ಅರೆಭಾಷೆ ಆಡುಭಾಷೆಯಾಗಲಿ: ಡಿ.ವಿ.


Team Udayavani, Mar 3, 2019, 6:17 AM IST

3-march-7.jpg

ಸುಳ್ಯ : ಭಾಷೆ ಕುರಿತು ಕೀಳರಿಮೆ ಬಿಡಬೇಕು. ಭಾಷಾ ವ್ಯಾಪ್ತಿ ಕಿರಿದಾಗಿದ್ದರೂ ಅದರಲ್ಲಿನ ಸಂಸ್ಕೃತಿ ಅತ್ಯಂತ ಹಿರಿದಾದುದು ಎಂದು ಕೇಂದ್ರ ರಾಸಾಯನಿಕ ಗೊಬ್ಬರ ಮತ್ತು ಅಂಕಿ
ಅಂಶಗಳ ಸಚಿವ ಡಿ.ವಿ. ಸದಾನಂದ ಗೌಡ ಹೇಳಿದರು.

ಕೊಡಿಯಾಲಬೈಲು ಸಮುದಾಯ ಭವನದಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ಸ್ವಾಗತ ಸಮಿತಿ, ಸಮ್ಮೇ ಳನ ಸಮಿತಿ ಮತ್ತು ಗೌಡ ಯುವ ಸೇವಾ ಸಂಘದ ಆಶ್ರಯದಲ್ಲಿ ಶನಿವಾರ ನಡೆದ ಪ್ರಥಮ ಅರೆಭಾಷೆ ಸಾಹಿತ್ಯ ಸಮ್ಮೇಳನದಲ್ಲಿ ಅವರು ಮಾತನಾಡಿದರು.

ಯಾವುದೇ ಭಾಷೆ ಆಡುಭಾಷೆಯಾಗಿ ಬದಲಾದರೆ ನಶಿಸಿ ಹೋಗದು. ಅದರಿಂದ ಭಾಷಾ ಸ್ವಂತಿಕೆ ಉಳಿಸಿಕೊಳ್ಳಲು ಸಾಧ್ಯವಿದೆ. ಅಕಾಡೆಮಿ ಸ್ಥಾಪನೆ ಮೂಲಕ ಅರೆಭಾಷೆಯ ಸೊಗಡು ಹಳ್ಳಿಯಿಂದ ದಿಲ್ಲಿ ತನಕ ಪಸರಿಸಿದೆ. ಕೋಡಿ ಕುಶಾಲಪ್ಪ ಗೌಡ, ಬಿಳಿಮಲೆ ಅವರಂತಹವರು ಭಾಷಾ ಬೆಳವಣಿಗೆಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ ಎಂದು ಅವರು ಉಲ್ಲೇಖೀಸಿದರು.

ಸುಳ್ಯದಲ್ಲಿ ನಡೆದ ಸ್ವಾತಂತ್ರ್ಯ  ಸಂಗ್ರಾಮ ಪ್ರಥಮ ಎಂದೆನಿಸಿದೆ. ಅದರಲ್ಲಿನ ಹೋರಾಟಗಾರರು ಅರೆಭಾಷೆ ಮಾತನಾಡುವವರು ಎನ್ನುವುದು ನಮಗೆಲ್ಲ ಹೆಮ್ಮೆಯ ಸಂಗತಿ. ಲಿಪಿ ಇರುವ ಭಾಷೆ ಮಾತ್ರ ಶ್ರೇಷ್ಠ ಎಂಬ ಭಾವನೆ ಬೇಡ. ಅರೆಭಾಷೆ ಮನುಷ್ಯತ್ವದ ಭಾಷೆ ಎಂದು ಬಣ್ಣಿಸಿದರು.

ಮೂರು ಹಂತದ ಬೆಳವಣಿಗೆ
ಪ್ರಥಮ ಅರೆಭಾಷೆ ಸಾಹಿತ್ಯ ಸಮ್ಮೇಳನಾಧ್ಯಕ್ಷ, ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಕೆ.ಆರ್‌. ಗಂಗಾಧರ ಮಾತನಾಡಿ, ಅರೆಭಾಷೆಯು ಆರಂಭದ ಹಂತದಲ್ಲಿ ಜನಾಂಗದವರ ಮನೆ ಭಾಷೆಯಾಗಿ, ಎರಡನೆ ಹಂತದಲ್ಲಿ ಜನಾಂಗ ಮೀರಿ ಬೆಳೆಯುವ ಭಾಷೆಯಾಗಿ, ಮೂರನೆ ಹಂತದಲ್ಲಿ ನಮ್ಮ ಪ್ರದೇಶ ಮೀರಿ ಬೆಳೆಯುವ ಭಾಷೆಯಾಗಿ ವಿಸ್ತಾರಗೊಳ್ಳಬೇಕು ಎಂದರು.

ಮೂರು ಅಪಾಯಗಳು
ದೈನಂದಿನ ಜೀವನದಲ್ಲಿ ಆಂಗ್ಲ ಭಾಷೆಯ ಬಳಕೆ, ಮಕ್ಕಳಿಗೆ ಅರೆಭಾಷೆ ತಿಳಿಸುವ ಪ್ರಯತ್ನ ಆಗದಿರುವುದು ಹಾಗೂ ಅತಿಯಾದ ಮೊಬೈಲ್‌ ಬಳಕೆ ಇವು ಅರೆಭಾಷೆ ಎದುರಿಸುವ ಮೂರು ಅಪಾಯಗಳು ಎಂದು ಅವರು ಉದಾಹರಣೆ ಸಹಿತ ವಿವರಿಸಿದರು. ಜಾತಿ ಜಾತಿಗಳೊಟ್ಟಿಗೆ, ಧರ್ಮ ಧರ್ಮಗಳೊಟ್ಟಿಗೆ ಬಾಂಧವ್ಯ, ಸಾಮರಸ್ಯ ಬೆಳೆಸುವಲ್ಲಿ ಭಾಷೆ ಮಹತ್ವದ ಪಾತ್ರ ವಹಿಸಿದೆ. ಸುಳ್ಯ ತಾಲೂಕಿನಲ್ಲಿ ಕನ್ನಡ, ಅರೆಭಾಷೆ, ತುಳು, ಮಳೆಯಾಳ, ಹವ್ಯಕ, ತಮಿಳು ಹೀಗೆ ಬೇರೆ ಬೇರೆ ಭಾಷೆಗಳನ್ನಡುತ್ತಾ ಬಾಂಧವ್ಯ, ಸಾಮರಸ್ಯ ವೃದ್ಧಿಗೆ ಕಾರಣವಾಗಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದರು.

ಭಾಷೆಯ ಬೆಳವಣಿಗೆಗೆ ಸಹಕಾರಿ
ಸಮ್ಮೇಳನ ಉದ್ಘಾಟಿಸಿದ ವಿಶ್ರಾಂತ ಕುಲಪತಿ ಕೊಳಂಬೆ ಚಿದಾನಂದ ಗೌಡ ಮಾತನಾಡಿ, ಅರೆಭಾಷೆ ಉಳಿದರೆ ಸಂಸ್ಕೃತಿ ಉಳಿದಂತೆ. ಇದು ಹೃದಯದ ಭಾಷೆ. ಹಾಗಾಗಿ ಅರೆಭಾಷೆ ಇನ್ನಷ್ಟು ಬೆಳವಣಿಗೆ ಹೊಂದಲು ಸಾಹಿತ್ಯ ಸಮ್ಮೇಳನ, ಪುಸ್ತಕ ರಚನೆಯಂತಹ ಪ್ರಯತ್ನ ಸಹಕಾರಿ ಎಂದರು.

ಅರೆಭಾಷಾ ಕೃತಿ ಬಿಡುಗಡೆಗೊಳಿಸಿದ ಶಾಸಕ ಎಸ್‌. ಅಂಗಾರ ಮಾತನಾಡಿ, ಜಾತಿ ಮೀರಿದ ವ್ಯಕ್ತಿಗಳಾಗಬೇಕು. ಜಾತಿಯಿಂದ ಪ್ರಾಮುಖ್ಯ ಪಡೆಯಲು ಸಾಧ್ಯವಿಲ್ಲ. ಅರೆಭಾಷೆ ಎಲ್ಲರ ಭಾಷೆ ಆಗಿ ಮನ್ನಣೆ ಗಳಿಸಲಿ ಎಂದರು.

ಸಮ್ಮೇಳನದ ಆಶಯ 
ಆಶಯ ಮಾತುಗಳನ್ನಾಡಿದ ಅಕಾಡೆಮಿ ಅಧ್ಯಕ್ಷ ಪಿ.ಸಿ. ಜಯರಾಮ, ಭಾಷಾ ಅಲ್ಪಸಂಖ್ಯಾಕ ಸ್ಥಾನಮಾನ, 8ನೇ ಪರಿಚ್ಛೇದಕ್ಕೆ ಸೇರ್ಪಡೆ, ಮಂಗಳೂರು ವಿ.ವಿ.ಯಲ್ಲಿ ಅರೆಭಾಷೆ ಅಧ್ಯಯನ ಪೀಠ, ಅರೆಭಾಷೆ ಸಂಸ್ಕೃತಿ, ಸಾಹಿತ್ಯ ಬೆಳವಣಿಗೆ ಮೊದಲಾದ ಉದ್ದೇಶ ಸಮ್ಮೇಳನದ್ದಾಗಿದೆ ಎಂದ ಅವರು ಅಕಾಡೆಮಿ ಕಾರ್ಯಚಟುವಟಿಕೆ ಕುರಿತು ವಿವರಿಸಿದರು.

ಟಾಪ್ ನ್ಯೂಸ್

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

MRPL: ಕರಾವಳಿಗೆ ಮೊದಲ “ಗ್ರೀನ್‌ ಹೈಡ್ರೋಜನ್‌’ ಘಟಕ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Langoti Man Movie Review

Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್‌ ಗಾಂಧಿ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.