ನಮ್ಮದು ಕುಟುಂಬ ರಾಜಕಾರಣ ಎನ್ನುವವರದ್ದು ವಿಕೃತ ಮನಸ್ಸು: ಅನಿತಾ
Team Udayavani, Mar 5, 2019, 1:21 PM IST
ಮದ್ದೂರು: ಪುತ್ರ ನಿಖಿಲ್ ಕುಮಾರಸ್ವಾಮಿ ರಾಜಕೀಯ ಪ್ರವೇಶವಾಗುವುದು ಖಚಿತವಾದ ಬೆನ್ನಲ್ಲೇ ಕುಟುಂಬ ರಾಜಕಾರಣದ ಟೀಕಾಕಾರರಿಗೆ ಜೆಡಿಎಸ್ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದು, ಕುಟುಂಬ ರಾಜಕಾರಣ ಎಲ್ಲಿಲ್ಲ, ನಮ್ಮದು ಕುಟುಂಬ ರಾಜಕಾರಣ ಎನ್ನುವವರದ್ದು ವಿಕೃತ ಮನಸ್ಸು ಎಂದು ಕಿಡಿ ಕಾರಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅನಿತಾ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಮಗ ರಾಜಕೀಯದಲ್ಲಿಲ್ವಾ?ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಇಲ್ವಾ ಎಂದು ಪ್ರಶ್ನಿಸಿದರು.
ನಮ್ಮದು ಕುಟುಂಬ ರಾಜಕೀಯ ಎನ್ನುವ ಹಕ್ಕು ಯಾರಿಗೂ ಇಲ್ಲ. ನಾವು ಹಿಂಬಾಗಿಲ ರಾಜಕೀಯ ಮಾಡುತ್ತಿಲ್ಲ. ಜನರ ಬಳಿ ತೆರಳಿ ಮತ ಪಡೆದು ಬದ್ಧತೆಯಿಂದ ರಾಜಕೀಯ ಮಾಡುತ್ತಿದ್ದೇವೆ ಎಂದರು.
ಮಂಡ್ಯದಲ್ಲಿ ಯಾರೇ ಸ್ಪರ್ಧೆ ಮಾಡಿದರೂ ತಲೆ ಕೆಡಿಸಿಕೊಳ್ಳುವುದಿಲ್ಲ. ಚುನಾವಣೆ ಎಂದ ಮೇಲೆ ವಿರೋಧಿಗಳು ಇರಬೇಕಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ
Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ
Ratan Tata; ಅಡುಗೆಯವರು, ನಾಯಿಗೂ ವಿಲ್ ಬರೆದಿರುವ ಟಾಟಾ!
Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ
T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್ ವಿಜಯ್ಕುಮಾರ್ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.