ಕೆಲಸ ಆಪ್ ನದ್ದು ಪ್ರಚಾರ ಕಾಂಗ್ರೆಸ್ ನದ್ದು!
Team Udayavani, Mar 13, 2019, 9:48 AM IST
ನವದೆಹಲಿ: ದೇಶದೆಲ್ಲೆಡೆ ಮಹಾಚುನಾವಣೆಯ ಕಾವು ಏರತೊಡಗಿದೆ. ಇದಕ್ಕೆ ಪೂರಕವಾಗಿ ವಿವಿಧ ರಾಜಕೀಯ ಪಕ್ಷಗಳು ಸಾಮಾಜಿಕ ಜಾಲತಾಣಗಳ ಮೂಲಕ ಯುವ ಮತದಾರರನ್ನು ಸೆಳೆಯಲು ಭರ್ಜರಿ ತಯಾರಿಯನ್ನು ನಡೆಸುತ್ತಿವೆ. ಅದಕ್ಕಾಗಿ ತಮ್ಮ ಪಕ್ಷದ ಸಾಧನೆಗಳನ್ನು ಹಾಗೂ ಎದುರಾಳಿ ಪಕ್ಷದ ವೈಫಲ್ಯಗಳನ್ನು ತೋರಿಸುವ ಚಿತ್ರಗಳನ್ನು, ವಿಡಿಯೋಗಳನ್ನು ತಮ್ಮ ತಮ್ಮ ಪಕ್ಷದ ಅಧಿಕೃತ ಸಾಮಾಜಿಕ ಜಾಲತಾಣ ಅಕೌಂಟ್ ಗಳಲ್ಲಿ ಪೋಸ್ಟ್ ಮಾಡುವ ಮೂಲಕ ಯುವ ಮತದಾರರಿಗೆ ಹತ್ತಿರವಾಗುವ ಪ್ರಯತ್ನವನ್ನು ಎಲ್ಲಾ ಪಕ್ಷಗಳೂ ಪ್ರಾರಂಭಿಸಿವೆ.
ಆದರೆ ದೆಹಲಿ ಕಾಂಗ್ರೆಸ್ ಘಟಕವು ಈ ರೀತಿಯ ಪ್ರಚಾರ ಪೋಸ್ಟ್ ನಲ್ಲಿ ಒಂದು ಎಡವಟ್ಟು ಮಾಡಿಕೊಂಡುಬಿಟ್ಟಿದೆ. ‘ದೆಹಲಿಯಲ್ಲಿ ಶಿಕ್ಷಣಕ್ಕೆ ಮಹತ್ವ ನೀಡಿದ್ದು ಕಾಂಗ್ರೆಸ್ ಸರಕಾರ’ ಎಂಬ ಶೀರ್ಷಿಕೆಯಲ್ಲಿ ಮಾಡಿರುವ ಟ್ವೀಟ್ ನಲ್ಲಿ ಆಪ್ ಸರಕಾರದ ಅವಧಿಯಲ್ಲಿ ನವೀಕರಣಗೊಂಡ ಶಾಲಾ ತರಗತಿಯ ಚಿತ್ರವೊಂದನ್ನು ಹಾಕುವ ಮೂಲಕ ‘ಕೈ’ ಪಕ್ಷವು ಎಡವಟ್ಟು ಮಾಡಿಕೊಂಡಿದೆ. ‘ಕಾಂಗ್ರೆಸ್ ನೇ ಹಿ ದಿಲ್ಲೀ ಮೆ ಶಿಕ್ಷಾ ಕೋ ಪ್ರಾಥಮಿಕ್ತಾ’ ಎಂಬ ಶೀರ್ಷಿಕೆಯೊಂದಿಗೆ ದೆಹಲಿ ಪ್ರಾದೇಶಿಕ ಕಾಂಗ್ರೆಸ್ ಸಮಿತಿಯು ಸ್ಮಾರ್ಟ್ ತರಗತಿಯೊಂದರಲ್ಲಿ ವಿದ್ಯಾರ್ಥಿಗಳು ಪಾಠ ಕೇಳುತ್ತಿರುವ ಫೊಟೋವನ್ನು ಪೋಸ್ಟ್ ಮಾಡಿತ್ತು. ಆದರೆ ಈ ಚಿತ್ರ 2017ರಲ್ಲಿ ತೆಗೆಯಲಾಗಿದ್ದು ಎಂದು ಗೊತ್ತಾಗಿದೆ.
ಆಪ್ ಸರಕಾರದಲ್ಲಿ ಶಿಕ್ಷಣ ಮಂತ್ರಿಯಾಗಿರುವ ಮನೀಶ್ ಸಿಸೋಡಿಯಾ ಅವರ ಪರಿಕಲ್ಪನೆಯಲ್ಲಿ ದೆಹಲಿಯ ಸರಕಾರೀ ಶಾಲೆಗಳಿಗೆ ಹೊಸತನವನ್ನು ನೀಡುವ ಉದ್ದೇಶದಿಂದ ಈ ರೀತಿಯ ಮಾದರಿ ತರಗತಿಗಳನ್ನು ನಿರ್ಮಾಣ ಮಾಡಲಾಗಿತ್ತು. ಈ ಆಧುನೀಕರಣ ಯೋಜನೆಯಡಿಯಲ್ಲಿ ನಿರ್ಮಿಸಲಾಗುವ ಶಾಲೆಗಳಲ್ಲಿ ಯೋಗ ತರಗತಿಗಳು, ಸಂಗೀತ ತರಬೇತಿ ಕೋಣೆಗಳು, ಗಣಿತ ಮತ್ತು ವಿಜ್ಞಾನ ಪ್ರಯೋಗಾಲಯಗಳನ್ನು ನಿರ್ಮಿಸಲಾಗಿದೆ. ಈ ಕುರಿತಾದ ವರದಿಯೊಂದು ಪ್ರಮುಖ ಆಂಗ್ಲ ದಿನಪತ್ರಿಕೆಯೊಂದರಲ್ಲಿ ಪ್ರಕಟವೂ ಆಗಿತ್ತು. ಈ ಕುರಿತಾಗಿ ಆಮ್ ಆದ್ಮಿ ಪಕ್ಷದ ನಾಯಕಿ ಮತ್ತು 2018ರವರೆಗೆ ಮನೀಶ್ ಸಿಸೋಡಿಯಾ ಅವರಿಗೆ ಸಲಹೆಗಾರರಾಗಿ ಕೆಲಸ ಮಾಡಿದ್ದ ಅತೀಶಿ ಅವರು ಟ್ವೀಟ್ ಮಾಡಿದ್ದಾರೆ. ಮತ್ತು ದೆಹಲಿಯಲ್ಲಿ ಆಪ್ ಮಾಡಿರುವ ಶಿಕ್ಷಣ ಕ್ಷೇತ್ರದಲ್ಲಿನ ಸುಧಾರಣೆಗಳನ್ನು ಕಾಂಗ್ರೆಸ್ ತನ್ನದೆಂದು ಹೇಳಿಕೊಂಡು ತಿರುಗಾಡುತ್ತಿದೆ ಎಂದು ಅವರು ಕಾಂಗ್ರೆಸ್ ಮುಖಂಡರ ಕಾಲೆಳೆದಿದ್ದಾರೆ.
Wah! .@DelhiCongress is using a photo of the new classrooms that have been built by @AamAadmiParty in their publicity material! https://t.co/FWh3IWGJpX
— Atishi (@AtishiAAP) March 12, 2019
ಈ ಹಿಂದಿನ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಶಾಲೆಗಳಿಗೆ ಅಗತ್ಯವಿದ್ದ ಡೆಸ್ಕ್ ಗಳನ್ನು ತಿಹಾರ್ ಜೈಲಿನಿಂದ ತರಿಸಿಕೊಳ್ಳಲಾಗುತ್ತಿತ್ತು. ಆದರೆ ಅಲ್ಲಿಂದ ಬೇಡಿಕೆಗೆ ತಕ್ಕಷ್ಟು ಪೂರೈಕೆ ಆಗುತ್ತಿರಲಿಲ್ಲವಾದ ಕಾರಣ ಆಪ್ ಸರಕಾರವು 2016ರಲ್ಲಿ ಟೆಂಡರ್ ಮೂಲಕ ನೀಲಿ ಬಣ್ಣದ ಡೆಸ್ಕ್ ಗಳನ್ನು ಸರಕಾರಿ ಶಾಲೆಗಳಿಗೆ ಪೂರೈಸಿತ್ತು. ಅದೇ ಚಿತ್ರವನ್ನು ಇದೀಗ ಕಾಂಗ್ರೆಸ್ ತನ್ನ ಸಾಧನೆಯ ಪ್ರಚಾರಕ್ಕೆ ಬಳಸಿಕೊಳ್ಳುತ್ತಿದೆ. ಇನ್ನು ದೆಹಲಿ ಪ್ರಾದೇಶಿಕ ಕಾಂಗ್ರೆಸ್ ಸಮಿತಿಯ ಈ ಟ್ವೀಟ್ ಅನ್ನು ದೇಶಾದ್ಯಂತ ವಿವಿಧ ಭಾಗಗಳ ಕಾಂಗ್ರೆಸ್ ನಾಯಕರು ಮತ್ತು ವಿವಿಧ ಐಟಿ ಸೆಲ್ ಗಳು ಶೇರ್ ಮಾಡಿಕೊಂಡಿದ್ದಾರೆ.
ಫೊಟೋ ಕೇವಲ ಸಾಂಕೇತಿಕವಷ್ಟೇ:
ತಮ್ಮ ಈ ಟ್ವೀಟ್ ಗೆ ಸ್ಪಷ್ಟನೆ ನೀಡಿರುವ ಕಾಂಗ್ರೆಸ್, ತಾನು ಬಳಸಿರುವ ಫೊಟೋ ಕೇವಲ ಸಾಂಕೇತಿಕವಷ್ಟೇ. ಶೀಲಾ ದೀಕ್ಷಿತ್ ಅವಧಿಯಲ್ಲಿ ದೆಹಲಿಯಲ್ಲಿ ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಬಹಳಷ್ಟು ಯೋಜನೆಗಳನ್ನು ಹಮ್ಮಿಕೊಳ್ಳಲಾಗಿತ್ತು ಮತ್ತು ಕಾಂಗ್ರೆಸ್ ಆಡಳಿತ ಅವಧಿಯಲ್ಲಿ ಶಿಕ್ಷಣಕ್ಕೆ ಪ್ರಮುಖ ಆದ್ಯತೆ ನೀಡಲಾಗಿತ್ತು ಎಂಬುದನ್ನು ಹೇಳುವುದಷ್ಟೇ ನಮ್ಮ ಉದ್ದೇಶವಾಗಿತ್ತು ಎಂದು ಕಾಂಗ್ರೆಸ್ ಐಟಿ ವಿಭಾಗದ ಹಿರಿಯ ಸದಸ್ಯರೊಬ್ಬರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!
Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ
J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ
ಗಂಟಲಲ್ಲಿ ಇಡ್ಲಿ ಸಿಲುಕಿ ವ್ಯಕ್ತಿ ಮೃತ್ಯು… ಜೀವಕ್ಕೆ ಮುಳುವಾದ ಇಡ್ಲಿ ತಿನ್ನುವ ಸ್ಪರ್ಧೆ
Fake Visa: ನಕಲಿ ವೀಸಾ ಉತ್ಪಾದನೆಯ ಫ್ಯಾಕ್ಟರಿ ಪತ್ತೆ-ಮೂವರು ಆರೋಪಿಗಳ ಬಂಧನ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.