ಹಾವೇರಿಯಲ್ಲಿ ಲಿಂಗಾಯತರ ಕಾದಾಟ


Team Udayavani, Mar 28, 2019, 7:07 AM IST

93

ಹಾವೇರಿ: ಹಾವೇರಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ಗದಗ ಮೂಲದ ಡಿ.ಆರ್‌. ಪಾಟೀಲ ಅವರಿಗೆ ಪಕ್ಷ ಘೋಷಿಸಿದ್ದು ಹಲವು ದಿನಗಳಿಂದ ತಲೆದೊರಿದ್ದಗೊಂದಲ, ಕುತೂಹಲಗಳಿಗೆ ತೆರೆಬಿದ್ದಿದೆ. ಗದಗ ಮೂಲದ ಡಿ.ಆರ್‌. ಪಾಟೀಲ ಮಾಜಿ
ಶಾಸಕರು. 40 ವರ್ಷಗಳಿಂದ ಕಾಂಗ್ರೆಸ್‌ ಪಕ್ಷದಲ್ಲಿ ಗುರುತಿಸಿಕೊಂಡು ನಾಲ್ಕು ಬಾರಿ ವಿಧಾನ ಪರಿಷತ್‌ ಸದಸ್ಯರಾಗಿದ್ದಾರೆ. ಕಳೆದ ಎರಡೂ¾ರು ಲೋಕಸಭೆ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಗಳಾಗಿದ್ದರು. ಈ ಬಾರಿ ಅವರಿಗೆ ಪಕ್ಷ ಟಿಕೆಟ್‌ ಕೊಟ್ಟಿದೆ. ಟಿಕೆಟ್‌ ಹಂಚಿಕೆ ನಿರ್ಧರಿಸುವ ಪಕ್ಷದ ಸ್ಕ್ರೀನಿಂಗ್‌ಕಮಿಟಿ ಮುಂದೆ ಕುರುಬ ಸಮುದಾಯದ ಬಸವರಾಜ ಶಿವಣ್ಣನವರ ಹಾಗೂ ರಡ್ಡಿ ಲಿಂಗಾಯತ ಸಮುದಾಯದ ಡಿ.ಆರ್‌. ಪಾಟೀಲ ಹೆಸರು ಮಾತ್ರ ಹೋಗಿತ್ತು. ಕೊಪ್ಪಳ ಕ್ಷೇತ್ರದಲ್ಲಿ ಕುರುಬ ಸಮುದಾಯದ ರಾಜಶೇಖರ ಹಿಟ್ನಾಳ ಹಾಗೂ ಲಿಂಗಾಯತ ಸಮುದಾಯದ
ಬಸವರಾಜ ರಾಯರಡ್ಡಿ, ಬಸನಗೌಡ ಬಾದರ್ಲಿ ಪ್ರಮುಖ ಟಿಕೆಟ್‌ ಆಕಾಂಕ್ಷಿಗಳಾಗಿದ್ದರು. ಕೊಪ್ಪಳ ಕ್ಷೇತ್ರದಲ್ಲಿ ಕುರುಬ ಸಮುದಾಯದವರಿಗೆ ಟಿಕೆಟ್‌ ನೀಡಿದರೆ ಹಾವೇರಿಯಲ್ಲಿ ರಡ್ಡಿ ಲಿಂಗಾಯತರಿಗೆ ಟಿಕೆಟ್‌ ನೀಡಬೇಕು. ಒಂದು ವೇಳೆ ಕೊಪ್ಪಳದಲ್ಲಿ ಲಿಂಗಾಯತರಿಗೆ
ಟಿಕೆಟ್‌ ನೀಡಿದರೆ ಹಾವೇರಿಯಲ್ಲಿ ಕುರುಬ ಸಮುದಾಯದ ಮುಖಂಡರಿಗೆ ಟಿಕೆಟ್‌ ನೀಡಲು ಪಕ್ಷ ನಿರ್ಧರಿಸಿತ್ತು. ಆ ಪ್ರಕಾರ ಕೊಪ್ಪಳದಲ್ಲಿ ಕುರುಬ ಸಮುದಾಯದ ರಾಜಶೇಖರ ಹಿಟ್ನಾಳ ಅವರಿಗೆ ಟಿಕೆಟ್‌ ನೀಡಿದ ಪಕ್ಷ, ಹಾವೇರಿ ಕ್ಷೇತ್ರದಲ್ಲಿ ರಡ್ಡಿ ಲಿಂಗಾಯತ ಮುಖಂಡ ಡಿ.ಆರ್‌. ಪಾಟೀಲರಿಗೆ ಟಿಕೆಟ್‌ ಘೋಷಿಸಿದೆ.

ಡಿ.ಆರ್‌. ಪಾಟೀಲ ಕಳೆದ ಎರಡೂ¾ರು ಲೋಕಸಭೆ ಚುನಾವಣೆಯಲ್ಲಿ ಹಾವೇರಿ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಪ್ರತಿ ಬಾರಿಯೂ ಟಿಕೆಟ್‌ಗಾಗಿಸಲೀಂ ಅಹ್ಮದ್‌ ಹಾಗೂ ಡಿ.ಆರ್‌. ಪಾಟೀಲ ಅವರ ನಡುವೆ ಪೈಪೋಟಿ ನಡೆದು ಹೈಕಮಾಂಡ್‌ ಮೇಲೆ ಭಾರಿ ಒತ್ತಡ ಹೇರಲಾಗುತ್ತಿತ್ತು. ಡಿ.ಆರ್‌. ಪಾಟೀಲ ಅವರು ಎಚ್‌.ಕೆ. ಪಾಟೀಲ ಅವರ ಸಹೋದರರಾಗಿದ್ದು, ಅವರ ಮೂಲಕವೂ ಪ್ರಭಾವ ಬೀರುತ್ತಲೇ ಬಂದಿದ್ದರು. ಆದರೆ,
ಕಳೆದ ಎರಡು ಲೋಕಸಭೆ ಚುನಾವಣೆಗಳಲ್ಲಿಯೂ ಸಲೀಂ ಅಹ್ಮದ್‌ ಅವರು ಹೈಕಮಾಂಡ್‌ ಮೇಲೆ ಹೆಚ್ಚು ಪ್ರಭಾವ ಬೀರಿ ನಾಮಪತ್ರ ಸಲ್ಲಿಕೆಯ ಕೊನೆಯ
ದಿನಗಳಲ್ಲಿ ಬಿ ಫಾರ್ಮ್ ತಂದಿದ್ದರು.

ಟಿಕೆಟ್‌ ಸೆಣಸಾಟ
ಸಲೀಂ ಅಹ್ಮದ್‌, ಡಿ.ಆರ್‌. ಪಾಟೀಲ, ಬಸವರಾಜ ಶಿವಣ್ಣನವರ ಪ್ರಮುಖ ಆಕಾಂಕ್ಷಿಗಳಾಗಿದ್ದರು. ಎರಡು ಬಾರಿ ಸೋತಿರುವ ಕಾರಣವನ್ನು ಮುಂದಿಟ್ಟುಕೊಂಡು
ಈ ಬಾರಿ ಪಕ್ಷದ ಹೈಕಮಾಂಡ್‌ ಸಲೀಂ ಅಹ್ಮದ್‌ ಅವರಿಗೆ ಟಿಕೆಟ್‌ ನೀಡಲು
ನಿರಾಕರಿಸಿತು. ಹೈಕಮಾಂಡ್‌ನ‌ ಈ ನಿರ್ಧಾರದಿಂದ ಕಾಂಗ್ರೆಸ್‌ ಪಾಲಿಗೆ ಮುಸ್ಲಿಂ
ಮೀಸಲು ಕ್ಷೇತ್ರವಾಗಿದ್ದ ಹಾವೇರಿ ಕ್ಷೇತ್ರ ಸಾಮಾನ್ಯ ಕ್ಷೇತ್ರವಾಗಿ ಬದಲಾಯಿತು. ಈ
ಬಾರಿ ಕುರುಬ ಸಮುದಾಯದ ಮುಖಂಡ ಬಸವರಾಜ ಶಿವಣ್ಣನವರ ಹಾಗೂ ರಡ್ಡಿ
ಲಿಂಗಾಯತ ಮುಖಂಡ ಡಿ.ಆರ್‌. ಪಾಟೀಲ ಅವರ ನಡುವೆ ಟಿಕೆಟ್‌ಗಾಗಿ ಪ್ರಬಲ
ಸ್ಪರ್ಧೆ ಏರ್ಪಟ್ಟಿತ್ತು. ಈ ಬಾರಿ ಹೈಕಮಾಂಡ್‌ ಜಾತಿ ಲೆಕ್ಕಾಚಾರದ ಆಧಾರದಲ್ಲಿ ಟಿಕೆಟ್‌
ಹಂಚಿಕೆ ಮಾಡಿದ್ದರಿಂದ ಕಳೆದ ಎರಡು ಚುನಾವಣೆ ವೇಳೆ ಟಿಕೆಟ್‌ ಸ್ಪರ್ಧೆಯಲ್ಲಿ
ಸೋತಿದ್ದ ಡಿ.ಆರ್‌. ಪಾಟೀಲ ಅವರಿಗೆ ಈ ಬಾರಿ ಟಿಕೆಟ್‌ ಜಯ ಸಿಕ್ಕಿದೆ.

ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.