ಅವರಿಗೆ ವೈಯಕ್ತಿಕ ಹಿತಾಸಕ್ತಿಯೇ ಮುಖ್ಯ
Team Udayavani, Apr 1, 2019, 6:10 AM IST
ಹೊಸದಿಲ್ಲಿ: ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿತ್ತು. ರಾಷ್ಟ್ರೀಯ ಹಿತಾಸಕ್ತಿಯನ್ನು ಕಡೆಗಣಿಸಿ ವೈಯಕ್ತಿಕ ಹಿತಾಸಕ್ತಿಯೇ ಮುಖ್ಯ ಎಂದು ಪರಿಗಣಿಸಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ.
ಟಿವಿ9 ಭಾರತವರ್ಷ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಉಪಗ್ರಹ ನಿರೋಧಕ ಕ್ಷಿಪಣಿ ತಂತ್ರಜ್ಞಾನ ನಮ್ಮ ಬಳಿ ಇದ್ದರೂ ಅದನ್ನು ಪರೀಕ್ಷಿ ಸಲು ಕಾಂಗ್ರೆಸ್ ಸರಕಾರ ಮನಸು ಮಾಡಿರಲಿಲ್ಲ. ಕೆಲಸ ಮಾಡಿ ಎಂದು ಜನರು ಆಯ್ಕೆ ಮಾಡಿ ಕಳುಹಿಸಿದರೆ, ಕಾಂಗ್ರೆಸ್ ತನ್ನ ಜವಾಬ್ದಾರಿ ಮರೆ ತಿತ್ತು ಎಂದು ಮೋದಿ ಟೀಕಿಸಿದ್ದಾರೆ.ನಮ್ಮ ಸರಕಾರ ಬದ್ಧತೆಯಲ್ಲಿ ವಿಶ್ವಾಸ ಹೊಂದಿದೆ.
ಹಿಂದಿನ ಸರಕಾರವು ಕಪ್ಪು ಹಣ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಲು ವಿಳಂಬ ಮಾಡಿತ್ತು. ನಮ್ಮ ಸರಕಾರ ಅಸ್ತಿತ್ವಕ್ಕೆ ಬಂದ ಮೊದಲ ಸಂಪುಟ ಸಭೆಯಲ್ಲೇ ನಾವು ಎಸ್ಐಟಿ ರಚಿಸಲು ನಿರ್ಧರಿಸಿದೆವು. ವಿದೇಶದಿಂದ ಕಪ್ಪು ಹಣ ತರುವಲ್ಲಿ ಯುಪಿಎ ಸರಕಾರ ಯಾವ ಕ್ರಮವನ್ನೂ ಕೈಗೊಳ್ಳಲಿಲ್ಲ. ವಿದೇಶದೊಂದಿಗೆ ನಮ್ಮ ಸರಕಾರದ ಒಪ್ಪಂದ ಬಲಹೀನವಾಗಿದ್ದವು ಎಂದು ಟೀಕಿಸಿದ್ದಾರೆ.
ನೀರವ್ ಮೋದಿಯ ಪರೋಕ್ಷ ಪ್ರಸ್ತಾಪ ಮಾಡಿದ ಪ್ರಧಾನಿ, ಆಗ ಫೋನ್ ಮಾಡಿದರೆ ಬ್ಯಾಂಕ್ಗಳು ಸಾಲ ನೀಡುತ್ತಿ ದ್ದವು. ಇಂತಹ ಬಹುತೇಕ ಸಾಲಗಳನ್ನು ಹಿಂದಿನ ಸಾಲ ಮರುಪಾವತಿಗಾಗಿ ನೀಡಲಾಗುತ್ತಿತ್ತು. ಇದನ್ನು ನಾವು ಬದಲಿಸಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.