ಆದಾಯ ತೆರಿಗೆ ಸಂಗ್ರಹದಲ್ಲಿ ಹೆಚ್ಚಳ
Team Udayavani, Mar 24, 2019, 12:38 PM IST
ಬೆಂಗಳೂರು: ಕಳೆದ ಆರ್ಥಿಕ ವರ್ಷಕ್ಕೆ ಹೋಲಿಸಿದರೆ ಪ್ರಸಕ್ತ ವರ್ಷದಲ್ಲಿ ಆದಾಯ ತೆರಿಗೆ ಸಂಗ್ರಹದಲ್ಲಿ ಹೆಚ್ಚಳವಾಗಿದೆ.
ಈ ಕುರಿತು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೋವಾ ಮತ್ತು ಕರ್ನಾಟಕ ವಿಭಾಗದ ಆದಾಯ ತೆರಿಗೆ ಪ್ರಧಾನ ಆಯುಕ್ತ ಬಿ.ಆರ್.ಬಾಲಕೃಷ್ಣನ್, 2017 - 18ನೇ ಸಾಲಿನಲ್ಲಿ ಒಟ್ಟು 1,03,745 ರೂ. ಸಂಗ್ರಹಿಸಲಾಗಿತ್ತು.
2018-19ನೇ ಸಾಲಿನಲ್ಲಿ 1,11,152 (ಮಾ.22ರವರೆಗೆ) ತೆರಿಗೆ ಸಂಗ್ರಹಿಸಲಾಗಿದೆ. ಹಾಗೆಯೇ ಆದಾಯ ತೆರಿಗೆ ಮರುಪಾವತಿಯಲ್ಲಿಯೂ ಗಣನೀಯ ಪ್ರಮಾಣದಲ್ಲಿ ಅಧಿಕವಾಗಿದೆ. ಕಳೆದ ವರ್ಷ 12,451 ಕೋಟಿ ರೂ., ಪ್ರಸಕ್ತ ವರ್ಷದಲ್ಲಿ 15,340 ಕೋಟಿ ರೂ.ಅಧಿಕವಾಗಿದೆ ಎಂದು ಹೇಳಿದರು.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ 36.95 ಕೋಟಿ ರೂ.ನಗದು, ಆರು ಕೋಟಿ ರೂ.ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿತ್ತು. ಹಾಗೆಯೇ ಚುನಾವಣಾ ಅಭ್ಯರ್ಥಿಗಳಿಗೆ ಹಣ ಸಂದಾಯ ಮಾಡುತ್ತಿದ್ದ ಗುತ್ತಿಗೆದಾರರ ಮೇಲೆ ದಾಳಿ ನಡೆಸಿ ಆರು ಕೋಟಿ ರೂ.ಮೌಲ್ಯದ ಬೇನಾಮಿ ಮೌಲ್ಯದ ಲಾಕರ್ ವಶಕ್ಕೆ ಪಡೆಯಲಾಗಿತ್ತು.
ಚುನಾವಣಾ ಪ್ರಚಾರದ ವೇಳೆ ಮಾಜಿ ಸಚಿವರೊಬ್ಬರು ಹಾಗೂ ಬೆಂಬಲಿಗರಿಗೆ ಸೇರಿದ 62 ಲಕ್ಷ ರೂ.ಗಳನ್ನು ವಶಕ್ಕೆ ಪಡೆದುಕೊಂಡಿದ್ದು, ತನಿಖೆ ನಡೆಯುತ್ತಿದೆ ಎಂದು ಬಾಲಕೃಷ್ಣನ್ ಹೇಳಿದರು.
ಲೋಕಸಭೆ ಚುನಾವಣೆಗೆ ಹದ್ದಿನ ಕಣ್ಣು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರತಿ ಜಿಲ್ಲೆಯಲ್ಲಿಯೂ ನೋಡಲ್ ಅಧಿಕಾರಿ ನೇತೃತ್ವದಲ್ಲಿ ತಂಡ ರಚಿಸಲಾಗಿದೆ.
ಪ್ರತಿ ಜಿಲ್ಲೆಯಲ್ಲಿಯೂ ಡೆಪ್ಯೂಟಿ ಕಮಿಷನರ್, ಇಬ್ಬರು ಐಟಿ ಅಧಿಕಾರಿಗಳು ಸೇರಿ10 ಮಂದಿಯ ವಿಚಕ್ಷಣಾ ದಳ ಕಾರ್ಯ ನಿರ್ವಹಿಸಲಿದೆ. ಬೆಂಗಳೂರು, ಮಂಗಳೂರು, ಹುಬ್ಬಳ್ಳಿ, ಕಲಬುರಗಿ, ಹಾಗೂ ಗೋವಾದ ಪಣಜಿಯನ್ನು ಸೂಕ್ಷ್ಮ ಪ್ರದೇಶಗಳೆಂದು ಪರಿಗಣಿಸಲಾಗಿದೆ.
ಪ್ರತಿನಿತ್ಯ 10-12 ಕರೆಗಳು: ಲೋಕಸಭೆ ಚುನಾವಣೆಯಲ್ಲಿ ಅಕ್ರಮ ಹಣ ಹಾಗೂ ಚಿನ್ನಾಭರಣ ಸಾಗಾಟ ತಡೆಯುವ ಸಲುವಾಗಿ ಸಾರ್ವಜನಿಕರಿಂದ ಮಾಹಿತಿ ಪಡೆಯಲು ತೆರೆದಿರುವ 24*7 ಸಹಾಯವಾಣಿ ಕೇಂದ್ರಕ್ಕೆ ಪ್ರತಿನಿತ್ಯ 10-12 ಕರೆಗಳು ಬರುತ್ತಿವೆ.
ಈ ಕರೆಗಳನ್ನು ಆಧರಿಸಿ ಇದುವರೆಗೂ ಮೂರು ಕಡೆ ದಾಳಿ ನಡೆಸಿದ್ದು, 4.04 ಕೋಟಿ ರೂ.ಜಪ್ತಿ ಮಾಡಲಾಗಿದೆ. ಹಾಗೆಯೇ ಚುನಾವಣಾ ಅಭ್ಯರ್ಥಿಗಳ ಅಫಿಡವಿಟ್ಗಳ ಪರಿಶೀಲನೆ, ಬ್ಯಾಂಕ್ಗಳಲ್ಲಿ ಹಣದ ವರ್ಗಾವಣೆ ಮೇಲೆ ನಿಗಾ ವಹಿಸಲಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Potholes: ಮೆಜೆಸ್ಟಿಕ್ ಬಸ್ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು
Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್ ಬಂಧನ
Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!
Bengaluru: ದುಷ್ಕರ್ಮಿಗಳಿಂದ ಬಸ್ ಡ್ರೈವರ್, ಕಂಡಕ್ಟರ್ಗೆ ಥಳಿತ!
Bengaluru: ಹಲ್ಲೆ ನಡೆದರೆ ಪೌರ ಕಾರ್ಮಿಕರು ತಕ್ಷಣವೇ ದೂರು ನೀಡಿ: ಕಮಿಷನರ್
MUST WATCH
ಹೊಸ ಸೇರ್ಪಡೆ
Kaup LaxmiJanardhana Temple: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಆಯ್ಕೆ
Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ
BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ
Kerala: ವಿಡಿಯೋ ಅಪ್ಲೋಡ್ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ
Explainer: ವಯನಾಡ್ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್ ಅಖಾಡಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.