ಕರ್ನಾಟಕದಿಂದ ದಿಲ್ಲಿಗೆ ಹೊಸ ವಾಯು ಮಾರ್ಗ
Team Udayavani, Mar 9, 2019, 12:30 AM IST
ಲಕ್ನೋ: ಇಲ್ಲಿನ ಹಿಂಡೋನ್ ವಾಯು ನೆಲೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸಣ್ಣ ಪ್ರಮಾಣದ ನಾಗರಿಕ ವಿಮಾನ ನಿಲ್ದಾಣವನ್ನು ಪ್ರಧಾನಿ ಮೋದಿ ಶುಕ್ರವಾರ ಲೋಕಾರ್ಪಣೆ ಗೊಳಿಸಿದರು. ಇದರಿಂದಾಗಿ, ಕರ್ನಾಟ ಕದಿಂದ ದಿಲ್ಲಿಗೆ ತೆರಳುವ ಹೊಸ ವಾಯು ಮಾರ್ಗ ತೆರೆದು ಕೊಂಡಂತಾಗಿದೆ. ಇಲ್ಲಿಂದ ಕರ್ನಾಟಕದ ಕಲಬುರಗಿ, ಹುಬ್ಬಳ್ಳಿ ಸೇರಿದಂತೆ ಕಣ್ಣೂರು, ನಾಸಿಕ್, ಶಿಮ್ಲಾ, ಜಾಮ್ನಗರ್, ಫೈಜಾ ಬಾದ್ ಹಾಗೂ ಪಿತ್ತೋರ್ಗಢಕ್ಕೆ ಸಂಪರ್ಕ ಸಿಗಲಿದೆ. ಉಡಾನ್ ಯೋಜನೆಯಡಿ, ಭಾರತೀಯ ವಾಯುಪಡೆ ಹಾಗೂ ಉತ್ತರ ಪ್ರದೇಶ ಸರಕಾರಗಳು ಜಂಟಿಯಾಗಿ, ಸುಮಾರು 40 ಕೋಟಿ ರೂ. ವೆಚ್ಚದಲ್ಲಿ ಸಿದ್ಧಪಡಿರುವ ಈ ವಿಮಾನ ನಿಲ್ದಾಣ 5,425 ಚದರ ಕಿ.ಮೀ. ವ್ಯಾಪ್ತಿಯಲ್ಲಿದ್ದು, ಪ್ರತಿ ಗಂಟೆಗೆ 300 ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯ ಹೊಂದಿದೆ.
ಸದ್ಯಕ್ಕೆ ದಿಲ್ಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಸ್ತರಣೆ ಕಾಮಗಾರಿ ಜಾರಿಯಲ್ಲಿದೆ. ಹಿಂಡೋನ್ ವಾಯು ನೆಲೆಯಿಂದ ದಿಲ್ಲಿಗೆ 35 ಕಿ.ಮೀ. ದೂರವಿದೆ. ಹಾಗಾಗಿ, ಸದ್ಯಕ್ಕೆ ಇಲ್ಲಿ ನಿರ್ಮಿಸಲಾಗಿರುವ ನಾಗರಿಕ ವಿಮಾನ ನಿಲ್ದಾಣ ಕೇವಲ ತಾತ್ಕಾಲಿಕವಾಗಿದ್ದು, 2022ರ ವೇಳೆಗೆ ದಿಲ್ಲಿ ವಿಮಾನ ನಿಲ್ದಾಣದ ವಿಸ್ತರಣೆ ಕಾಮಗಾರಿ ಪೂರ್ಣಗೊಂಡ ನಂತರ ಈ ನಿಲ್ದಾಣಕ್ಕೆ ವಿರಾಮ ಸಿಗಲಿದೆ.
ನಿಲ್ದಾಣದ ಹೈಲೈಟ್ಸ್
40 ಕೋಟಿ ರೂ. – ವಿಮಾನ ನಿಲ್ದಾಣದ ಅಂದಾಜು ವೆಚ್ಚ
5,425 ಚದರ ಕಿ.ಮೀ. – ವಿಮಾನ ನಿಲ್ದಾಣದ ವ್ಯಾಪ್ತಿ
300 ಗಂಟೆಗೆ ಮುನ್ನೂರು ಪ್ರಯಾಣಿಕರ ನಿರ್ವಹಣಾ ಸಾಮರ್ಥ್ಯ
ಕಾಶ್ಮೀರಿಗರ ಮೇಲೆ ಹಲ್ಲೆಗೆ ಪ್ರಧಾನಿ ಖಂಡನೆ
ಕಾಶ್ಮೀರಿಗರ ಮೇಲೆ ನಡೆಯುತ್ತಿರುವ ಹಲ್ಲೆ ಘಟನೆಯನ್ನು ಖಂಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಇತ್ತೀಚೆಗೆ ಲಕ್ನೋದಲ್ಲಿ ಹಣ್ಣಿನ ವ್ಯಾಪಾರಿಗಳ ಮೇಲೆ ಹಲ್ಲೆ ನಡೆಸಿದವರನ್ನು “ದಾರಿ ತಪ್ಪಿದ ಜನ’ ಎಂದು ಉಲ್ಲೇಖೀಸಿದ್ದಾರೆ. ಉತ್ತರಪ್ರದೇಶದಲ್ಲಿ ಶುಕ್ರವಾರ ಹಲವು ಕಾಮಗಾರಿಗಳಿಗೆ ಚಾಲನೆ, ಶಿಲಾನ್ಯಾಸದಂಥ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಮಾತ ನಾಡಿದ ಅವರು, ಕಾಶ್ಮೀರಿಗರ ಮೇಲೆ ಹಲ್ಲೆ ನಡೆಸುವವರ ವಿರುದ್ಧ ರಾಜ್ಯ ಸರಕಾರಗಳು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ. ಮೆಟ್ರೋ ಲೈನ್ಗೆ ಚಾಲನೆ: ಬಳಿಕ ದಿಲ್ಲಿ ಮೆಟ್ರೋದ ರೆಡ್ ಲೈನ್ನ 9.63 ಕಿ.ಮೀ. ಉದ್ದದ ದಿಲಾÒದ್ ಗಾರ್ಡನ್-ನ್ಯೂ ಬಸ್ ಅಡ್ಡಾ ಸೆಕ್ಷನ್ ಅನ್ನು ಉದ್ಘಾಟಿಸಿದ್ದಾರೆ. ಈ ವಿಭಾಗದಲ್ಲಿ ಬರುವ ಎರಡು ಸ್ಟೇಷನ್ಗಳಿಗೆ ಹುತಾತ್ಮರ ಹೆಸರುಗಳನ್ನು ಇಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ
Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ
Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ
Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್ ಅಂಬಾನಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.