ಶೋಭಾ ಸೇರಿ ಹಾಲಿ 14 ಸಂಸದರಿಗೆ ಟಿಕೆಟ್‌;7 ಕ್ಷೇತ್ರಗಳು ಇನ್ನೂ ಬಾಕಿ


Team Udayavani, Mar 21, 2019, 2:17 PM IST

shobha-k.jpg

ಹೊಸದಿಲ್ಲಿ: ಬಹುನಿರೀಕ್ಷಿತ ಬಿಜೆಪಿ ಲೋಕಸಭಾ ಅಭ್ಯರ್ಥಿಗಳ ಪಟ್ಟಿಯನ್ನು ಗುರುವಾರ ಸಂಜೆ ಹೊಸದಿಲ್ಲಿ ಯಲ್ಲಿ ಬಿಜೆಪಿ ಚುನಾವಣಾ ಸಮಿತಿಯ ಜೆ.ಪಿ.ನಡ್ಡಾ ಅವರು ಪ್ರಕಟಿಸಿದ್ದು, ಕರ್ನಾಟಕದ 21 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗಿದೆ. ಕೊನೆಗೂ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಅವರು ಟಿಕೆಟ್‌ ಪಡೆದಿದ್ದಾರೆ. 

 ಕೊಪ್ಪಳ ಕ್ಷೇತ್ರ ಪ್ರತಿನಿಧಿಸುತ್ತಿರುವ  ಸಂಗಣ್ಣ ಕರಡಿ ಹೊರತು ಪಡಿಸಿ  ಹಾಲಿ ಸಂಸದರೆಲ್ಲರಿಗೂ ಟಿಕೆಟ್‌ ನೀಡಲಾಗಿದೆ.

 ಬಳ್ಳಾರಿಯಿಂದ ದೇವೇಂದ್ರಪ್ಪ ಅವರಿಗೆ ಟಿಕೆಟ್‌ ನೀಡಲಾಗಿದೆ. ತುಮಕೂರಿನ ಟಿಕೆಟ್‌ ಬಸವರಾಜ್‌ ಅವರಿಗೆ ನೀಡಲಾಗಿದೆ.  ಚಿತ್ರದುರ್ಗದಿಂದ ಎ.ನಾರಾಯಣ ಸ್ವಾಮಿ ಅವರಿಗೆ ಟಿಕೆಟ್‌ ನೀಡಲಾಗಿದೆ. 

ಚಿಕ್ಕೋಡಿ, ರಾಯಚೂರು ,ಕೋಲಾರ, ಮಂಡ್ಯ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ ಮತ್ತು ಕೊಪ್ಪಳ ಕ್ಷೇತ್ರದ ಅಭ್ಯರ್ಥಿಗಳ ಹೆಸರನ್ನು ಇನ್ನಷ್ಟೇ ಪ್ರಕಟಿಸಬೇಕಾಗಿದೆ. 

ಬೆಳಗಾವಿ ಹಾಲಿ ಸಂಸದ ಸುರೇಶ್‌ ಅಂಗಡಿ, ಬಾಗಲಕೋಟೆ ಹಾಲಿ ಸಂಸದ ಗದ್ದಿಗೌಡರ್‌ , ವಿಜಯಪುರ ಹಾಲಿ ಸಂಸದ, ಸಚಿವ ರಮೇಶ್‌ ಜಿಗಜಿಣಗಿ, ಬೀದರ್‌ ಹಾಲಿ ಸಂಸದ ಭಗವಂತ್‌  ಖೂಬಾ, ಹಾವೇರಿ ಹಾಲಿ ಸಂಸದ ಶಿವಕುಮಾರ್‌ ಉದಾಸಿ, ಉತ್ತರ ಕನ್ನಡ ಹಾಲಿ ಸಂಸದ, ಸಚಿವ ಅನಂತ್‌ ಕುಮಾರ್‌ ಹೆಗಡೆ, ಶಿವಮೊಗ್ಗ ಹಾಲಿ ಸಂಸದ ಬಿ.ವೈ .ರಾಘವೇಂದ್ರ, ದಾವಣಗೆರೆ ಹಾಲಿ ಸಂಸದ ಸಿದ್ದೇಶ್ವರ್‌ , ಮೈಸೂರು-ಕೊಡಗು ಕ್ಷೇತ್ರಕ್ಕೆ ಹಾಲಿ ಸಂಸದ ಪ್ರತಾಪ್‌ ಸಿಂಹ, ದಕ್ಷಿಣ ಕನ್ನಡ ಹಾಲಿ ಸಂಸದ ನಳಿನ್‌ ಕುಮಾರ್‌ ಕಟೀಲ್‌, ಬೆಂಗಳೂರು ಉತ್ತರ ಹಾಲಿ ಸಂಸದ , ಸಚಿವ ಡಿ.ವಿ.ಸದಾನಂದ ಗೌಡ, ಬೆಂಗಳೂರು ಕೇಂದ್ರ ಹಾಲಿ ಸಂಸದ ಪಿ.ಸಿ.ಮೋಹನ್‌, ಧಾರವಾಡ ಹಾಲಿ ಸಂಸದ ಪ್ರಹ್ಲಾದ್‌ ಜೋಷಿ  ಅವರು ಟಿಕೆಟ್‌ ಪಡೆದಿದ್ದಾರೆ. 

ಹಾಸನಕ್ಕೆ ಕಾಂಗ್ರೆಸ್‌ನಿಂದ ಬಂದಿರುವ ಎ.ಮಂಜು ಅವರು ನಿರೀಕ್ಷೆಯಂತೆ ಟಿಕೆಟ್‌ ಪಡೆದಿದ್ದಾರೆ.  ಕಲಬುರಗಿ –ಡಾ ಉಮೇಶ್‌ ಜಾಧವ್‌, ಚಿಕ್ಕಬಳ್ಳಾಪುರ – ಬಿ.ಎನ್‌.ಬಚ್ಚೇಗಡ, ಚಾಮರಾಜನಗರ ಕ್ಷೇತ್ರದಿಂದ ವಿ.ಶ್ರೀನಿವಾಸ್‌ ಪ್ರಸಾದ್‌, ಚಿತ್ರದುರ್ಗ ಕ್ಷೇತ್ರದಿಂದ ನಾರಾಯಣ ಸ್ವಾಮಿ  ಅವರು ಟಿಕೆಟ್‌ ಪಡೆದಿದ್ದಾರೆ. 

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.