ಬಂಟ್ವಾಳ: ಇವಿಎಂ ಯಂತ್ರ ನಿಭಾವಣೆ ಮಾಹಿತಿ, ತರಬೇತಿ


Team Udayavani, Apr 1, 2019, 3:02 PM IST

01-April-12

ಇವಿಎಂ ಯಂತ್ರ ಸಹಿತ ವಿವಿಧ ಮಾಹಿತಿ ತರಬೇತಿ ಕಾರ್ಯಕ್ರಮ ನಡೆಯಿತು.

ಬಂಟ್ವಾಳ : ಲೋಕಸಭೆ ಚುನಾವಣೆ ಸಹಜ ಮತದಾನ ಪ್ರಕ್ರಿಯೆ ನಡೆಯುವಂತೆ ಮಾ. 31ರಂದು ಮೊಡಂಕಾಪು ಇನ್ಫೆಂಟ್‌ ಜೀಸಸ್‌ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಮತಗಟ್ಟೆ ಅಧಿಕಾರಿಗಳಿಗೆ ಇವಿಎಂ ಯಂತ್ರ ಸಹಿತ ವಿವಿಧ ಮಾಹಿತಿ ತರಬೇತಿ ಸಹಾಯಕ ಚುನಾವಣಾಧಿಕಾರಿ ಮಹೇಶ್‌ ನೇತೃತ್ವದಲ್ಲಿ ನಡೆಯಿತು.

576 ಮಂದಿ ಅಧಿಕಾರಿಗಳು
ಒಟ್ಟು 576 ಮಂದಿ ಅಧಿಕಾರಿಗಳು ತರಬೇತಿಯಲ್ಲಿ ಭಾಗವಹಿಸಿದ್ದು ಇಬ್ಬರು ಗೈರಾಗಿದ್ದರು. ತರಬೇತಿ ಕೇಂದ್ರದ ಬಳಿ ಆ್ಯಂಬುಲೆನ್ಸ್‌ ವ್ಯವಸ್ಥೆ, ಊಟೋಪಚಾರ, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿತ್ತು. ಪವರ್‌ ಪಾಯಿಂಟ್‌ ಆಡಿಯೋ ಮತ್ತು ವೀಡಿಯೋ ಮೂಲಕ ಪ್ರಾತ್ಯಕ್ಷಿಕೆಯಲ್ಲಿ ಚುನಾವಣೆ ಹೇಗೆ ನಡೆಯುತ್ತದೆ. ಅಲ್ಲಿ ಬರುವ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಲಾಯಿತು. ಮಧ್ಯಾಹ್ನ ಅನಂತರ ಇವಿಎಂ ಬಳಸುವುದು ಹೇಗೆ, ಅಂಧ ಮತದಾರರು ಬಂದರೆ ಅವರು ಹೇಗೆ ಮತದಾನ ಮಾಡುವುದು, ಇವಿಎಂ ದೋಷದ ಸಮಸ್ಯೆ ಬಂದರೆ ಅದನ್ನು ನಿಭಾಯಿಸುವ ಕ್ರಮ, ವಿವಿ ಪ್ಯಾಟ್‌ ಮತ್ತು ಮತದಾನ ಪ್ರಕ್ರಿಯೆಗಳಲ್ಲಿ ಆಧುನಿಕ ತಂತ್ರಜ್ಞಾನ ಕುರಿತು ತಿಳಿಸಲಾಯಿತು. ಇಬ್ಬರು ಇಡಿಸಿ ಅಧಿಕಾರಿಗಳು ಚುನಾವಣೆಯಂದು ಅರ್ಜಿ ನಮೂನೆ 12, 12ಎ ನೀಡುವ ಮತ್ತು ಪಡೆದುಕೊಳ್ಳುವ ಬಗ್ಗೆ ಮಾಹಿತಿ ನೀಡಿದರು.

ತರಬೇತಿ ಕೇಂದ್ರದ ಬಳಿ ವಿಶೇಷವಾಗಿ ಸ್ವಾಗತ ಕೊಠಡಿ ಇದ್ದು, ತರಬೇತಿ ಪಡೆಯಲು ಬಂದವರಿಗೆ ಸಹಕಾರಿಯಾಗಲು ಮಾಹಿತಿ ಕೇಂದ್ರದ ವ್ಯವಸ್ಥೆ ಮಾಡಲಾಗಿತ್ತು.

ಮುಂದಿನ ಎ. 9 ರಂದು ಎರಡನೇ ಹಂತದ ತರಬೇತಿ ನಡೆಯಲಿದ್ದು ಅಂದು ಬೇರೆಬೇರೆ ತಾಲೂಕಿನ ಅಧಿಕಾರಿಗಳಿಗೆ ತರಬೇತಿ ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದು ತಹಶೀಲ್ದಾರ್‌ ಸಣ್ಣರಂಗಯ್ಯ ತಿಳಿಸಿದರು.

ತಾ.ಪಂ. ಕಾ.ನಿ. ಅಧಿಕಾರಿ ರಾಜಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಎನ್‌. ಶಿವಪ್ರಕಾಶ್‌, ಚುನಾವಣಾ ಉಪ ತಹಶೀಲ್ದಾರ್‌ ದಾದಾ ಫೈರೋಜ್‌, ಪ್ರಥಮ ದರ್ಜೆ ಸಹಾಯಕ ರಾಜ್‌ ಕುಮಾರ್‌, ಸದಾಶಿವ ಮತ್ತಿತರರು ಉಪಸ್ಥಿತರಿದ್ದರು.

21 ತರಬೇತಿ ಕೊಠಡಿ
ತರಬೇತಿಗೆ ಒಟ್ಟು 21 ತರಬೇತಿ ಕೊಠಡಿಗಳಿದ್ದು ಪ್ರತೀ ಕೊಠಡಿಯಲ್ಲಿ ಓರ್ವ ಸೆಕ್ಟರ್‌ ಆಫೀಸರ್‌, ಒಬ್ಬರು ಗ್ರಾಮಕರಣಿಕರು, ಓರ್ವ ಡಾಟಾ ಎಂಟ್ರಿ ಆರೇಟರ್‌ ಇದ್ದು ಮತಗಟ್ಟೆ ಅಧಿಕಾರಿಗಳಾದ ಪಿಆರ್‌ಒ ಮತ್ತು ಎಪಿಆರ್‌ಒಗಳು ವಿವಿಧ ಮಾಹಿತಿ ಪಡೆದರು.

ಟಾಪ್ ನ್ಯೂಸ್

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

1

Crime: ಯೂಟ್ಯೂಬ್‌ ನೋಡಿ ಪ್ರೇಯಸಿಯ 59 ತುಂಡು ಮಾಡಿದ್ದ ಹಂತಕ!

INDvsBAN: New openers for India in T20; Who is the opener with Sharma?

INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್‌ ಯಾರು?

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

5-belthanagdy

Belthanagdy:ಹಿರಿಯ ಸಹಕಾರಿ,ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸೇವಾಸಂಘದ ಅಧ್ಯಕ್ಷ ನಿಧನ

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Mangaluru: ಮುಮ್ತಾಜ್‌ ಅಲಿ ನಾಪತ್ತೆ; ಮುಂಜಾನೆ ವೇಳೆ ಆಗಿದ್ದೇನು?

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Dasara elephants: ದಸರಾ ಆನೆಗಳ ದಾದಾಗಿರಿ ದಿನಗಳು!

Udupi: ಗೀತಾರ್ಥ ಚಿಂತನೆ 56: ದುರ್ಯೋಧನನ ಮಾನಸಿಕ ಅಸಮತೋಲನ

Udupi: ಗೀತಾರ್ಥ ಚಿಂತನೆ 56: ದುರ್ಯೋಧನನ ಮಾನಸಿಕ ಅಸಮತೋಲನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.