ವಿಜ್ಞಾನದ ವಿಸ್ಮಯ ಕಣ್ತುಂಬಿಕೊಂಡ ಜನತೆ


Team Udayavani, Mar 24, 2019, 12:38 PM IST

vijnana

ಬೆಂಗಳೂರು: ವಿಜ್ಞಾನದ ಹೊಸ ಆವಿಷ್ಕಾರದ ಪ್ರದರ್ಶನ, ಪ್ರಾತ್ಯಕ್ಷಿಕೆ ಒಂದೆಡೆಯಾದರೆ, ಇನ್ನೊಂದೆಡೆ ಮಕ್ಕಳ ಕಲರವ, ವಿದ್ಯಾರ್ಥಿಗಳ ಮಹಾ ಸಮಾಗಮ ಶನಿವಾರ ಮಲ್ಲೇಶ್ವರದ ಐಐಎಸ್ಸಿಯಲ್ಲಾಗಿದೆ.

ಭಾರತೀಯ ವಿಜ್ಞಾನ ಸಂಸ್ಥೆ(ಐಐಎಸ್ಸಿ) ಒಳಗೆ ಏನಾಗುತ್ತಿದೆ ಎಂಬುದನ್ನು ಜನ ಸಾಮಾನ್ಯರಿಗೆ ಅದರಲ್ಲೂ ಯುವಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ತಿಳಿಸುವುದಕ್ಕಾಗಿ ಪ್ರತಿ ವರ್ಷ ಮುಕ್ತ ದಿನ( ಓಪನ್‌ ಡೇ)ಆಚರಿಸಲಾಗುತ್ತದೆ. ಶನಿವಾರ ಹಮ್ಮಿಕೊಂಡಿದ್ದ ಮುಕ್ತ ದಿನದಲ್ಲಿ ಐಐಎಸ್ಸಿಯ 40 ವಿಭಾಗದಿಂದ ವಿಜ್ಞಾನದ ಹಲವು ಪ್ರಯೋಗ, ವಿಸ್ಮಯಗಳ ಜತೆಗೆ ವಸ್ತು ಪ್ರದರ್ಶಗಳನ್ನು ಸಾಮಾನ್ಯ ಜನರಿಗೆ ಮುಕ್ತವಾಗಿ ತೆರೆದಿಟ್ಟಿದ್ದರು.

ನಗರ ಯೋಜನೆ, ಸುಸ್ಥಿರ ಸಂಚಾರಿ ವ್ಯವಸ್ಥೆ ಮತ್ತು ಮೂಲಸೌಕರ್ಯ ವಿಭಾಗದಲ್ಲಿ ನಗರದಲ್ಲಿ ಉಂಟಾಗುತ್ತಿರುವ ಸಂಚಾರಿ ಸಮಸ್ಯೆಗೆ ಹೇಗೆಲ್ಲ ರಸ್ತೆಗಳನ್ನು ಅಭಿವೃದ್ಧಿ ಪಡಿಸಿದರೆ ಅನುಕೂಲವಾಗಲಿದೆ ಎಂಬುದರ ದೃಶ್ಯ ಪ್ರದರ್ಶನ ಏರ್ಪಡಿಸಲಾಗಿತ್ತು.

ಎಲೆಕ್ಟ್ರಾನಿಕ್‌ ಎಂಜಿನಿಯರಿಂಗ್‌ ವಿಭಾಗದ ಲ್ಯಾಬ್‌ನಲ್ಲಿ ಹೈ-ವೋಲ್ಟೆಜ್‌ ವಿದ್ಯುತ್‌ ಹರಿಸಿ ನಾಲ್ಕು ವಿವಿಧ ರೀತಿಯ ಪ್ರಾತ್ಯಕ್ಷಿಕೆಯನ್ನು ಪ್ರದರ್ಶಿಸಲಾಯಿತು. 10 ನಿಮಿಷದ ಪ್ರಾತ್ಯಕ್ಷಿಕೆ ರಂಜಿಸಿತು. 1.50 ಲಕ್ಷ ವೋಲ್ಟೆಜ್‌ನಿಂದ ಕೃತಕ ಸಿಡಿಲು ಸೃಷ್ಟಿ, 3 ಮಿಲಿಯನ್‌ ವೋಲ್ಟ್ನಿಂದ ವಿದ್ಯುತ್‌ ಬಾಂಬ್‌ ಸ್ಫೋಟಿಸಲಾಯಿತು.

ಡ್ರೋಣ್‌ ದರ್ಶನ: ಏರೋಸ್ಪೇಸ್‌ ಉದ್ಯಮಕ್ಕೆ ಬೇಕಾಗುವ ವಿದ್ಯುತ್‌ತ್ಛಕ್ತಿ ಸೇರಿ ಇನ್ನಿತರ ಇಂಧನಗಳನ್ನು ಗಾಳಿ ಮೂಲಕ ಉತ್ಪಾದಿಸುವ ಹೈ ಸ್ಪೀಡ್‌ವಿಂಡ್‌ ಟನಲ್‌ ಕಾಂಪ್ಲೆಕ್ಸ್‌, ವಿಮಾನಯಾನ ಕ್ಷೇತ್ರಕ್ಕೆ ಪರ್ಯಾಯ ಇಂಧನ ಆವಿಷ್ಕಾರ ಸೇರಿ ಇನ್ನಿತರ ಕಾರ್ಯಕ್ಕೆ ಬಳಕೆಯಾಗಬಲ್ಲ ಡ್ರೋಣ್‌ಗಳನ್ನು ಪ್ರದರ್ಶಿಸಲಾಯಿತು.

ರಾಕೆಟ್‌ ಉಡಾವಣೆ, ಅದರ ವೇಗ, ಸಿದ್ಧಪಡಿಸುವ ವಿಧಾನ, ಉಡಾವಣೆ ಸಂದರ್ಭ ಮಾಹಿತಿ ಒಳಗೊಂಡಿರುವ ಸೂಪರ್‌ ಸೋನಿಕ್‌ ಜೆಟ್‌ ಪ್ರಾತ್ಯಕ್ಷಿಕೆ, ನ್ಯಾನೋ ಸೈನ್ಸ್‌ ಮತ್ತು ಎಂಜಿನಿಯರಿಂಗ್‌, ಅಟೊಸ್ಪೇರ್‌ ಮತ್ತು ಓಷನ್‌ ಸೈನ್ಸ್‌, ಬಯೊ ಸಿಸ್ಟಮ್‌ ಸೈನ್ಸ್‌ ಮತ್ತು ಎಂಜಿನಿಯರಿಂಗ್‌, ಕ್ರಯೊಜಿನ್‌ಟೆಕ್ನಾಲಜಿ, ಬಯೊ ಕೆಮೆಸ್ಟ್ರಿ, ಮೂಲ ಸೌಕರ್ಯ ವಿವಿಧ ಅಭಿಯಂತರರು ಸೇರಿ ಐಐಎಸ್‌ಸಿಯ ಸ್ನಾತಕ, ಸ್ನಾತಕೋತ್ತರ ಮತ್ತು ಸಂಶೋಧನಾ ಕೇಂದ್ರದಿಂದ ವಿಜ್ಞಾನದ ಪ್ರಾತ್ಯಕ್ಷಿಕೆ ಮತ್ತು ಪ್ರದರ್ಶನ ನಡೆಯಿತು.

ಬೌದ್ಧಿಕ ಮಂಥನ: ವಿಜ್ಞಾನ ಪ್ರದರ್ಶನದ ಜತೆಗೆ ವಿಜ್ಞಾನಿಗಳು, ತಜ್ಞರು, ಗಣ್ಯರ ಮೂಲಕ ಹಲವು ವಿಷಯಗಳ ಚರ್ಚೆ, ಸಂವಾದವನ್ನು ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳಿಗೆ ವಿಜ್ಞಾನ, ತಂತ್ರಜ್ಞಾನದ ಬಗ್ಗೆ ಹೆಚ್ಚಿನ ಆಸಕ್ತಿ ಮೂಡಿಸುವ ಉದ್ದೇಶದಿಂದ ಐಐಎಸ್‌ಸಿ ವಿಭಾಗವಾರು ಕ್ವಿಜ್‌ ಸ್ಪರ್ಧೆಗಳನ್ನು ಆಯೋಜನೆ ಮಾಡಲಾಗಿತ್ತು. ಮಕ್ಕಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ ಮೂಡಿಸಲು ಡಿಕ್‌ಜೋನ್‌ ವ್ಯವಸ್ಥೆ ಮಾಡಲಾಗಿತ್ತು.

ಹರಿದು ಬಂದ ಜನ ಸಾಗರ: ಬೆಳಗ್ಗೆ 9ರಿಂದ ಸಂಜೆ 5.30ರವರೆಗೆ ಮಕ್ಕಳು, ಮಹಿಳೆಯರು, ಪುರುಷರು, ವಯಸ್ಕರು ಹೀಗೆ ಎಲ್ಲ ವಯೋಮಾನದವರು ವಿಜ್ಞಾನದ ವಿಸ್ಮಯಕಂಡು ಬೆರಗಾದರು. ಶಾಲೆಗಳಿಂದ ಗುಂಪುಗುಂಪಾಗಿ ವಿದ್ಯಾರ್ಥಿಗಳು ಶಿಕ್ಷಕರು ಬಂದಿದ್ದರು. ಶಿಕ್ಷಣ, ವಿಜ್ಞಾನಕ್ಕೆ ಸಂಬಂಧಿಸಿದ 300ಕ್ಕೂ ಹೆಚ್ಚಿನ ಸಂಸ್ಥೆಗಳ ಪ್ರತಿನಿಧಿಗಳು ಕೂಡ ಭಾಗವಹಿಸಿದ್ದರು. ಸಾರ್ವಜನಿಕರ ಅನುಕೂಲಕ್ಕಾಗಿ 15 ಸಹಾಯ ಕೇಂದ್ರ ಸ್ಥಾಪಿಸಲಾಗಿತ್ತು.

ಸೆಲ್ಫಿ…: ಕ್ಯಾಂಪಸ್‌ನಲ್ಲಿರುವ ಕ್ಯಾಂಟೀನ್‌ ಜತೆಗೆ ಐದಾರು ಕಡೆಗಳಲ್ಲಿ ಓಪನ್‌ ಡೇಗೆ ಬಂದವರಿಗಾಗಿ ಫ‌ುಡ್‌ಕೋರ್ಟ್‌ ತೆಗೆಯಲಾಗಿತ್ತು. ಒಂದೊಂದೆ ವಿಭಾಗದ ವಿಜ್ಞಾನದ ಹೊಸ ಆವಿಷ್ಕಾರ, ವಿಸ್ಮಯಗಳನ್ನು ನೋಡಿ ಬಂದವರು ಐಐಎಸ್ಸಿ ಕೇಂದ್ರ ಕಟ್ಟಡದ ಮುಂಭಾಗ ಹಾಗೂ ಹಿಂಭಾಗದಲ್ಲಿರುವ ಹುಲ್ಲುಹಾಸಿನಲ್ಲಿ ವಿಶ್ರಾಂತ ಪಡೆಯುತ್ತಾ, ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದರು.

ಟಾಪ್ ನ್ಯೂಸ್

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

4

Renukaswamy Case: ಹೈಕೋರ್ಟ್‌ ನಲ್ಲಿ ದರ್ಶನ್‌ ಜಾಮೀನು ಅರ್ಜಿ ಮುಂದೂಡಿಕೆ

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

BBK11: ಯಾರದೋ ಮನೆಯಲ್ಲಿ ಪಾತ್ರೆ ತಿಕ್ಕುತ್ತಿದ್ದೆ.. ದೊಡ್ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ

BBK11: ಯಾರದೋ ಮನೆಯಲ್ಲಿ ಪಾತ್ರೆ ತಿಕ್ಕುತ್ತಿದ್ದೆ.. ದೊಡ್ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ

AUSvsPAK: Australia announces squad for Pak series: Team has no captain!

AUSvsPAK: ಪಾಕ್‌ ಸರಣಿಗೆ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ: ತಂಡಕ್ಕೆ ನಾಯಕನೇ ಇಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

7

Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್‌ ಬಂಧನ

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ದುಷ್ಕರ್ಮಿಗಳಿಂದ ಬಸ್‌ ಡ್ರೈವರ್‌, ಕಂಡಕ್ಟರ್‌ಗೆ ಥಳಿತ!

Bengaluru: ದುಷ್ಕರ್ಮಿಗಳಿಂದ ಬಸ್‌ ಡ್ರೈವರ್‌, ಕಂಡಕ್ಟರ್‌ಗೆ ಥಳಿತ!

6

Bengaluru: ಹಲ್ಲೆ ನಡೆದರೆ ಪೌರ ಕಾರ್ಮಿಕರು ತಕ್ಷಣವೇ ದೂರು ನೀಡಿ: ಕಮಿಷನರ್‌

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Udupi: ವಿವಿಧ ಬೇಡಿಕೆ ಈಡೇರಿಸುವಂತೆ ಅಂಗವಿಕಲರಿಂದ ಪ್ರತಿಭಟನೆ

Udupi: ವಿವಿಧ ಬೇಡಿಕೆ ಈಡೇರಿಸುವಂತೆ ಅಂಗವಿಕಲರಿಂದ ಪ್ರತಿಭಟನೆ

Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ

Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

4

Renukaswamy Case: ಹೈಕೋರ್ಟ್‌ ನಲ್ಲಿ ದರ್ಶನ್‌ ಜಾಮೀನು ಅರ್ಜಿ ಮುಂದೂಡಿಕೆ

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.