“ಸಾಗರ ಸಂಪದ’ದಲ್ಲಿ  ಅಗ್ನಿ ಆಕಸ್ಮಿಕ


Team Udayavani, Mar 17, 2019, 3:09 AM IST

q-21.jpg

ಪಣಂಬೂರು: ಪಣಂಬೂರು ಬಂದರಿನಿಂದ 40 ನಾಟಿಕಲ್‌ ಮೈಲು ದೂರದಲ್ಲಿ ಸಮುದ್ರ ಸಂಶೋಧನೆಯಲ್ಲಿ ತೊಡಗಿದ್ದ “ಸಾಗರ ಸಂಪದ’ ಹಡಗಿನಲ್ಲಿ ಶುಕ್ರವಾರ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ತಟರಕ್ಷಕ ಪಡೆ ತುರ್ತು ರಕ್ಷಣಾ ಕಾರ್ಯ ನಡೆಸಿ 16 ವಿಜ್ಞಾನಿಗಳು, 30 ಸಿಬಂದಿಯನ್ನು ರಕ್ಷಿಸಿದೆ. ಜತೆಗೆ ಹಡಗನ್ನೂ ಸುರಕ್ಷಿತವಾಗಿ ನವಮಂಗಳೂರು ಬಂದರಿಗೆ ಕರೆ ತಂದಿದೆ.

ಭೂವಿಜ್ಞಾನ ಖಾತೆಯ ಅಧೀನದಲ್ಲಿರುವ “ಸಾಗರ ಸಂಪದ’ ಸಾಗರ ಸಂಶೋಧನ ಹಡಗಿ (ಒಆರ್‌ವಿ)ನ ಸಿಬಂದಿ ವಾಸ್ತವ್ಯ ಪ್ರದೇಶದಲ್ಲಿ ಶುಕ್ರವಾರ ತಡರಾತ್ರಿ 10 ಗಂಟೆಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತ್ತು. ಹಡಗಿನ ಸಿಬಂದಿಗೆ ಅದನ್ನು ಶಮನಿಸಲು ಸಾಧ್ಯವಾಗದೆ ಮುಂಬಯಿಯ ಮರೈನ್‌ ರೆಸ್ಕೂಕೊ ಆರ್ಡಿನೇಶನ್‌ ಸೆಂಟರ್‌ಗೆ ಮಾಹಿತಿ ನೀಡಲಾಗಿತ್ತು.

ಅಲ್ಲಿಂದ ಕೋಸ್ಟ್‌ಗಾರ್ಡ್‌ನ ಪಣಂಬೂರು ಕಚೇರಿಗೆ ತುರ್ತು ರಕ್ಷಣಾ ಸಂದೇಶ ರವಾನೆಯಾಗಿದ್ದು, ತತ್‌ಕ್ಷಣ ಐಸಿಜಿಎಸ್‌ ವಿಕ್ರಮ್‌ ಮತ್ತು ಐಸಿಜಿಎಸ್‌ ಸುಜಯ್‌ ನೌಕೆಗಳನ್ನು ಕಳುಹಿಸಿಕೊಡಲಾಯಿತು. ಇವೆರಡೂ ಅವಘಡ ಸ್ಥಳಕ್ಕೆ ತಡರಾತ್ರಿ 12.20ರ ವೇಳೆಗೆ ತಲುಪಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದವು. ಕೋಸ್ಟ್‌ ಗಾರ್ಡ್‌ ಕಮಾಂಡರ್‌ ಡಿಐಜಿ ಎಸ್‌.ಎಸ್‌. ದಸೀಲಾ ಅವರು ವೈದ್ಯರೊಂದಿಗೆ ಧಾವಿಸಿ ಪ್ರಥಮ ಚಿಕಿತ್ಸೆ ಸಹಿತ ಭದ್ರತಾ ಕ್ರಮಗಳನ್ನು ಕೈಗೊಂಡರು.

ಬಳಿಕ ಮಾಧ್ಯಮದೊಂದಿಗೆ ಡಿಐಜಿ ದಸೀಲಾ ಮಾತನಾಡಿ, ಹಡಗಿನಲ್ಲಿ ಅಪಾಯಕಾರಿ ರಾಸಾಯನಿಕ ಮತ್ತಿತರ ವಸ್ತುಗಳಿದ್ದವು. ಮೂವರು ಮಹಿಳೆಯರ ಸಹಿತ 16 ವಿಜ್ಞಾನಿಗಳು, ಸಿಬಂದಿಯನ್ನು ರಕ್ಷಿಸಲು ಕ್ರಮ ಕೈಗೊಂಡೆವು. ನೌಕೆಗಳು ಸನ್ನದ್ಧವಾಗಿದ್ದ ಕಾರಣ ಸ್ಥಳಕ್ಕೆ ಕ್ಲಪ್ತ ಸಮಯದಲ್ಲಿ ತಲುಪಿದೆವು ಎಂದರು.

ನಾವು ಘಟನ ಸ್ಥಳಕ್ಕೆ ತಲುಪುವ ವೇಳೆಗೆ ಹಡಗಿ ನಿಂದ ಭಾರೀ ಪ್ರಮಾಣದಲ್ಲಿ ಬೆಂಕಿಯೊಂದಿಗೆ ಹೊಗೆ ಕಾಣಿಸುತ್ತಿತ್ತು. 3ನೇ ಡೆಕ್‌ನಲ್ಲಿದ್ದ 8 ಕಂಪಾರ್ಟ್‌ ಮೆಂಟ್‌ಗಳಲ್ಲಿ ಬೆಂಕಿ ಆವರಿಸಿತ್ತು. ತತ್‌ಕ್ಷಣ ಹಡಗಿ ನೊಳಗೆ  ಧಾವಿಸಲು ತೊಂದರೆಯಾದರೂ ಸುತ್ತಮುತ್ತಲಿನ ಪ್ರದೇಶವನ್ನು ತಣಿಸಲಾಯಿತು. ಬಳಿಕ ಹಡಗಿನೊಳಗೆ ಪ್ರವೇಶಿಸಿ ಬೆಂಕಿ ನಂದಿಸಲು ಆರಂಭಿಸಿದೆವು. ಶನಿವಾರ ಬೆಳಗ್ಗೆ 7 ಗಂಟೆ ವರೆಗೂ 30ಕ್ಕೂ ಅ ಧಿಕ ಸಿಬಂದಿಯಿಂದ ಕಾರ್ಯಾಚರಣೆ ನಡೆಸಲಾಯಿತು ಎಂದು ಐಸಿಜಿಎಸ್‌ ವಿಕ್ರಮ್‌ ನೌಕೆಯ ಕ್ಯಾಪ್ಟನ್‌ ರಾಜ್‌ ಕಮಲ್‌ ಸಿನ್ಹಾ ಮಾಹಿತಿ ನೀಡಿದ್ದಾರೆ.

ಅಪಾಯವಾಗಿಲ್ಲ, ಮುಂಜಾಗ್ರತೆಯ ಕ್ರಮ
ಘಟನೆಯಿಂದ ಪ್ರಾಣಾಪಾಯ, ಗಾಯ ಸಂಭವಿಸಿಲ್ಲ. ಬೆಂಕಿ ಅವಘಡಗಳ ಸಂದರ್ಭ ಹೊಗೆಯ ಕಣಗಳು ಗಂಟಲಲ್ಲಿ ಸಿಲುಕಿದ್ದರೆ ಒಂದೆರಡು ದಿನಗಳ ಬಳಿಕವೂ ಸಮಸ್ಯೆ ತಲೆ ದೋರುವ ಸಾಧ್ಯತೆ ಇರುತ್ತದೆ. ಆದ್ದರಿಂದ ಕೋಸ್ಟ್‌ ಗಾರ್ಡ್‌ ಸಹಾಯಕ ವೈದ್ಯರಿಗೆ ತಪಾಸಣೆ ನಡೆಸಿ ಎಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ ಎಂದು ಕೋಸ್ಟ್‌ ಗಾರ್ಡ್‌ ವೈದ್ಯ ಸಿಬಂದಿ ಡಾ| ಕೆ.ವಿ. ಹರೀಶ್‌ ತಿಳಿಸಿದ್ದಾರೆ.

ಇದು ಪುನರ್ಜನ್ಮ
“ಸಾಗರ ಸಂಪದ’ ಹಡಗಿನಲ್ಲಿ ನಾವು 16 ಮಂದಿ ವಿಜ್ಞಾನಿಗಳು ಫೆ. 26ರಿಂದ ಸಂಶೋಧನ ನಿರತರಾಗಿದ್ದೆವು. ಶುಕ್ರವಾರ ಸಂಭವಿಸಿದ ಅವಘಡ ಆಘಾತ ಉಂಟುಮಾಡಿದೆ. ಹಡಗಿನ ಸಿಬಂದಿ ಮತ್ತು ಕೋಸ್ಟ್‌ಗಾರ್ಡ್‌ ಸಿಬಂದಿಯ ಮೂಲಕ ನಮಗೆ ಪುನರ್‌ಜನ್ಮ ದೊರಕಿದಂತೆ ಆಗಿದೆ. 
ಡಾ| ಶೆರಿನ್‌, ವಿಜ್ಞಾನಿಗಳ ತಂಡದ ಮುಖ್ಯಸ್ಥೆ, ಸಿಎಫ್ಎಂಎಲ್‌ಆರ್‌ಇಯ ಮುಖ್ಯ ವಿಜ್ಞಾನಿ

ಟಾಪ್ ನ್ಯೂಸ್

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಬೇಡಿಕೆ

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಡಿಮಾಂಡ್

Kunigal: ಕಾರು ಪಲ್ಟಿ ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ

Kunigal: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ.. ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ

Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು

Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು

Delhi-Stamp2

Delhi Stampede: ನನ್ನ ಪತ್ನಿ ತಾರಾ ಎಲ್ಲಿ?..ನಾಪತ್ತೆಯಾದ ಪತ್ನಿಗಾಗಿ ಪತಿಯ ಹುಡುಕಾಟ!

Bantwala-Narsha-Case

Robbery Case: ಅಸಲಿ ಪೊಲೀಸ್‌ನ ನಕಲಿ ಆಟವನ್ನು ಭೇದಿಸಿದರು!

US-Deportesr

Indian Deportees: ಭಾರತೀಯರಿಗೆ ಮತ್ತೆ ಕೋಳ ತೊಡಿಸಿ ಗಡೀಪಾರು!

Railway-Rush

Mahakumbha Mela: ದೇಶದ ಬಹುತೇಕ ರೈಲು ನಿಲ್ದಾಣಗಳು ರಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Summer

Weather Change: ಹವಾಮಾನ ತೀವ್ರ ಬದಲಾವಣೆ: ಕೆಮ್ಮು, ಶೀತ, ಜ್ವರ ಆತಂಕ

18

Robbery Case: ಮೂಡುಬಿದಿರೆ ಅಳಿಯೂರು; ಹಾಡ ಹಗಲೇ ಚಿನ್ನಾಭರಣ ದರೋಡೆ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಬೇಡಿಕೆ

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಡಿಮಾಂಡ್

Kunigal: ಕಾರು ಪಲ್ಟಿ ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ

Kunigal: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ.. ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ

Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು

Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು

Delhi-Stamp2

Delhi Stampede: ನನ್ನ ಪತ್ನಿ ತಾರಾ ಎಲ್ಲಿ?..ನಾಪತ್ತೆಯಾದ ಪತ್ನಿಗಾಗಿ ಪತಿಯ ಹುಡುಕಾಟ!

Bantwala-Narsha-Case

Robbery Case: ಅಸಲಿ ಪೊಲೀಸ್‌ನ ನಕಲಿ ಆಟವನ್ನು ಭೇದಿಸಿದರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.