತೆಂಗಿನಕಾಯಿ

Udupi: ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ

Udupi: ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು ನೀಡಿ

Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫ‌ಲ ಬಿಡಬಹುದು

Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫ‌ಲ ಬಿಡಬಹುದು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-frrr

Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

04

Kasaragod: ವಿದ್ಯಾರ್ಥಿಗಳ ಮಧ್ಯೆ ಘರ್ಷಣೆ

1-aaa

Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.