ಚಿಕ್ಕೋಡಿ ಟಿಕೆಟ್‌ಗೆ ಹುಕ್ಕೇರಿ ನಿರಾಕರಣೆ?


Team Udayavani, Mar 16, 2019, 1:54 AM IST

congress.jpg

ಬೆಳಗಾವಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಮನೆಯಲ್ಲಿ ಈಗ ಅಸಮಾಧಾನದ ಹೊಗೆ ದಟ್ಟವಾಗಿದೆ. ರಾಜ್ಯದ ಬೇರೆ ಜಿಲ್ಲೆಗಳಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿಯಲ್ಲಿ ಟಿಕೆಟ್‌ಗಾಗಿ ಭರ್ಜರಿ ಪೈಪೋಟಿ ನಡೆದಿದ್ದರೆ ಈ ಕ್ಷೇತ್ರದಲ್ಲಿ “ನನಗೆ ಟಿಕೆಟ್‌ ಬೇಡ’ ಎಂದು ಹಾಲಿ ಸಂಸದ, ಕಾಂಗ್ರೆಸ್‌ನ ಪ್ರಕಾಶ ಹುಕ್ಕೇರಿ ಪಕ್ಷದ ನಾಯಕರ ಮುಂದೆ ಹೇಳಿರುವುದು ಅನೇಕ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಕಳೆದ ಬಾರಿ ಒಲ್ಲದ ಮನಸ್ಸಿನಿಂದ ಲೋಕಸಭೆಗೆ ಸ್ಪರ್ಧೆ ಮಾಡಿದ್ದ ಪ್ರಕಾಶ ಹುಕ್ಕೇರಿ ಈಗ ಏಕಾಏಕಿ ಸ್ಪರ್ಧೆ ಮಾಡಲು ಹಿಂದೇಟು ಹಾಕುತ್ತಿರುವುದು ಏಕೆ ಎಂಬ ಪ್ರಶ್ನೆ ಕ್ಷೇತ್ರದಲ್ಲಿ ಎದ್ದಿದೆ. ಈ ಹಿಂದೆ ತಾವೇ ಹೇಳಿದಂತೆ ಪ್ರಕಾಶ ಹುಕ್ಕೇರಿ ಕಾಂಗ್ರೆಸ್‌ ಬಿಡಲು ವೇದಿಕೆ ಸಿದ್ಧ ಮಾಡಿಕೊಂಡಿದ್ದಾರೆಯೇ ಎಂಬ ಚರ್ಚೆಗಳೂ ನಡೆದಿದೆ.

ಚುನಾವಣೆಯ ಸ್ಪರ್ಧೆಯ ಹಿನ್ನೆಲೆಯಲ್ಲಿ ಶನಿವಾರ ಪ್ರಕಾಶ ಹುಕ್ಕೇರಿ ತಮ್ಮ ಕ್ಷೇತ್ರದಲ್ಲಿ ಬೆಂಬಲಿಗರ ಸಭೆ ಕರೆದಿದ್ದು ಈ ಸಭೆ ಮುಂದಿನ ನಡೆಯ ದೃಷ್ಟಿಯಿಂದ ಬಹಳ ಮಹತ್ವ ಪಡೆದುಕೊಂಡಿದೆ. ಬೆಂಗಳೂರಿನಲ್ಲಿ ಗುರುವಾರ ನಡೆದ ಬೆಳಗಾವಿ ಜಿಲ್ಲಾ ಮುಖಂಡರ ಸಭೆಯಲ್ಲಿ ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳ ಮಾಜಿ ಶಾಸಕರು ಸಿದ್ದರಾಮಯ್ಯ ಅವರ ಮುಂದೆ ನೇರವಾಗಿಯೇ  ಪ್ರಕಾಶ ಹುಕ್ಕೇರಿ ವಿರುದಟಛಿ ಹರಿಹಾಯ್ದಿದ್ದಾರೆ. ಇದರಿಂದ ತೀವ್ರಆತಂಕಗೊಂಡಿರುವ ಪ್ರಕಾಶ ಹುಕ್ಕೇರಿ ಸ್ಪರ್ಧೆ ಮಾಡಲು ಹಿಂದೇಟು ಹಾಕಿದ್ದಾರೆ ಎನ್ನಲಾಗುತ್ತಿದೆ.

ಪ್ರಕಾಶ ಹುಕ್ಕೇರಿ ಸಂಸದರಾದಾಗಿನಿಂದ ನಮ್ಮ ಯಾರ ಮಾತೂ ಕೇಳುತ್ತಿಲ್ಲ. ನಮಗೆ ಬೆಲೆ ಇಲ್ಲದಂತಾಗಿದೆ. ಎಲ್ಲವೂ ತಾವು ಹೇಳಿದ ಹಾಗೆ ನಡೆಯಬೇಕು ಎಂಬ ಧೋರಣೆಯನ್ನು ಹುಕ್ಕೇರಿ ತಾಳಿದ್ದಾರೆ. ಸಂಸದರ ನಿಧಿಯ ಹಣವನ್ನೆಲ್ಲ ಹಾಗೂಕೇಂದ್ರದ ಯೋಜನೆಗಳನ್ನು ಕೇವಲ ಚಿಕ್ಕೋಡಿ ಸದಲಗಾಕ್ಕೆ ವಿನಿಯೋಗ ಮಾಡಿದ್ದಾರೆ ಎಂಬುದು ಮಾಜಿ ಶಾಸಕರ ಆರೋಪ. ಚಿಕ್ಕೋಡಿ ಭಾಗದ ಕಾಂಗ್ರೆಸ್‌ ನಾಯಕರುತಮ್ಮ ವಿರುದಟಛಿ ಮುನಿಸಿಕೊಂಡಿರುವದನ್ನು ಗಮನಿಸಿರುವ ಪ್ರಕಾಶ ಹುಕ್ಕೇರಿ ಬೆಳಗಾವಿಗೆ ಲೋಕಸಭೆ ಟಿಕೆಟ್‌ ಬಲವಾದ ಬೇಡಿಕೆ ಇಡಬೇಕು. ಅದಾಗದಿದ್ದರೆ ಚಿಕ್ಕೋಡಿಯಿಂದಲೇ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಬೇಕು ಎಂಬ ಆಲೋಚನೆಯಲ್ಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಬೆಳಗಾವಿ ಜಿಲ್ಲೆಯಲ್ಲಿ ಲಿಂಗಾಯತ ಸಮಾಜದಿಂದ ಪಕ್ಷದಲ್ಲಿ ಒಬ್ಬ ಪ್ರಭಾವಿ ನಾಯಕರನ್ನು ಬೆಳೆಸಬೇಕು ಎಂಬ ಕಾರಣದಿಂದ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಇದುವರೆಗೆ ಯಾರ ಹೆಸರನ್ನೂ ಘೋಷಣೆ ಮಾಡಿಲ್ಲ. ಯಾರಿಗೂ ಸ್ಪಷ್ಟ ಭರವಸೆ ನೀಡಿಲ್ಲ. ಹೀಗಾಗಿ ಪ್ರಕಾಶ ಹುಕ್ಕೇರಿ ಅವರ ಹೆಸರೂ ಸಹ ಪಕ್ಷದ ಆಕಾಂಕ್ಷಿಗಳ ಪಟ್ಟಿಯ ರೇಸ್‌ನಲ್ಲಿದೆ ಎನ್ನಲಾಗುತ್ತಿದೆ.

ಪರ್ಯಾಯ ಅಭ್ಯರ್ಥಿಗಳು
ಕಾಂಗ್ರೆಸ್‌ನ ಈಗಿನ ಬೆಳವಣಿಗೆ ಪ್ರಕಾರ ಪ್ರಕಾಶ ಹುಕ್ಕೇರಿ ಚಿಕ್ಕೋಡಿ ಕ್ಷೇತ್ರದಿಂದ ಸ್ಫರ್ಧೆ ಮಾಡುವುದು ಅನುಮಾನ. ಒಂದು ವೇಳೆ ಅಂತಹ ಪ್ರಸಂಗ ಬಂದರೆ ಅವರಿಗೆ ಪರ್ಯಾಯವಾಗಿ ಕಾಂಗ್ರೆಸ್‌ ಪಕ್ಷದ ಚಿಕ್ಕೋಡಿ ಜಿಲ್ಲಾ ಘಟಕದ ಅಧ್ಯಕ್ಷ ಲಕ್ಷ್ಮಣರಾವ್‌ ಚಿಂಗಳೆ ಹಾಗೂ ಮಾಜಿ ಶಾಸಕ ಮತ್ತು ಹಿರಿಯ ಮುಖಂಡ ಎ.ಬಿ. ಪಾಟೀಲ ಆವರನ್ನು ಪಕ್ಷದ ನಾಯಕರು ಅಂತಿಮ ಪಟ್ಟಿಯಲ್ಲಿ ಸೇರ್ಪಡೆ ಮಾಡಿದ್ದಾರೆ. ಪ್ರಕಾಶ ಹುಕ್ಕೇರಿ ಹೊರತುಪಡಿಸಿ ಬೇರೆ ಯಾರನ್ನೇ ಅಭ್ಯರ್ಥಿಯನ್ನಾಗಿ ಮಾಡಿದರೂ ಚುನಾವಣೆಯ ಲ್ಲಿ ಪೂರ್ಣ ಪ್ರಮಾಣದಲ್ಲಿ ಕೆಲಸ ಮಾಡುತ್ತೇವೆ ಎಂದು ಮಾಜಿ ಶಾಸಕರು ಪಕ್ಷದ ವರಿಷ್ಠರಿಗೆಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೇಶವಆದಿ

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.