ವಿದರ್ಭ: ವಿರಾಜಮಾನರು ಯಾರು?

ಪಕ್ಷಗಳಿಗೆ ರೈತರ ಆತ್ಮಹತ್ಯೆ, ಮೂಲಸೌಕರ್ಯ ವೃದ್ಧಿಯ ಸವಾಲು

Team Udayavani, Mar 30, 2019, 6:00 AM IST

z-8

ಮಣಿಪಾಲ: ವಿದರ್ಭ! ದೇಶದಲ್ಲೇ ಅತಿ ಹೆಚ್ಚು ತೀವ್ರತೆಯ ಬರಗಾಲದ ಪ್ರದೇಶ. ಮಹಾರಾಷ್ಟ್ರದ ಈ ಪ್ರಾಂತ್ಯ ದೇಶದಲ್ಲೇ ಅತಿ ಹೆಚ್ಚು ರೈತರ ಆತ್ಮಹತ್ಯೆಯನ್ನು ಕಂಡಿದೆ. ಇದರೊಂದಿಗೆ ನಕ್ಸಲ್‌ ಸಮಸ್ಯೆಯೂ ಇದೆ. ಇಂತಹ ಪ್ರದೇಶದಲ್ಲಿ ಈ ಬಾರಿ ಗೆಲುವು ಯಾರಿಗೆ ಎಂಬುದು ತೀವ್ರ ಕುತೂಹಲದ ಪ್ರಶ್ನೆ.

2014ರಲ್ಲಿ ಇಲ್ಲಿ ಶಿವಸೇನೆ ಮತ್ತು ಬಿಜೆಪಿ ಮೈತ್ರಿಕೂಟ ಕ್ಲೀನ್‌ ಸ್ವೀಪ್‌ ಮಾಡಿತ್ತು. 2009ರಲ್ಲಿ ಈ ಮೈತ್ರಿಕೂಟಕ್ಕೆ ಮಿಶ್ರ ಫ‌ಲ ಸಿಕ್ಕಿದ್ದು ಬಿಜೆಪಿ-ಶಿವಸೇನೆಗೆ ಮತ್ತು ನ್ಯಾಷನಲಿಸ್ಟ್‌ ಕಾಂಗ್ರೆಸ್‌ ಪಾರ್ಟಿ (ಎನ್‌ಸಿಪಿ)-ಕಾಂಗ್ರೆಸ್‌ ಮೈತ್ರಿಕೂಟ ತಲಾ ಐದು ಸ್ಥಾನಗಳನ್ನು ಪಡೆದಿದ್ದವು.

10 ಸ್ಥಾನಗಳು
ವಿದರ್ಭ ಭಾಗದಲ್ಲಿ 10 ಲೋಕಸಭಾ ಸ್ಥಾನಗಳಿದ್ದು, ಪೂರ್ವ ಮತ್ತು ಪಶ್ಚಿಮ ವಿದರ್ಭ ಎಂದು ಗುರುತಿಸಲಾಗುತ್ತದೆ. ಪೂರ್ವ ಭಾಗದಲ್ಲಿ ನಾಗ್ಪುರ, ಭಂಡಾರ, ಚಂದ್ರಾಪುರ್‌, ಗಢ್‌ಚಿರೋಲಿ, ಗೊಂಡಿಯಾ ಮತ್ತು ವಾರ್ಧಾ ಜಿಲ್ಲೆಗಳಿದ್ದರೆ, ಪಶ್ಚಿಮದಲ್ಲಿ ಅಕೋಲಾ, ಅಮರಾವತಿ, ಬುಲಾœನಾ, ಯಾವತ್ಮಾಲ್‌, ವಾಶಿಮ್‌ ಲೋಕಸಭಾ ಕ್ಷೇತ್ರಗಳಿವೆ.

ಕ್ಲೀನ್‌ಸ್ವೀಪ್‌
2014ರಲ್ಲಿ ಬಿಜೆಪಿ ಮೈತ್ರಿಕೂಟ 10 ಸ್ಥಾನಗಳನ್ನು ಬುಟ್ಟಿಗೆ ಹಾಕಿಕೊಂಡಿತ್ತು. 2004ರಲ್ಲಿ ಇದು 9 ಸ್ಥಾನಗಳಲ್ಲಿ ಗೆದ್ದಿತ್ತು. ಮೋದಿ ಅಲೆ ಹೊರತಾಗಿ ಈ ಭಾಗವನ್ನು ಎನ್‌ಸಿಪಿ-ಕಾಂಗ್ರೆಸ್‌ ರಾಜ್ಯ ಸರಕಾರ ಇದ್ದಾಗ ತಿರಸ್ಕಾರದಿಂದ ನೋಡಿದ್ದ ಕಾರಣ ಮತದಾರರು ಬಿಜೆಪಿ ಮೈತ್ರಿಕೂಟಕ್ಕೆ ಜೈ ಎಂದಿದ್ದರು.

ಈ ಬಾರಿ ಬಿಗ್‌ ಫೈಟ್‌
ಈ ಬಾರಿಯ ಚುನಾವಣೆಯಲ್ಲಿ ಹಲವು ಖ್ಯಾತನಾಮರು ಈ ಭಾಗದಿಂದ ಸ್ಪರ್ಧಿಸುತ್ತಿದ್ದಾರೆ. ಸಚಿವರಾದ ನಿತಿನ್‌ ಗಡ್ಕರಿ ನಾಗ್ಪುರದಿಂದ ಹನ್ಸರಾಜ್‌ ಅಹಿರ್‌ ಅವರು ಚಂದ್ರಾಪುರ್‌ನಿಂದ ಸ್ಪರ್ಧಿಸಲಿದ್ದಾರೆ. ವರೊಂದಿಗೆ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಮಾಣಿಕ್‌ರಾವ್‌ ಠಾಕ್ರೆ ಯಾವತ್ಮಾಲ್‌-ವಾಶಿಮ್‌ನಿಂದ ಸ್ಪರ್ಧಿಸಲಿದ್ದಾರೆ.

ಸಮಸ್ಯೆಗಳೇನು?
ಕಳೆದ 5 ವರ್ಷಗಳಲ್ಲಿ ಇಲ್ಲಿನ ಗ್ರಾಮೀಣ ಆರ್ಥಿಕತೆ ಬದಲಾವಣೆ ಕಂಡಿಲ್ಲ. ರೈತರ ಬೆಳೆಗಳಿಗೆ ಕನಿಷ್ಠ ದರ ನೀಡುವ ಪ್ರಸ್ತಾಪ ಕಾಗದದಲ್ಲೇ ಉಳಿದಿದೆ. ಕೇಂದ್ರ ತೊಗರಿಗೆ 5650 ರೂ. ಬೆಂಬಲ ಬೆಲೆ ಘೋಷಿಸಿದ್ದರೂ, ಇಲ್ಲಿ 5 ಸಾವಿರ ರೂ. ಮಾತ್ರ ಬೆಲೆ ನೀಡಲಾಗುತ್ತಿದೆ. 2018ರಲ್ಲಿ 1297 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರೆ, ವಿದರ್ಭ ಮತ್ತು ಮರಾಠವಾಡದಲ್ಲಿ 2244 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.