ಲೋಕ ಸಮರಕ್ಕೆ  ಮತದಾನ ಜಾಗೃತಿ ವಾಹನ 

42 ಗ್ರಾಮಗಳಲ್ಲಿ ವಾಹನ ಸಂಚಾರ ಸಿ-ವಿಜಿಲ್‌ ಮೊಬೈಲ್‌ ಆ್ಯಪ್‌ ಮೂಲಕ ದೂರು ಸಲ್ಲಿಕೆಗೆ ಅವಕಾಶ

Team Udayavani, Mar 25, 2019, 3:41 PM IST

25-March-8

ಜಮಖಂಡಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ತಾಲೂಕಾಡಳಿತದಿಂದ ಸಿದ್ಧಪಡಿಸಿದ ವಿಶೇಷ ಮತದಾನ ಜಾಗೃತಿ ಪ್ರದರ್ಶನ ವಾಹನ.

ಜಮಖಂಡಿ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ತಾಲೂಕಾಡಳಿತ ಹೊಸದೊಂದು ವಿಶೇಷ ಮತದಾನ ಜಾಗೃತಿಗಾಗಿ ಮತದಾನ ಪ್ರದರ್ಶನ ವಾಹನ ಸಿದ್ಧಪಡಿಸಿದ್ದು, ಕ್ಷೇತ್ರದ ನಗರ ಪ್ರದೇಶ ಸೇರಿದಂತೆ ತಾಲೂಕಿನ 42 ಗ್ರಾಮದಲ್ಲಿ ಸಂಚರಿಸುತ್ತಿದೆ.
ತಾಲೂಕಾಡಳಿತ ಟಾಟಾ ವಾಹನದಲ್ಲಿ ಮತದಾನ ಯಂತ್ರ, ಮತದಾರರ ಬ್ಯಾಲೆಟ್‌ ಮಷೀನ್‌ ಹಾಗೂ ಮತದಾನ ಖಾತ್ರಿ ಮಾಡುವ ವಿವಿ ಪ್ಯಾಟ್‌ ಪ್ರಾತ್ಯಕ್ಷಿಕೆ ಪ್ರದರ್ಶನ ಮೂಲಕ ಮತದಾನ ಜಾಗೃತಿ ಮೂಡಿಸುತ್ತಿದೆ. ಮನೆಬಾಗಿಲಿಗೆ ಮತದಾನ ಮಾಹಿತಿ ಲಭ್ಯವಾಗುತ್ತಿರುವುದಕ್ಕೆ ಮತದಾರರು ಸಂತಸ ವ್ಯಕ್ತಪಡಿಸಿದ್ದಾರೆ.
ಚೆಕ್‌ಪೋಸ್ಟ್‌ ಸ್ಥಾಪನೆ: ಲೋಕಸಭಾ ಚುನಾವಣೆಗೆ ತಾಲೂಕಾಡಳಿ ಸಕಲ ಸಿದ್ದತೆ ನಡೆದಿದ್ದು, ಈಗಾಗಲೇ ಜಮಖಂಡಿ, ತೇರದಾಳ ಎರಡು ವಿಧಾನಸಭೆ ಕ್ಷೇತ್ರದಲ್ಲಿ ತೇರದಾಳ, ಬುದ್ನಿ, ಚಿಕ್ಕಲಕಿ, ಚಿನಗುಂಡಿ ಕ್ರಾಸ್‌, ಢವಳೇಶ್ವರ, ಹುಲ್ಯಾಳ ಕ್ರಾಸ್‌, ಹುನ್ನೂರು ಕ್ರಾಸ್‌ ಸೇರಿ 7 ಸ್ಥಳಗಳಲ್ಲಿ ಚೆಕ್‌ಪೋಸ್ಟ್‌ ಸ್ಥಾಪಿಸಲಾಗಿದೆ. ಚೆಕ್‌ಪೋಸ್ಟ್‌ ಮೂಲಕ ಕಟ್ಟುನಿಟ್ಟಿನ ತಪಾಸಣೆ ನಡೆಯುತ್ತಿದೆ.
ಸಿ-ವಿಜಿಲ್‌ ಮೊಬೈಲ್‌ ಆ್ಯಪ್‌: ತೇರದಾಳ, ಜಮಖಂಡಿ ಕ್ಷೇತ್ರದಲ್ಲಿ 43 ಸೆಕ್ಟರ್‌ ಅಧಿಕಾರಿಗಳು, ವಿಡಿಯೋ ತಂಡ, 12 ಫ್ಲೈಯಿಂಗ್‌ ತಂಡ ಕರ್ತವ್ಯದಲ್ಲಿದೆ. ಸಾರ್ವಜನಿಕರು ಮುಕ್ತವಾಗಿ ಸಿ-ವಿಜಿಲ್‌ ಮೊಬೈಲ್‌ ಆ್ಯಪ್‌ ಮೂಲಕ ದೂರು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಮತದಾರರು ಎಷ್ಟು?: ತೇರದಾಳ ಕ್ಷೇತ್ರದಲ್ಲಿ 1,10,171 ಪುರುಷರು, 1,09,790 ಮಹಿಳೆಯರು, 10 ಇತರೆ ಸೇರಿ 2,19,971 ಮತದಾರರಿದ್ದರೆ ಜಮಖಂಡಿ ಕ್ಷೇತ್ರದಲ್ಲಿ 1,02,656 ಪುರುಷರು, 1,02,116 ಮಹಿಳೆಯರು, 6 ಇತರೆ ಸೇರಿ 2,04,778 ಮತದಾರರಿದ್ದಾರೆ. ಜಮಖಂಡಿ-ತೇರದಾಳದಲ್ಲಿ 191 ನಗರಪ್ರದೇಶ ಮತಗಟ್ಟೆ, 276 ಗ್ರಾಮೀಣ ಮತಗಟ್ಟೆ ಸೇರಿ ಒಟ್ಟು 467 ಮತಗಟ್ಟೆಗಳಲ್ಲಿ ಮೂಲ ಸೌಕರ್ಯ ಜೋಡಣೆ ಕೆಲಸ ನಡೆದಿದೆ. ಪ್ರಸಕ್ತ ಚುನಾವಣೆಯಲ್ಲಿ ಹೊಸ ಮತದಾರರ ಸೇರ್ಪಡೆಯಿಂದ ತೇರದಾಳ-ಜಮಖಂಡಿ ಕ್ಷೇತ್ರದಲ್ಲಿ 22 ಹೊಸ ಮತಗಟ್ಟೆ ಸ್ಥಾಪನೆಯಾಗಿವೆ.
ಚುನಾವಣೆ ಹಿನ್ನೆಲೆಯಲ್ಲಿ ಮುಧೋಳ, ಬೀಳಗಿ, ಹುನಗುಂದ, ಬಾಗಲಕೋಟೆ ಮತ್ತು ಜಮಖಂಡಿ ತಾಲೂಕಿನಿಂದ ಅಂದಾಜು 2,055 ಚುನಾವಣಾ ಸಿಬ್ಬಂದಿ ನೇಮಿಸಲಾಗಿದೆ. ಸುವಿಧಾ ಸಿಂಗಲ್‌ ವಿಂಡೋ ಆನ್‌ಲೈನ್‌ ಮೂಲಕ ಅಭ್ಯರ್ಥಿ, ರಾಜಕೀಯ ಪಕ್ಷದವರು ಅರ್ಜಿ ಸಲ್ಲಿಸಬಹುದಾಗಿದ್ದು, ನಿರಂತರ ಸೇವೆಗೆ, ಸಮಸ್ಯೆಗಳಿಗೆ 1950 ಕಾಲ್‌ ಸೆಂಟರ್‌ ತೆರೆಯಲಾಗಿದ್ದು ದೂರು ಸಲ್ಲಿಸಲು ದಿನದ 24 ಗಂಟೆ ಸೇವೆಯಲ್ಲಿದೆ.
ತೇರದಾಳ, ಜಮಖಂಡಿ ಕ್ಷೇತ್ರದಲ್ಲಿ ಮುಕ್ತ ಮತದಾನಕ್ಕೆ ಸಕಲ ಸಿದ್ಧತೆ ಮಾಡಲಾಗಿದ್ದು, ಎಲ್ಲ ಮತಗಟ್ಟೆಗಳಲ್ಲಿ ಮೂಲ ಸೌಕರ್ಯ ಕಲ್ಪಿಸುವ ಕೆಲಸ ನಡೆದಿದೆ. ಅಹಿತಕರ ಘಟನೆ ನಡೆಯದಂತೆ ಮುನ್ನೆಚರಿಕೆ ಕ್ರಮ ಕೈಗೊಳ್ಳಲಾಗಿದೆ. ಪಾರದರ್ಶಕ ಮತದಾನಕ್ಕಾಗಿ ಪೊಲೀಸ್‌ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
. ಇಕ್ರಮ ಶರೀಫ್‌,
ಸಹಾಯಕ ಚುನಾವಣಾಧಿಕಾರಿ ಮತ್ತು
ಉಪ ವಿಭಾಗಾಧಿಕಾರಿ, ಜಮಖಂಡಿ

ಟಾಪ್ ನ್ಯೂಸ್

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ

Rabkavi Banhatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು

4-

ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್‌ ಕದ್ದ ಅಪರಿಚಿತ ವ್ಯಕ್ತಿ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

death

Gangolli: ಲಾರಿ ಪ್ರಯಾಣದ ವೇಳೆ ಕ್ಲೀನರ್‌ ಸಾವು

accident2

Padubidri: ಅಪರಿಚಿತ ವಾಹನ ಢಿಕ್ಕಿ;‌ ಪಾದಚಾರಿಗೆ ತೀವ್ರ ಗಾಯ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

de

Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.