ಕಿಚ್ಚು’ ಹಚ್ಚಿದ ರೇವಣ್ಣ “ಸ್ಪೀಚ್‌’


Team Udayavani, Mar 10, 2019, 1:26 AM IST

revanna.jpg

ಗಂಡ ಸತ್ತು ಒಂದೆರಡು ತಿಂಗಳಾಗಿಲ್ಲ. ಸುಮಲತಾಗೆ ರಾಜಕೀಯ ಬೇಕಿತ್ತಾ’ ಎಂಬ ಲೋಕೋಪಯೋಗಿ ಸಚಿವ
ಎಚ್‌.ಡಿ.ರೇವಣ್ಣ ಹೇಳಿಕೆಗೆ ರಾಜಕೀಯ, ಸಾಮಾಜಿಕ ವಲಯದಿಂದ ತೀವ್ರ ಟೀಕೆ ವ್ಯಕ್ತವಾಗಿದ್ದು, ವಿವಿಧ ರಾಜಕೀಯ ಪಕ್ಷಗಳ ನಾಯಕರು ಅವರ ಹೇಳಿಕೆಯನ್ನು ಕಟು ಶಬ್ದಗಳಲ್ಲಿ ಟೀಕಿಸಿದ್ದಾರೆ. ರಾಜಕೀಯ ನಾಯಕರ “ಟೀಕಾ ಪ್ರಹಾರ’ದ ಝಲಕ್‌ ಇಲ್ಲಿದೆ.

ಜೆಡಿಎಸ್‌ ಚಿಹ್ನೆಯನ್ನೇ ಬದಲಿಸಿಕೊಳ್ಳಲಿ
ಸುಮಲತಾ ಅವರು ಸಹೋದರಿ ಸಮಾನ. ಅವರ ಕುರಿತು ಸಚಿವ ರೇವಣ್ಣ ಕೀಳುಮಟ್ಟದಲ್ಲಿ ಮಾತನಾಡಬಾರದಿತ್ತು. ಜೆಡಿಎಸ್‌ ಪಕ್ಷದ ಚಿಹ್ನೆ ತೆನೆಹೊತ್ತ ಮಹಿಳೆಯಾಗಿದೆ. ಮಹಿಳೆಯರಿಗೆ ಗೌರವ ಕೊಡಲಾಗದಿದ್ದರೆ ಜೆಡಿಎಸ್‌ ಪಕ್ಷದ ಚಿಹ್ನೆಯನ್ನು ಬದಲಿಸಿಕೊಳ್ಳಲಿ. ಈ ಕೆಲಸವನ್ನು ದೇವೇಗೌಡ ಮತ್ತು ರೇವಣ್ಣ ಮೊದಲು ಮಾಡಲಿ. ರೇವಣ್ಣ ಕೂಡಲೇ ಸುಮಲತಾ ಅವರಲ್ಲಿ ಕ್ಷಮೆ ಕೋರಲಿ. ಸುಮಲತಾ ಬಿಜೆಪಿಗೆ ಬಂದರೆ ಸ್ವಾಗತ. ಆದರೆ, ಅವರಿಗೆ ಲೋಕಸಭೆಗೆ ಟಿಕೆಟ್‌ ಖಚಿತಪಡಿಸುವುದು ಪಕ್ಷದ ಹೈಕಮಾಂಡ್‌ಗೆ ಬಿಟ್ಟ ವಿಚಾರ.
● ಬಾಗಲಕೋಟೆಯಲ್ಲಿ ಕೆ.ಎಸ್‌.ಈಶ್ವರಪ್ಪ ನೀಡಿದ ಹೇಳಿಕೆ

ರೇವಣ್ಣ ಪರ ನಾನು ಕ್ಷಮೆಯಾಚಿಸುವೆ
ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವ ಎಚ್‌.ಡಿ.ರೇವಣ್ಣ ಅವರ ಬಾಯಿಂದ ಮಹಿಳೆ ಯರ ಬಗ್ಗೆ ಆ ರೀತಿ ಹೇಳಿಕೆ ನಿರೀಕ್ಷಿಸಿರಲಿಲ್ಲ. ಅವರ ಪರವಾಗಿ ನಾನು ಕ್ಷಮೆಯಾಚಿಸುತ್ತೇನೆ. ನಮ್ಮ ಪಕ್ಷದ ಚಿಹ್ನೆಯೇ ಮಹಿಳೆ ಚಿತ್ರವಾಗಿದೆ. ಅಲ್ಲದೆ,
ಪಕ್ಷ ಮಹಿಳೆಯರಿಗೆ ಅಪಾರ ಗೌರವ ನೀಡುತ್ತದೆ. ಆದರೆ, ಸುಮಲತಾ ಅವರ ಬಗ್ಗೆ ಆ ರೀತಿ ಹಗುರವಾಗಿ ಮಾತನಾಡಿರುವುದು ಬೇಸರ ಮೂಡಿಸಿದೆ.
● ರಾಯಚೂರಿನಲ್ಲಿ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ನೀಡಿದ ಹೇಳಿಕೆ.

ಸುಮಲತಾ ಅವರು ಕನ್ನಡದ ಮಗಳು, ಕನ್ನಡದ ಸೊಸೆ. ಅವರ ರಾಜಕೀಯ ಪ್ರವೇಶದ ಬಗ್ಗೆ ರೇವಣ್ಣ ಅವರು ನಿಕೃಷ್ಟವಾಗಿ ಮಾತನಾಡುವುದು ಸರಿಯಲ್ಲ. ರೇವಣ್ಣ ಅವರ ಹೇಳಿಕೆಯನ್ನು ನೋಡಿದರೆ ಅಂಬರೀಶ್‌ ನಿಧನರಾದಾಗ ರೇವಣ್ಣ ಸುರಿಸಿದ್ದು ಮೊಸಳೆ ಕಣ್ಣೀರೇ ಎಂಬ ಅನುಮಾನ ಬರುತ್ತದೆ. ರೇವಣ್ಣ ಅವರು ತಕ್ಷಣ ಕ್ಷಮೆಯಾಚಿಸಿ, ತಮ್ಮ ಹೇಳಿಕೆಯನ್ನು ವಾಪಸ್‌ ಪಡೆಯಬೇಕು.
● ಶೋಭಾ ಕರಂದ್ಲಾಜೆ, ಸಂಸದೆ

ರೇವಣ್ಣ ವೈಯಕ್ತಿಕವಾಗಿ ಸುಮಲತಾ ಕುರಿತು ಆ ರೀತಿ ಟೀಕೆ ಮಾಡಬಾರದಿತ್ತು. ಕಾಂಗ್ರೆಸ್‌ ಮೇಲಿನ ಅಭಿಮಾನದಿಂದ
ಸುಮಲತಾ ಕೊನೆಯವರೆಗೆ ಟಿಕೆಟ್‌ಗಾಗಿ ಕಾಯುತ್ತಿದ್ದಾ ರೆ. ಆದರೆ, ಮಂಡ್ಯ, ಹಾಸನ ಜೆಡಿಎಸ್‌ ಪಾಲಾಗಿವೆ. ಹೀಗಾಗಿ,
ಕಾಂಗ್ರೆಸ್‌ನಿಂದ ಅಲ್ಲಿ ಅಭ್ಯರ್ಥಿಗಳಿಗೆ ಟಿಕೆಟ್‌ ಕೊಡುವುದು ಕಷ್ಟ.

● ಆರ್‌.ವಿ.ದೇಶಪಾಂಡೆ, ಕಂದಾಯ ಸಚಿವ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.