ಸುಲ್ಕೇರಿ: ನಿಲ್ಲಿಸಿದ್ದ ರೋಲರ್ಗೆ ಬೈಕ್ ಢಿಕ್ಕಿ; ಸವಾರ ಸಾವು
Team Udayavani, Mar 2, 2019, 1:10 AM IST
ವೇಣೂರು: ಬೆಳ್ತಂಗಡಿ ತಾಲೂಕಿನ ಸುಲ್ಕೇರಿಯಲ್ಲಿ ಗುರುವಾರ ತಡರಾತ್ರಿ ಹೆದ್ದಾರಿಯಲ್ಲಿ ನಿಂತಿದ್ದ ರೋಲರ್ಗೆ ಬೈಕ್ ಢಿಕ್ಕಿ ಹೊಡೆದು ಸವಾರ ಮೃತಪಟ್ಟಿದ್ದಾರೆ.
ಸಂಬಂಧಿಕರ ಕಾರ್ಯಕ್ರಮಕ್ಕೆಂದು ತೆರಳುತ್ತಿದ್ದ ಬೆಳಾಲು ಗ್ರಾಮದ ಎರ್ಮಾಲು ಕೆರೆಕೋಡಿ ನಿವಾಸಿ ಶ್ರೀಧರ ಪೂಜಾರಿ ಮತ್ತು ಶ್ರೀಮತಿ ದಂಪತಿ ಪುತ್ರ, ಖಾಸಗಿ ಬಸ್ ನಿರ್ವಾಹಕ ಜಯಂತ (31) ಮೃತರು.
ಇವರ ತಲೆ ಹಾಗೂ ತೊಡೆಯ ಭಾಗಕ್ಕೆ ತೀವ್ರ ಗಾಯವಾಗಿತ್ತು. ಅವರನ್ನು ಬದ್ಯಾರು ಖಾಸಗಿ ಆಸ್ಪತ್ರೆಗೆ ಕೊಂಡೊಯ್ದು, ಬಳಿಕ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸುವ ಮಧ್ಯೆ ಕೊನೆ ಯುಸಿರೆಳೆದರು. ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆತ್ತ ವರ ಆರೋಪ
ರಿಫ್ಲೆಕ್ಟರ್ ಸಹಿತ ಯಾವುದೇ ಸುರಕ್ಷಾ ಕ್ರಮಗಳಿಲ್ಲದೆ ದೊಡ್ಡ ಗಾತ್ರದ ರೋಲರನ್ನು ಗುತ್ತಿಗೆದಾರರು ಹೆದ್ದಾರಿ ಮಧ್ಯೆ ನಿಲ್ಲಿಸಿದ್ದೇ ಘಟನೆಗೆ ಕಾರಣ ಎಂದು ಮೃತರ ಹೆತ್ತವರು ಆರೋಪಿಸಿದ್ದಾರೆ.
ಮನೆಯ ಆಧಾರವಾಗಿದ್ದರು
ಜಯಂತ ಪೂಜಾರಿಯ ಮೂವರು ಮಕ್ಕಳಲ್ಲಿ ಇವರೊಬ್ಬನೇ ಪುತ್ರನಾಗಿದ್ದು, ಇಬ್ಬರು ಸಹೋದರಿಯರಿಗೆ ಮದುವೆಯಾಗಿದೆ. ಹೆತ್ತವರು ಕೂಲಿ ಕೆಲಸ ಮಾಡುತ್ತಿದ್ದು, ಕುಟುಂಬಕ್ಕೆ ಇವರೇ ಆಧಾರವಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka ವಿದ್ಯುತ್ ಪ್ರಸರಣ ನಿಗಮದಿಂದ ಪವರ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ; ಅ.27 ರಂದು ʼಶತಾಭಿವಂದನಂ’ ಆಚರಣೆ ಸಮಾರೋಪ ಸಂಭ್ರಮ
Manipal: ಅನ್ನನಾಳ ರಂಧ್ರ ಸಮಸ್ಯೆಗೆ ನವೀನ ಎಂಡೋಸ್ಕೋಪಿಕ್ ಚಿಕಿತ್ಸೆ
Udupi: ಗೀತಾರ್ಥ ಚಿಂತನೆ-72: ಶಬ್ದ ಬಳಕೆಯಲ್ಲಿ ಧ್ವನ್ಯಾರ್ಥ ವಿಶೇಷಣ
Udupi: 51ನೇ ಅ.ಭಾ. ಪ್ರಾಚ್ಯವಿದ್ಯಾ ಸಮ್ಮೇಳನ ಭಾರತೀಯ ಜ್ಞಾನಪರಂಪರೆ ಕುರಿತು ಚಿಂತನ ಮಂಥನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.