ಉತ್ತರಾಖಂಡದಲ್ಲಿ ಗುರುವಾರ ಪ್ರಧಾನಿ ಮೋದಿ ರಾಲಿ, ಸಾರ್ವಜನಿಕ ಭಾಷಣ
Team Udayavani, Mar 27, 2019, 3:30 PM IST
ಡೆಹರಾಡೂನ್ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಗುರುವಾರ ಉತ್ತರಾಖಂಡದ ಉಧಾಂಪುರ ಸಿಂಗ್ ನಗರ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ರಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಜಿಲ್ಲೆಯ ರುದ್ರಾಪುರ ನಗರದಲ್ಲಿ ಪ್ರಧಾನಿ ಮೋದಿ ಅವರು ಬೆಳಗ್ಗೆ 11 ಗಂಟೆಗೆ ರಾಲಿಯಲ್ಲಿ ಭಾಷಣ ಮಾಡುವರು ಎಂದು ಪ್ರದೇಶ ಬಿಜೆಪಿ ಕಾರ್ಯಾಧ್ಯಕ್ಷ ನರೇಶ್ ಬನ್ಸಾಲ್ ಇಂದಿಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಮಾಜಿ ಪ್ರದೇಶ ಬಿಜೆಪಿ ಕಾರ್ಯಾಧ್ಯಕ್ಷ ಅಜಯ್ ಭಟ್ ಅವನ್ನು ನೈನಿತಾಲ್ ಲೋಕಸಭಾ ಕ್ಷೇತ್ರದಿಂದ ಚುನಾವಣಾ ಕಣಕ್ಕೆ ಇಳಿಸಲಾಗಿರುವ ಪ್ರಯುಕ್ತ ನರೇಶ್ ಬನ್ಸಾಲ್ ಅವರು ಇಂದು ಬುಧವಾರವಷ್ಟೇ ಅಧಿಕಾರ ವಹಿಸಿಕೊಂಡಿದ್ದಾರೆ.
ಕಳೆದ ತಿಂಗಳಲ್ಲಿ ರುದ್ರಪುರದಲ್ಲಿ ನಡೆದಿದ್ದ ಶಂಖನಾದ ರಾಲಿಯಲ್ಲಿ ಭಾಷಣ ಮಾಡಲು ಮೋದಿ ಬಂದಿದ್ದರು. ಆದರೆ ಪ್ರತಿಕೂಲ ಹವಾಮಾನದಿಂದಾಗಿ ಕಾರ್ಯಕ್ರಮ ತಾಣಕ್ಕೆ ಹೋಗಲು ಅವರಿಗೆ ಸಾಧ್ಯವಾಗಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.