ರೌಡಿ ಮಂಜನ ಮನೆಯಲ್ಲಿ 8 ಲಕ್ಷ ರೂ. ಜಪ್ತಿ
Team Udayavani, Mar 29, 2019, 11:47 AM IST
ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರೌಡಿಗಳ ಚಟುವಟಿಕೆಗಳ ಮೇಲೆ ಹದ್ದಿನಕಣ್ಣಿಟ್ಟಿರುವ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಗುರುವಾರ ಬೆಳಗ್ಗೆ ನಗರದ ಹತ್ತು ಮಂದಿ ರೌಡಿಗಳ ನಿವಾಸಗಳಲ್ಲಿ ಏಕಕಾಲದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದು,ರೌಡಿಯೊಬ್ಬನ ನಿವಾಸದಲ್ಲಿ ದಾಖಲೆಯಿಲ್ಲದ 8 ಲಕ್ಷ ರೂ ಜಪ್ತಿ ಮಾಡಿಕೊಂಡಿದೆ.
ಸಿಸಿಬಿಯ 10 ತಂಡಗಳು ರೌಡಿಗಳಾದ ಮಂಜುನಾಥ್ ಅಲಿಯಾಸ್ ಅಪ್ಪಿ, ಡಾಬರ್ ಮೂರ್ತಿ, ರೌಡಿ ಲಕ್ಷ್ಮಣನ ಸಹಚರನಾಗಿದ್ದ ಆ್ಯಪಲ್ ಸಂತು, ಡಬಲ್ ಮೀಟರ್ ಮೋಹನ, ವಿಲ್ಸನ್ ಗಾರ್ಡನ್ ನಾಗ, ಕೋತಿರಾಮ, ಧೋಬಿಘಾಟ್ ನಾಗ,ಲಕ್ಷ್ಮಣನ ಹತ್ಯೆ ಪ್ರಕರಣದ ಆರೋಪಿಗಳಾದ ಕ್ಯಾಟ್ರಾಜ, ರೂಪೇಶ, ಹೇಮಿ ಮನೆಗಳಲ್ಲಿ ಶೋಧ ಕಾರ್ಯಚರಣೆ ನಡೆಸಿವೆ.
ಈ ಪೈಕಿ ಹಂದ್ರಳ್ಳಿಯಲ್ಲಿರುವ ಮಂಜುನಾಥ್ ನಿವಾಸದಲ್ಲಿ ದೊರೆತ ಎಂಟು ಲಕ್ಷ ರೂ.ಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಇದುವರೆಗೂ ಆತ ಹಣಕ್ಕೆ ದಾಖಲೆಯನ್ನು ಒದಗಿಸಿಲ್ಲ. ಅದೇ ರೀತಿ ಕೆಲ ಆರೋಪಿಗಳ ಮನೆಯಲ್ಲಿ ದೊರೆತ ಪೆಪ್ಪರ್ ಸ್ಪ್ರೆ„ ಬಾಟಲ್ ಹಾಗೂ ಡ್ರ್ಯಾಗರ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ರೌಡಿಗಳ ಮೇಲೆ ನಿಗಾ ಇಡಲಾಗಿದೆ. ಹೀಗಾಗಿ ಮುಂಜಾಗ್ರತಾ ಸಲುವಾಗಿ ರೌಡಿಗಳ ನಿವಾಸಗಳ ಮೇಲೆ ಶೋಧ ಕಾರ್ಯಾಚರಣೆ ನಡೆಸಲಾಗಿದೆ. ಜತೆಗೆ, ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗದಂತೆ ಎಚ್ಚರಿಕೆ ನೀಡಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!
Bengaluru: ಮೆಜೆಸ್ಟಿಕ್ ಬಳಿ ಬಿಎಂಟಿಸಿ ಬಸ್ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು
Bengaluru: ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮತ್ತೆ 9 ಮೊಬೈಲ್ ಫೋನ್ಗಳು ಪತ್ತೆ!
Leopard: ಎಲೆಕ್ಟ್ರಾನಿಕ್ ಸಿಟಿ ಎನ್ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ
Anekal: ಶಾಲಾ ಬಸ್ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.