ಅಂಗವಿಕಲರೇ ಕಾರ್ಯನಿರ್ವಹಿಸಲು ಮತಗಟ್ಟೆ ಸ್ಥಾಪನೆ


Team Udayavani, Mar 31, 2019, 1:08 PM IST

angavikalara

ರಾಮನಗರ: ಏಪ್ರಿಲ್‌ 18ರಂದು ನಡೆಯುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಗೆ 2672 ಮತಗಟ್ಟೆಗಳು ಸಿದ್ಧವಾಗಲಿದೆ. ಪಿಂಕ್‌ ಮತಗಟ್ಟೆಗಳ ಮಾದರಿಯಲ್ಲೇ ಈ ಬಾರಿ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ತಲಾ ಒಂದು ಅಂಗವಿಕಲ (ಪರ್ಸನ್‌ ವಿತ್‌ ಡಿಸೆಬಿಲಿಟಿ) ಮತಗಟ್ಟೆಯನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ.

ಕಳೆದ ವಿಧಾನಸಭಾ ಚುನಾವಣೆ ವೇಳೆಯಲ್ಲಿ ರಾಜ್ಯದ ಇತಿಹಾಸದಲ್ಲೇ ಪ್ರಥಮ ಬಾರಿಗೆ ಪಿಂಕ್‌ ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಮಹಿಳಾ ಅಧಿಕಾರಿಗಳು, ಸಿಬ್ಬಂದಿಗಳೇ ಈ ಮತಗಟ್ಟೆಗಳನ್ನು ನಿರ್ವಹಿಸಿ, ಮತದಾರರ ಪ್ರಶಂಸೆಗೆ ಪಾತ್ರರಾಗಿದ್ದರು. ಈ ಬಾರಿ ಅಂಗವಿಕಲರು ನಿರ್ವಹಿಸುವ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ.

ಅಂಗವಿಕಲರೇ ಅಧಿಕಾರಿ, ಸಿಬ್ಬಂದಿ: ಇಂತಹ ಮತಗಟ್ಟೆಗಳನ್ನು ನಿರ್ವಹಿಸುವ ಹೊಣೆಯನ್ನು ಅಂಗವಿಕಲ ಅಧಿಕಾರಿಗಳು, ಸಿಬ್ಬಂದಿಗಳೇ ವಹಿಸಲಿದ್ದಾರೆ ಎಂಬುದು ವಿಶೇಷ. ಸಾಮಾನ್ಯವಾಗಿ ಅಂಗವಿಕಲ ಸರ್ಕಾರಿ ನೌಕರರನ್ನು ಚುನಾವಣಾ ಕಾರ್ಯಕ್ಕೆ ಬಳಸಿಕೊಳ್ಳುವುದಿಲ್ಲ. ಆದರೆ, ಜಿಲ್ಲೆಯ ಹಿರಿಯ ಅಧಿಕಾರಿಗಳು ಈಗಾಗಲೇ ಅಂಗವಿಕಲ ಸರ್ಕಾರಿ ನೌಕರರು, ಅಧಿಕಾರಿಗಳ ಬಳಿ ಚರ್ಚಿಸಿದ್ದಾರೆ. ಚುನಾವಣಾ ಕಾರ್ಯಕ್ಕೆ ಒಪ್ಪಿಗೆ ಸೂಚಿಸಿದವರ ಪಟ್ಟಿಯನ್ನು ಸಿದ್ಧಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಂಗವಿಕಲರು ನಿರ್ವಹಿಸುವ ಬೂತ್‌ಗಳು ಯಾವುವು?: ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಬೂತ್‌ ಸಂಖ್ಯೆ- 91 (ಕುಮುಂದನ್‌ ಮೊಹಲ್ಲ), ಮಾಗಡಿ ವಿಧಾನಸಭಾ ಕ್ಷೇತ್ರದಲ್ಲಿ ಬೂತ್‌ ಸಂಖ್ಯೆ- 169 (ಅವ್ವೆàರಹಳ್ಳಿ), ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಬೂತ್‌ ಸಂಖ್ಯೆ- 35 (ಸೋಮೇದ್ಯಾಪನಹಳ್ಳಿ) ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಬೂತ್‌ ಸಂಖ್ಯೆ- 69 (ಸ್ಪನ್‌ ಸಿಲ್ಕ್ ಮಿಲ್‌). ಈ ಮತಗಟ್ಟೆಗಳನ್ನು ಅಂಗವಿಕಲರ ಮತಗಟ್ಟೆಗಳಾಗಿ ಪರಿವರ್ತನೆಯಾಗುತ್ತವೆ.

ಮತಗಟ್ಟೆಗೆ ತಲುಪಲು ವಾಹನ ವ್ಯವಸ್ಥೆ: ಮತದಾನದಿಂದ ಯಾರೂ ಹಿಂದುಳಿಯಬಾರದು ಎಂಬ ಉದ್ದೇಶಕ್ಕೆ ಚುನಾವಣಾ ಆಯೋಗ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಕ್ರಮಗಳನ್ನು ಕೈಗೊಂಡಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲೂ ಮತಗಟ್ಟೆಗೆ ತಲುಪಲು ಆಯೋಗವೇ ವಾಹನ ವ್ಯವಸ್ಥೆ ಮಾಡಿತ್ತು.

ಪ್ಲೇಸ್ಟೋರ್‌ನಲ್ಲಿ ಸಿಗುವ ಚುನವಣಾ ಆ್ಯಪ್‌ ಮೂಲಕ ಅಂಗವಿಕಲರು ಎಪಿಕ್‌ ಕಾರ್ಡ್‌ನಲ್ಲಿರುವ ಸ್ಥಳದಿಂದ ತಾವು ಮತ ಚಲಾಯಿಸುವ ಮತಗಟ್ಟೆಗೆ ತೆರಳಲು ವಾಹನಕ್ಕೆ ಬೇಡಿಕೆ ಇಡಬಹುದಾಗಿದೆ. ಮತಗಟ್ಟೆಯ ಆವರಣದಲ್ಲಿ ವೀಲ್‌ಚೇರ್‌ಗಳು ಮತ್ತು ರ್‍ಯಾಂಪ್‌ ವ್ಯವಸ್ಥೆ ಇರುತ್ತದೆ. ಅಂಗವಿಕಲರು ಮತ ಚಲಾಯಿಸಲು ಸರದಿಯಲ್ಲಿ ಕಾಯಬೇಕಾಗಿಲ್ಲ.

ಹೀಗಾಗಿ ಅಂಗವಿಕಲರು ಯಾವುದೇ ಅತಂಕ ಇಲ್ಲದೆ ಮತದಾನಕ್ಕೆ ತೆರಳಬಹುದಾಗಿದೆ. ಸ್ವೀಪ್‌ ಸಮಿತಿ ಈಗಾಗಲೇ ವಿಧಾನಸಭಾವಾರು ಅಂಗವಿಕಲರ ಪಟ್ಟಿ ಸಿದ್ಧಪಡಿಸಿದೆ. ಯಾವ ಮತಗಟ್ಟೆಗಳಲ್ಲಿ ಅಂಗವಿಕಲರು ಇದ್ದಾರೆ ಎಂಬುದನ್ನು ಗುರುತಿಸಲಾಗಿದೆ. ಇಂತಹ ಮತಗಟ್ಟೆಗಳಲ್ಲಿ ರ್‍ಯಾಂಪ್‌ಗ್ಳನ್ನು ಈಗಾಗಲೇ ನಿರ್ಮಿಸಲಾಗಿದೆ.

ಯಾವ ವಿಧಾನಸಭಾ ಕ್ಷೇತ್ರದಲ್ಲಿ ಎಷ್ಟು ಅಂಗವಿಕಲ ಮತದಾರರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 13109 ಅಂಗವಿಕಲ ಮತದಾರರಿದ್ದಾರೆ. ಈ ಪೈಕಿ ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ 2062 ಮಂದಿ, ಕನಕಪುರ ತಾಲೂಕಿನಲ್ಲಿ 2321 ಜನ, ಚನ್ನಪಟ್ಟಣ ತಾಲೂಕಿನಲ್ಲಿ 3310 ಮಂದಿ, ಮಾಗಡಿಯಲ್ಲಿ 2337, ಕುಣಿಗಲ್‌ನಲ್ಲಿ 2293, ರಾಜರಾಜೇಶ್ವರಿ ನಗರದಲ್ಲಿ 172, ಬೆಂಗಳೂರು ದಕ್ಷಿಣದಲ್ಲಿ 221, ಆನೇಕಲ್‌ ತಾಲೂಕಿನಲ್ಲಿ 393 ಮಂದಿ ಅಂಗವಿಕಲ ಮತದಾರರಿದ್ದಾರೆ.

ರಾಮನಗರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ತಲಾ ಒಂದು ಅಂಗವಿಕಲ ಮತಗಟ್ಟೆಯನ್ನು (ಪಿಡಬುಡಿ) ಸ್ಥಾಪಿಸಲಾಗುತ್ತಿದೆ. ಈ ಮತಗಟ್ಟೆಗಳಲ್ಲಿ ಎಲ್ಲಾ ಅಂಗವಿಕಲರೇ ಕಾರ್ಯನಿರ್ವಹಿಸಲಿದ್ದಾರೆ. ಈಗಾಗಲೇ ಮತಗಟ್ಟೆಗಳನ್ನು ಗುರುತಿಸಲಾಗಿದೆ. ಅಧಿಕಾರಿ, ಸಿಬ್ಬಂದಿಯ ಪಟ್ಟಿಯನ್ನು ಸಿದ್ಧಪಡಿಸಿಲಾಗಿದೆ.
-ಬಿ.ಪಿ.ವಿಜಯ್‌, ಅಪರ ಜಿಲ್ಲಾಧಿಕಾರಿ, ರಾಮನಗರ ಜಿಲ್ಲೆ

* ಬಿ.ವಿ.ಸೂರ್ಯ ಪ್ರಕಾಶ್‌

ಟಾಪ್ ನ್ಯೂಸ್

ramesh

BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Explainer: ವಯನಾಡ್‌ ಲೋಕಸಮರ- ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Explainer: ವಯನಾಡ್‌ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY-ELECTION: ಡಿ.ಕೆ.ಶಿವಕುಮಾರ್‌ ಮುಂದಿನ ಸಿಎಂ: ಚರ್ಚೆ ಮತ್ತೆ ಆರಂಭ

BY-ELECTION: ಡಿ.ಕೆ.ಶಿವಕುಮಾರ್‌ ಮುಂದಿನ ಸಿಎಂ: ಚರ್ಚೆ ಮತ್ತೆ ಆರಂಭ

DKsuresh–CPY

By Election: ಎಚ್‌ಡಿಕೆ ಯಾವ ಒಕ್ಕಲಿಗ ನಾಯಕ ಬೆಳೆಯುವುದನ್ನೂ ಸಹಿಸಲ್ಲ: ಡಿ.ಕೆ.ಸುರೇಶ್‌

BY-Election: ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ನ ತಂಡದಿಂದ ನಿಖಿಲ್‌ಗೆ ಬೆಂಬಲ: ಅಶೋಕ್‌

BY-Election: ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ನ ತಂಡದಿಂದ ನಿಖಿಲ್‌ಗೆ ಬೆಂಬಲ: ಅಶೋಕ್‌

ನಾಮಪತ್ರ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ

Channapatna By election: ನಾಮಪತ್ರ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ

NDA: ಮೈತ್ರಿ ಅಭ್ಯರ್ಥಿಯಾಗಿ ಇಂದು ನಿಖಿಲ್‌ ನಾಮಪತ್ರ ಸಲ್ಲಿಕೆ

NDA: ಮೈತ್ರಿ ಅಭ್ಯರ್ಥಿಯಾಗಿ ಇಂದು ನಿಖಿಲ್‌ ನಾಮಪತ್ರ ಸಲ್ಲಿಕೆ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Kaup LaxmiJanardhana Temple: Manohar Shetty elected as Management Committee Chairman

Kaup LaxmiJanardhana Temple: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಆಯ್ಕೆ

Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ

Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ

ramesh

BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Explainer: ವಯನಾಡ್‌ ಲೋಕಸಮರ- ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Explainer: ವಯನಾಡ್‌ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.