ಉಸ್ಮಾನ್ ಖ್ವಾಜಾ, ಫಿಂಚ್ ಬ್ಯಾಟಿಂಗ್ ಪಂಚ್: ಭಾರತಕ್ಕೆ 314 ರನ್ ಗುರಿ
Team Udayavani, Mar 8, 2019, 11:48 AM IST
ರಾಂಚಿ: ಪ್ರವಾಸಿ ಆಸ್ಟ್ರೇಲಿಯಾ ಮತ್ತು ಭಾರತ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಆಸೀಸ್ ಆರಂಭಿಕ ಅಟಗಾರರ ಅದ್ಭುತ ಆಟದ ಸಹಾಯದಿಂದ ನಿಗದಿತ 50 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 313 ರನ್ ಗಳಿಸಿದೆ.
ಇಲ್ಲಿನ ಜಾರ್ಖಂಡ್ ಕ್ರಿಕೆಟ್ ಅಸೋಸಿಯೇಶನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಆಸೀಸ್ ನಾಯಕ ಆರೋನ್ ಫಿಂಚ್ ಮತ್ತು ಉಸ್ಮಾನ್ ಖ್ವಾಜಾ ಭಾರತೀಯ ಬೌಲರ್ ಗಳ ಬೆವರಿಳಿಸಿದರು. ಮೊದಲ ವಿಕೆಟ್ ಗೆ 193 ರನ್ ಗಳ ಅತ್ಯುತ್ತಮ ಜೊತೆಯಾಟ ನಡೆಸಿದ ಈ ಜೋಡಿ ತಂಡಕ್ಕೆ ಸುಭದ್ರ ಅಡಿಪಾಯ ಹಾಕಿ ಕೊಟ್ಟರು.
ನಾಯಕ ಫಿಂಚ್ 93 ರನ್ ಗಳಿಸಿ ಔಟಾಗಿ ಶತಕ ವಂಚಿತರಾದರು. ಚೈನಾಮನ್ ಸ್ಪಿನ್ನರ್ ಕುಲದೀಪ್ ಯಾದವ್ ಭಾರತಕ್ಕೆ ಮೊದಲ ಯಶಸ್ಸು ತಂದು ಕೊಟ್ಟರು. ಮತ್ತೊಬ್ಬ ಆರಂಭಿಕ ಆಟಗಾರ ಉಸ್ಮಾನ್ ಖ್ವಾಜಾ 104 ರನ್ ಗಳಿಸಿ ಏಕದಿನ ಕ್ರಿಕೆಟ್ ನಲ್ಲಿ ತಮ್ಮ ಚೊಚ್ಚಲ ಶತಕ ದಾಖಲಿಸಿ ಸಂಭ್ರಮಿಸಿದರು.
ನಂತರ ಸ್ಪೋಟಕ ಬ್ಯಾಟಿಂಗ್ ನಡೆಸಿದ ಗ್ಲೆನ್ ಮ್ಯಾಕ್ಸ್ ವೆಲ್ 47 ರನ್ ಗಳಿಸಿ ರನೌಟಾದರೆ, ಕೊನೆಯಲ್ಲಿ ಮಾರ್ಕಸ್ ಸ್ಟೊಯಿನಸ್ 31 ರನ್ ಗಳ ಅಮೂಲ್ಯ ಇನ್ನಿಂಗ್ಸ್ ಕಟ್ಟಿದರು.
ಒಂದು ಹಂತದಲ್ಲಿ ಆಸೀಸ್ 350 ರನ್ ಬಾರಿಸುವ ಲಕ್ಷಣ ಗೊಚರಿಸಿತ್ತು. ಆ ವೇಳೆ ಒಂದೇ ಓವರ್ ನಲ್ಲಿ ಶಾನ್ ಮಾರ್ಶ್ ಮತ್ತು ಪೀಟರ್ ಹ್ಯಾಂಡ್ಸ್ ಕಾಂಬ್ ವಿಕೆಟ್ ಪಡೆದ ಕುಲದೀಪ್ ಯಾದವ್ ಸ್ವಲ್ಪ ಮಟ್ಟಿನ ನಿಯಂತ್ರಣಕ್ಕೆ ಕಾರಣರಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್ ಮರೆತಿದ್ದಾರೆ: ಬಬಿತಾ ಫೋಗಾಟ್
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್ ಪುನಾರಂಭ.. ಡಿ.28ಕ್ಕೆ ಕೂಟ ಶುರು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Minchu Hulu Review: ಮಿಂಚುಹುಳು ತಂದ ಹೊಸಕಿರಣ
Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ
Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್ ಮರೆತಿದ್ದಾರೆ: ಬಬಿತಾ ಫೋಗಾಟ್
Bigg Boss: ಬಿಗ್ ಬಾಸ್ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.