ಸುಮಲತಾ ಪರ ದರ್ಶನ್‌ ಪ್ರಚಾರ ಪಕ್ಕಾ


Team Udayavani, Mar 9, 2019, 1:57 AM IST

sumalata.jpg

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್‌ ಮಂಡ್ಯದಲ್ಲಿ ಸ್ಪರ್ಧಿಸಿದರೆ ಅವರ ಪರ ಚುನಾವಣಾ ಪ್ರಚಾರಕ್ಕೆ ಯಾರೆಲ್ಲ ಕಲಾವಿದರು ಬರುತ್ತಾರೆ ಎಂಬ ಕುತೂಹಲ ಆರಂಭವಾಗಿದೆ. ಇದರ ನಡುವೆಯೇ ನಟ ದರ್ಶನ್‌, ತಾವು ಸುಮಲತಾ ಪರ ಪ್ರಚಾರ ಮಾಡುವುದಾಗಿ ನೇರವಾಗಿ ಹೇಳಿದ್ದಾರೆ. “ನಾವೆಲ್ಲಾ ಒಂದೇ ಮನೆಯವರ ತರಹ. ಅಮ್ಮನ ಪರ ನಾನು ಪ್ರಚಾರ ಮಾಡುತ್ತೇನೆ. ನನ್ನಿಂದ ಅವರಿಗೆ ಏನೆಲ್ಲಾ ಸಹಾಯ ಮಾಡಬಹುದೋ ಅದನ್ನು ಮಾಡುತ್ತೇನೆ. ನನಗೆ ರಾಜಕೀಯದ ಬಗ್ಗೆ ಹೆಚ್ಚು ಗೊತ್ತಿಲ್ಲ. ಅದರಿಂದ ತುಂಬಾ ದೂರ ಇದ್ದೇನೆ. ಆದರೆ, ಅಮ್ಮನಿಗಾಗಿ ಪ್ರಚಾರ ಮಾಡುತ್ತೇನೆ. ಅವರು ಹೇಗೆ ಹೇಳುತ್ತಾರೋ ಹಾಗೆ’ ಎನ್ನುವ ಮೂಲಕ ಸುಮಲತಾರ ರಾಜಕೀಯ ಎಂಟ್ರಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ. ಅದಕ್ಕೆ

ಪೂರಕವಾಗಿ ಸುಮಲತಾ ಕೂಡಾ ಪ್ರತಿಕ್ರಿಯಿಸಿ,”ದರ್ಶನ್‌ ನನ್ನ ದೊಡ್ಡ ಮಗ ಇದ್ದ ಹಾಗೆ’. “ನಾನು ಅಭಿಷೇಕ್‌ನಿಂದ ಏನನ್ನು ನಿರೀಕ್ಷಿಸುತ್ತೇನೋ ಅದನ್ನೇ ನಿನ್ನಿಂದ ನಿರೀಕ್ಷಿಸುತ್ತೇನೆ ಎಂದಾಗ, ಅಮ್ಮ ನೀವು ಅಭಿಷೇಕ್‌ನಿಂದ ನಿರೀಕ್ಷಿಸುವುದಕ್ಕಿಂತ ಎರಡು ಪಟ್ಟು ಹೆಚ್ಚನ್ನು ನನ್ನಿಂದ ನಿರೀಕ್ಷೆ ಮಾಡಿ ಎನ್ನುತ್ತಾನೆ’ ಎಂದು ತಿಳಿಸಿದ್ದಾರೆ.

ದರ್ಶನ್‌ ಇದ್ದರೆ ಸಾಕಲ್ವ?: ಇನ್ನು, ನಟ ಸುದೀಪ್‌ ಅವರು ಸುಮಲತಾ ಪರ ಪ್ರಚಾರ ಕೈಗೊಳ್ಳುತ್ತಾರಾ ಎಂಬ ಪ್ರಶ್ನೆಯೂ ಎದ್ದಿದೆ. ಆದರೆ, ಈ ಪ್ರಶ್ನೆಗೆ ಸುದೀಪ್‌ ನೇರವಾಗಿ ಉತ್ತರ ನೀಡಲಿಲ್ಲ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಸುದೀಪ್‌, “ದರ್ಶನ್‌ ಒಬ್ಬರಿದ್ದರೆ ಸಾಕು. ಬೇರೆ ಯಾರೂ ಹೋಗುವ ಅಗತ್ಯವಿಲ್ಲ ಎಂದು ನನಗನಿಸುತ್ತದೆ. ಅದಕ್ಕಿಂತ ಹೆಚ್ಚಾಗಿ ಮಂಡ್ಯದಲ್ಲಿ ಅಂಬರೀಶ್‌ ಅವರ ಹೆಸರು ತುಂಬಾ ದೊಡ್ಡದು. ಆ ಹೆಸರೇ ಸಾಕು. ಜೊತೆಗೆ, ದರ್ಶನ್‌ ಬೇರೆ ಇರುತ್ತಾರೆ. ನನಗೆ ರಾಜಕೀಯದಲ್ಲಿ ಅಷ್ಟಾಗಿ ಆಸಕ್ತಿ ಇಲ್ಲ. ಜೊತೆಗೆ, ಇಲ್ಲಿಯವರೆಗೆ ಯಾರೂ ಕರೆದಿಲ್ಲ ಕೂಡಾ. ನನ್ನನ್ನು ನಂಬಿ ಒಂದಷ್ಟು ಮಂದಿ ನಿರ್ಮಾಪಕರಿದ್ದಾರೆ. ಚಿತ್ರೀಕರಣ ಕೂಡಾ ನಡೆಯುತ್ತಿದೆ. ಆ ಕಡೆ ಕೂಡಾ ನಾನು ನೋಡಬೇಕು’ ಎನ್ನುವ ಮೂಲಕ ಪ್ರಚಾರದಲ್ಲಿ ಭಾಗಿಯಾಗುವ ಬಗ್ಗೆ ನಿಖರ ಉತ್ತರ ಕೊಡದೆ ಜಾರಿಕೊಂಡರು. ಜೊತೆಗೆ, ನಟ ಯಶ್‌ ಕೂಡಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಯಶ್‌ ಅವರನ್ನು ಸಂಪರ್ಕಿ ಸಿದಾಗ ಅವರಿಂದ ಯಾವುದೇ ಪ್ರತಿಕ್ರಿಯೆ ಬರಲಿಲ್ಲ.

ಟಾಪ್ ನ್ಯೂಸ್

“Koragajja” Movie producer gifted a car to the director

Kannada Film; ʼಕೊರಗಜ್ಜʼ ನಿರ್ದೇಶಕರಿಗೆ ಕಾರ್‌ ಗಿಫ್ಟ್ ಮಾಡಿದ ನಿರ್ಮಾಪಕ

3-sedam

Sedam: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ; ಆರೋಪಿ ಬಂಧನ

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

4-chikkamagaluru

Chikkamagaluru: ಬೆಳ್ಳಂ ಬೆಳಗ್ಗೆ ಒಂಟಿ ಸಲಗದ ಹಾವಳಿ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

“Koragajja” Movie producer gifted a car to the director

Kannada Film; ʼಕೊರಗಜ್ಜʼ ನಿರ್ದೇಶಕರಿಗೆ ಕಾರ್‌ ಗಿಫ್ಟ್ ಮಾಡಿದ ನಿರ್ಮಾಪಕ

3-sedam

Sedam: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ; ಆರೋಪಿ ಬಂಧನ

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.