ಬ್ರಹ್ಮಗಂಟು ಹುಡುಗನ ಡೆಮೋ ಪೀಸ್‌

ಸ್ಪರ್ಶ ರೇಖಾ ನಿರ್ಮಾಣದ ಯೂಥ್‌ ಚಿತ್ರ

Team Udayavani, Mar 25, 2019, 11:03 AM IST

Demo-Pice

“ಬಿಗ್‌ಬಾಸ್‌’ ಮನೆಯಿಂದ ಹೊರಬಂದ ನಟಿ “ಸ್ಪರ್ಶ’ ರೇಖಾ ಅವರು ಚಿತ್ರ ನಿರ್ಮಾಣ ಮಾಡುವುದಾಗಿ ಹೇಳಿದ್ದ ವಿಷಯವನ್ನು ಈ ಹಿಂದೆ ಇದೇ ಬಾಲ್ಕನಿಯಲ್ಲಿ ಹೇಳಲಾಗಿತ್ತು. ಆ ಚಿತ್ರಕ್ಕೆ “ಡೆಮೋ ಪೀಸ್‌’ ಎಂಬ ಹೆಸರು ಇಟ್ಟಿರುವುದನ್ನೂ ಹೇಳಲಾಗಿತ್ತು. ಆ ಚಿತ್ರದ ಮೂಲಕ ಕಿರುತೆರೆ ನಟ ಭರತ್‌ ಬೊಪ್ಪಣ್ಣ ನಾಯಕರಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಜೀ ಕನ್ನಡ ವಾಹಿನಿಯ “ಬ್ರಹ್ಮಗಂಟು’ ಧಾರಾವಾಹಿ ನಟ ಭರತ್‌ ಬೊಪ್ಪಣ್ಣ ಈಗ ಇದೇ ಮೊದಲ ಬಾರಿಗೆ ಚಿತ್ರದ ನಾಯಕರಾಗಿ ತಮ್ಮ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಈ ಚಿತ್ರದಲ್ಲಿ ಭರತ್‌ಗೆ ನಾಯಕಿಯಾಗಿ ಸೋನಾಲ್‌ ಮಾಂತೇರೊ ಜೋಡಿಯಾಗಿದ್ದಾರೆ. ರೇಖಾ ಕೂಡ ಚಿತ್ರದ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬುದು ವಿಶೇಷ.

ಈ ಚಿತ್ರವನ್ನು ವಿವೇಕ್‌ ನಿರ್ದೇಶಿಸುತ್ತಿದ್ದಾರೆ. ಇದುವರೆಗೆ ನಟನೆ ಮೂಲಕ ಗಮನಸೆಳೆದಿದ್ದ ನಟಿ ರೇಖಾ ಅವರು, “ಡೆಮೋ ಪೀಸ್‌’ ಮೂಲಕ ನಿರ್ಮಾಪಕಿಯಾಗಿಯೂ ಗುರುತಿಸಿಕೊಳ್ಳಲು ಹೊರಟಿದ್ದಾರೆ. ತಮ್ಮ ನಿರ್ಮಾಣದ ಚೊಚ್ಚಲ ಚಿತ್ರದ ಬಗ್ಗೆ ಹೇಳಿಕೊಳ್ಳುವ ರೇಖಾ, ಈಗಾಗಲೇ ಬೆಂಗಳೂರು, ತುಮಕೂರು ಸುತ್ತ ಮುತ್ತ ಸದ್ದಿಲ್ಲದೆ ಶೇ. 90ರಷ್ಟು ಚಿತ್ರೀಕರಣ ಪೂರ್ಣಗೊಂಡಿದೆ.

ಸದ್ಯ ಚಿತ್ರದ ಅಂತಿಮ ಹಂತದ ಚಿತ್ರೀಕರಣದಲ್ಲಿ ನಿರತವಾಗಿರುವ ಚಿತ್ರತಂಡ, ಇದೇ ಮಾರ್ಚ್‌ ಅಂತ್ಯಕ್ಕೆ ಚಿತ್ರೀಕರಣ ಮುಗಿಸಲಿದೆ’ ಎಂಬ ವಿವರ ಕೊಡುತ್ತಾರೆ. ಹಾಗಾದರೆ, “ಡೆಮೋ ಪೀಸ್‌’ ಕಥೆ ಏನು? ಇದಕ್ಕೆ ಉತ್ತರಿಸುವ ರೇಖಾ, “ಇದೊಂದು ಈಗಿನ ಕಾಲದ ಯೂಥ್ಸ್ ಲೈಫ್ಸ್ಟೈಲ್‌, ಅವರ ಯೋಚನೆ, ಹಾವ-ಭಾವ, ಕನಸು-ಕಲ್ಪನೆ ಎಲ್ಲವನ್ನೂ ಒಳಗೊಂಡಿರುವ ಚಿತ್ರ.

ಜೊತೆಗೆ ಪ್ರೇಕ್ಷಕರಿಗೆ ಇಷ್ಟವಾಗುವಂತಹ ಹಾಡು, ಡ್ಯಾನ್ಸ್‌, ಫೈಟ್ಸ್‌, ರೋಮ್ಯಾನ್ಸ್‌ ಎಲ್ಲ ಅಂಶಗಳೂ ಇಲ್ಲಿ ಮೇಳೈಸಿವೆ. ಒಂದು ಒಳ್ಳೆಯ ಕಥೆ, ಸಂದೇಶವನ್ನು ಇಟ್ಟುಕೊಂಡು ಪಕ್ಕಾ ಕಮರ್ಷಿಯಲ್‌ನೊಂದಿಗೆ ಮನರಂಜನೆಯ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುತ್ತಿದ್ದೇವೆ.

ಏಪ್ರಿಲ್‌ ವೇಳೆಗೆ ಚಿತ್ರದ ಟ್ರೇಲರ್‌ ಮತ್ತು ಆಡಿಯೋ ಬಿಡುಗಡೆ ಮಾಡುವ ಪ್ಲಾನ್‌ ಇದೆ’ ಎನ್ನುವ ರೇಖಾ, “ನಮ್ಮ ಪ್ಲಾನ್‌ ಪ್ರಕಾರ ಎಲ್ಲವೂ ನಡೆದರೆ ಇದೇ ಮೇ-ಜೂನ್‌ ವೇಳೆಗೆ “ಡೆಮೋ ಪೀಸ್‌’ ಜನರ ಮುಂದೆ ಬರಲಿದೆ. ನಟನೆ ಜೊತೆಗೆ ನಿರ್ಮಾಣಕ್ಕಿಳಿದ ರೇಖಾ ಆ ಅನುಭವ ಕುರಿತು ಹೇಳುವುದಿಷ್ಟು. “ನಟಿಯಾಗಿದ್ದಾಗ ನನ್ನ ಕೆಲಸ ಸುಲಭವಾಗಿತ್ತು.

ನಿರ್ಮಾಪಕರು ಕೊಡುವ ಸಂಭಾವನೆ ಪಡೆದು, ನಿರ್ದೇಶಕರು ಹೇಳಿದಂತೆ ಕೆಲಸ ಮಾಡುತ್ತಿದ್ದೆ. ಆದರೆ ಈಗ ನಿರ್ಮಾಪಕಿಯಾದ ಬಳಿಕ ಆ ಜವಾಬ್ದಾರಿ ಹೆಚ್ಚಾಗಿದೆ. ಸಿನಿಮಾದ ಪ್ರತಿಯೊಂದು ವಿಭಾಗದಲ್ಲೂ ಏನು ನಡೆಯುತ್ತಿದೆ ಎನ್ನುವುದನ್ನು ಗಮನಿಸುತ್ತಿರಬೇಕು.

ಚಿತ್ರದ ಕಥೆ, ಕಲಾವಿದರು, ತಂತ್ರಜ್ಞರು ಏನೆಲ್ಲಾ ಕೇಳುತ್ತಾರೋ, ಅದೆಲ್ಲವನ್ನೂ ಒದಗಿಸಿಕೊಡಬೇಕು. ಚಿತ್ರ ನಿರ್ಮಾಣ ಅನ್ನೋದು ದೊಡ್ಡ ಜವಾಬ್ದಾರಿ. ಮೊದಲ ನಿರ್ಮಾಣದ ಚಿತ್ರ ಆಗಿರುವುದರಿಂದ ಪ್ರತಿದಿನ ಹೊಸ ಹೊಸ ಅನುಭವ ಕಲಿಸಿಕೊಡುತ್ತಿದೆ’ ಎಂದಷ್ಟೇ ಹೇಳಿ ಸುಮ್ಮನಾಗುತ್ತಾರೆ ರೇಖಾ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

mallu jamkhandi vidya ganesh movie

Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

‌Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್‌’ ಲುಕ್‌ ಕೊಟ್ಟ ʼದಾಸʼ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.