![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Mar 4, 2019, 1:00 AM IST
ಮಡಿಕೇರಿ: ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಮಾಜ ಕಾರ್ಯ ವಿಭಾಗ ಮತ್ತು ಮಕ್ಕಂದೂರು ಗ್ರಾಮ ಪಂಚಾಯತ್ ಸಹಯೋಗದಲ್ಲಿ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಮಾನಸಿಕ ಆರೋಗ್ಯ ಕಾರ್ಯಾಗಾರ ನಡೆಯಿತು.
ಗ್ರಾ.ಪಂ ಆವರಣದಲ್ಲಿ ನಡೆದ ಕಾರ್ಯಾಗಾರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮನೋವೈಜ್ಞಾನಿಕ ವಿಭಾಗದ ಪ್ರಮು ಖರಾದ ಕೆ.ಕೆ.ಶಿವಕುಮಾರ್ ಮಾತನಾಡಿ ಮಾನಸಿಕ ಆರೋಗ್ಯ ಹದಗೆಡಲು ಕಾರಣ ಮತ್ತು ತೆಗೆದುಕೊಳ್ಳಬಹುದಾದ ಮುನ್ನೆಚ್ಚರಿಕಾ ಕ್ರಮಗಳನ್ನು ವಿವರಿಸಿದರು.
ಗ್ರಾ.ಪಂ ಸದಸ್ಯ ಸತೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯ ಕ್ರಮದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಿ.ಬಿ.ಚಂಗಪ್ಪ ಹಾಗೂ ಶಿಕ್ಷಕ ಉಮೇಶ್ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಕಾರ್ಯಪ್ಪ ಕಾಲೇಜ್ನ ಸಮಾಜ ಕಾರ್ಯ ವಿಭಾಗದ ತೃತೀಯ ವರ್ಷದ ವಿದ್ಯಾರ್ಥಿಗಳಾದ ಲತಾ, ಜ್ಯೋತಿ, ದಿವ್ಯ ಹಾಗೂ ಅನಿಲ್ ನಡೆಸಿಕೊಟ್ಟರು.
You seem to have an Ad Blocker on.
To continue reading, please turn it off or whitelist Udayavani.