ಕಲ್ಲು ಗಣಿಗಾರಿಕೆ: ಕಾರ್ಮಿಕರ ಟೆಂಟ್ಗಳ ಮೇಲೆ ಕಲ್ಲುತೂರಾಟ
Team Udayavani, Mar 3, 2019, 7:47 AM IST
ಚಿಂತಾಮಣಿ: ತಾಲೂಕಿನ ಮಡಬಳ್ಳಿ ಮತ್ತು ನೆರ್ನ್ನಕಲ್ಲು ಗ್ರಾಮಗಳ ಬಳಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಯಿಂದ ತೊಂದರೆಯಾಗುತ್ತಿದೆ ಎಂದು ಮಡಬಳ್ಳಿ, ನೆರ್ನ್ನಕಲ್ಲು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿ ಕಲ್ಲು ಗಣಿಗಾರಿಗೆ ಮಾಡುತ್ತಿದ್ದವರ ಟೆಂಟ್ಗಳ ಮೇಲೆ ಕಲ್ಲು ತೂರಿ ದಾಂಧಲೆ ನಡೆಸಿದ ಘಟನೆ ನಡೆದಿದೆ.
ಘಟನೆಯ ವಿವರ: ಹಲವು ವರ್ಷಗಳಿಂದ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದು, ಗಣಿಗಾರಿಕೆಯಿಂದ ಶಬ್ದ ಮಾಲಿನ್ಯ ಒಂದೆಡೆಯಾದರೆ, ಗ್ರಾಮಗಳ ಸುತ್ತಮುತ್ತಲು ಇರುವ ದೇವಾಲಯಗಳು ನೀರಿನ ಟ್ಯಾಂಕ್ಗಳು ಮತ್ತು ಗ್ರಾಮ ಹೊರವಲಯದಲ್ಲಿರುವ ಶಾಲೆಗಳ ಕಟ್ಟಡಗಳಿಗೆ ಸೇರಿದಂತೆ ಗ್ರಾಮದ ಹಲವು ಮನೆಗಳಿಗೆ ತೊಂದರೆಯಾಗುತ್ತಿತ್ತು.
ಇದರಿಂದ ಆತಂಕಕ್ಕೆ ಒಳಗಾಗಿದ್ದ ಸ್ಥಳೀಯರು, ಕಲ್ಲು ಗಣಿಗಾರಿಕೆ ನಿಲ್ಲಿಸುವಂತೆ ಅಧಿಕಾರಿಗಳಿಗೆ ಹಾಗೂ ಕ್ಷೇತ್ರದ ಶಾಸಕರಿಗೆ ಮನವಿ ಸಲ್ಲಿಸಲಾಗಿತ್ತಾದರೂ ಯಾವುದೇ ಪ್ರಯೋಜನವಾಗದ ಪರಿಣಾಮ ಸುತ್ತಮುತ್ತಲಿನ ಗ್ರಾಮಗಳ ನಿವಾಸಿಗಳು ಕಲ್ಲುಗಣಿಗಾರಿಕೆ ಬಳಿ ತೆರಳಿ ಕೂಲಿ ಕಾರ್ಮಿಕರ ಟೆಂಟ್ಗಳ ಮೇಲೆ ಕಲ್ಲು ತೂರಾಟ ಮಾಡಿ ಧ್ವಂಸ ಮಾಡಿದ್ದರು. ಈ ವೇಳೆ ಪರಿಸ್ಥಿತಿ ಕೈ ಮೀರುವ ವೇಳೆಗೆ ಚಿಂತಾಮಣಿ ಗ್ರಾಮಾಂತರ ಠಾಣೆ ಪೊಲೀಸರು ಗ್ರಾಮಸ್ಥರನ್ನು ಚದುರಿಸಿ ಗಲಾಟೆಯನ್ನು ಶಮನಗೊಳಿಸಿದ್ದರು.
ಘಟನೆ ಹರಿತ ಶಾಸಕ ಜೆ.ಕೆ.ಕೃಷ್ಣಾರೆಡ್ಡಿರವರು ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥರನ್ನು ಸಮಾಧಾನ ಮಾಡಿದರಾದರೂ ಸಮಾಧಾನಗೊಳ್ಳದ ಗ್ರಾಮಸ್ಥರು ಇನ್ನಷ್ಟು ರೊಚ್ಚಿಗೆದ್ದು, ಗಲಾಟೆ ಮಾಡಿದ ಪರಿಣಾಮ ಶಾಸಕರು ಸ್ಥಳದಿಂದ ಹೊರಡಲು ಪ್ರಯತ್ನಿಸಿದ ಪ್ರಸಂಗವೂ ನಡೆಯಿತು.
ಡಿಸಿ ಜೊತೆ ಮಾತುಕತೆ: ಶಾಸಕರು ಗಣಿಗಾರಿಕೆಗೆ ಪರವಾನಗಿ ಇರುವ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿದರು. ದೂರವಾಣಿ ಮೂಲಕ ಜಿಲಾಧಿಕಾರಿಗಳು ಮಾಹಿತಿ ನೀಡಿದ ನಂತರ, ಶಾಸಕರು ಪರವಾನಗಿಯನ್ನು ಶೀಘ್ರವಾಗಿ ರದ್ದು ಮಾಡಿ ಸಾರ್ವಜನಿಕರ ಹಿತಕಾಯುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಅಧಿಕಾರಿಗಳ ವಿರುದ್ಧ ಆಕ್ರೋಶ: ಸುತ್ತಲೂ ಜನವಾಸವಿರುವ ಪ್ರದೇಶಕ್ಕೆ ಯಾವ ರೀತಿ ಪರವಾನಗಿ ನೀಡಿದರು ಎಂದು ಪ್ರಶ್ನಿಸಿದ ಗ್ರಾಮಸ್ಥರು, ಅಧಿಕಾರಿಗಳು ಗಣಿಗಾರಿಕೆ ಮಾಲೀಕರ ಕಮಿಷನ್ಗೆ ಆಸೆ ಪಟ್ಟು ಪರವಾನಗಿ ನೀಡಿ ಸಾರ್ವಜನಿಕರ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಗ್ರಾಮಸ್ಥರು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಶಾಸಕರು ಮಾತನಾಡಿ, ಈ ಸ್ಥಳದಲ್ಲಿ ಕಲ್ಲು ಗಣಿಗಾರಿಕೆ ನಡೆಸಲು ಸರ್ಕಾರದಿಂದ ಪರವಾನಗಿ ಪಡೆದಿದ್ದಾರೆ. ಆದರೂ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದರಿಂದ ಜಿಲ್ಲಾಧಿಕಾರಿಗಳ ಜೊತೆ ಮಾತನಾಡಿ ಶೀಘ್ರವೇ ಕಲ್ಲು ಗಣಿಗಾರಿಕೆ ನಿಲ್ಲಿಸುವಂತೆ ಸೂಚಿಸಲಾಗಿದೆ. ಶೀಘ್ರವೇ ಸಾರ್ವಜನಿಕರಿಗೆ ಅನುಕೂಲ ಮಾಡಲಾಗುವುದು ಎಂದರು.
ಕಲ್ಲು ಗಣಿಗಾರಿಕೆ ಬಳಿ ಹಾಕಿದ್ದ ನಾಮಫಲಕವನ್ನು ನಿವಾಸಿಗಳು ಕಿತ್ತು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಅಹಿತಕರ ಘಟನೆಗಳು ಜರುಗದಂತೆ ಚಿಂತಾಮಣಿ ಗ್ರಾಮಾಂತರ ಪೊಲೀಸರು ಎಚ್ಚರಿಕೆ ವಹಿಸಿ ಕಾರ್ಯನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
Karnataka ರಾಜ್ಯದಲ್ಲಿ ಆರ್ಟಿಇ ಸೀಟಿಗಿಲ್ಲ ಕಿಮ್ಮತ್ತು!
Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ
Chikkaballapur: ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ!
Chikkaballapur: ಪೋಕ್ಸೋ ಆರೋಪಿ ಜತೆಗೆ 16 ವರ್ಷದ ಬಾಲಕಿ ಆತ್ಮಹತ್ಯೆ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ
Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್ʼ ಇಂದು ತೆರೆಗೆ
Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.