
ಮಿಷನ್ ಶಕ್ತಿ ಭಾಷಣ: ಮೋದಿಗೆ ಕ್ಲೀನ್ಚಿಟ್
Team Udayavani, Mar 30, 2019, 6:00 AM IST

ಹೊಸದಿಲ್ಲಿ: ಉಪಗ್ರಹ ನಿಗ್ರಹ ತಂತ್ರಜ್ಞಾನ “ಮಿಷನ್ ಶಕ್ತಿ’ ಪ್ರಕಟನೆಗೆ ಸಂಬಂಧಿ ಪ್ರಕರಣದಲ್ಲಿ ಪ್ರಧಾನಿ ಮೋದಿಯವರಿಗೆ ಕೇಂದ್ರ ಚುನಾವಣ ಆಯೋಗ ಕ್ಲೀನ್ ಚಿಟ್ ನೀಡಿದೆ. ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ನೀಡಿದ್ದ ದೂರಿನನ್ವಯ ಸಮಿತಿಯೊಂದನ್ನು ರಚಿಸಿದ್ದ ಆಯೋಗ ತನಿಖೆ ನಡೆಸಿದೆ. ಈ ಸಮಿತಿಯು ಪ್ರಧಾನಿ ಮೋದಿ ನೀತಿ ಸಂಹಿತೆ ಉಲ್ಲಂಘನೆ ಮಾಡಿಲ್ಲ ಎಂಬ ತೀರ್ಮಾನಕ್ಕೆ ಬಂದಿದೆ.
ಸರಕಾರಿ ದೂರದರ್ಶನದಲ್ಲೂ ಮೋದಿ ಭಾಷಣ ನೇರಪ್ರಸಾರವಾಗಿತ್ತು. ಹೀಗಾಗಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂಬ ಯೆಚೂರಿ ಅವರ ಆಕ್ಷೇಪಣೆಗೆ ಸಮಿತಿ ಉತ್ತರಿಸಿದೆ. ಈ ಬಗ್ಗೆ ಡಿಡಿ ನ್ಯೂಸ್ನಿಂದ ಸ್ಪಷ್ಟೀಕರಣ ಕೇಳಿದಾಗ, ಅದು ಖಾಸಗಿ ಸುದ್ದಿಸಂಸ್ಥೆ ಎಎನ್ಐನಿಂದ ದೃಶ್ಯಾವಳಿ ಪಡೆದಿದ್ದಾಗಿ ತಿಳಿಸಿದೆ. ಇಲ್ಲೂ ನೀತಿ ಸಂಹಿತೆ ಉಲ್ಲಂಘನೆಯಾಗಿಲ್ಲ ಎಂದು ಸಮಿತಿ ಉತ್ತರಿಸಿದೆ.
ಉಪಗ್ರಹ ನಿಗ್ರಹ ತಂತ್ರಜ್ಞಾನವನ್ನು ಡಿಆರ್ಡಿಒ ವಿಜ್ಞಾನಿಗಳು ಬುಧವಾರ ಯಶಸ್ವಿಯಾಗಿ ಪರೀಕ್ಷಿಸಿದ್ದರು. ಆ ಮೂಲಕ ಭಾರತ, ಈ ತಂತ್ರಜ್ಞಾನವುಳ್ಳ 4ನೇ ರಾಷ್ಟ್ರವಾಗಿತ್ತು. ಈ ಯಶಸ್ಸನ್ನು ಬುಧವಾರ ದೇಶವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಪ್ರಧಾನಿ ಘೋಷಿಸಿದ್ದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
MUST WATCH
ಹೊಸ ಸೇರ್ಪಡೆ

Puttur: ಬಸ್ – ಬೈಕ್ ಅಪಘಾತ; ಸವಾರ ಸಾವು

Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ

BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.