‘ಕಾನೂನು ಮಾಹಿತಿ ಅತ್ಯಗತ್ಯ’
ಸಂಚಾರಿ ಜನತಾ ನ್ಯಾಯಾಲಯದ ಅಭಿಯಾನ
Team Udayavani, Apr 1, 2019, 3:14 PM IST
ಸಿವಿಲ್ ನ್ಯಾಯಾಧೀಶ, ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಕೆ.ಎಂ. ಆನಂದ ಮಾತನಾಡಿದರು.
ಬೆಳ್ತಂಗಡಿ : ಕಾನೂನುಬಾಹಿರ ಚಟುವಟಿಕೆ ತಡೆಗಟ್ಟುವಲ್ಲಿ ಪ್ರತಿಯೊಬ್ಬ ನಾಗರಿಕರಿಗೆ ಕಾನೂನು ಮಾಹಿತಿ ಅತ್ಯಗತ್ಯ ಎಂದು ತಾಲೂಕಿನ ಸಿವಿಲ್ ನ್ಯಾಯಾಧೀಶ, ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಕೆ.ಎಂ. ಆನಂದ ಹೇಳಿದರು.
ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಗ್ರಾಮೀಣ ಶ್ರೇಷ್ಠತಾ ಕೇಂದ್ರ, ಸಿ.ಆರ್.ಇ. ವತಿಯಿಂದ ಹಮ್ಮಿಕೊಂಡ ಕಾನೂನು ಸಾಕ್ಷರತಾ ರಥ ಹಾಗೂ ಸಂಚಾರಿ ಜನತಾ ನ್ಯಾಯಾಲಯದ ಅಭಿಯಾನ ಕಾರ್ಯಕ್ರಮದ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತರಬೇತಿ ಸಂಪನ್ಮೂಲ ವ್ಯಕ್ತಿ ನ್ಯಾಯವಾದಿ ಹರಿಪ್ರಕಾಶ್ ಪಿ.ಎನ್. ಮಾತನಾಡಿ, ಕೌಟುಂಬಿಕ ದೌರ್ಜನ್ಯಗಳು ಎದುರಾದಾಗ ಕಾನೂನು ರೀತಿಯಲ್ಲಿ ಯಾವ ಕ್ರಮಕೈಗೊಳ್ಳಬಹುದು ಎಂಬುದರ ಕುರಿತು ತಿಳಿಸಿದರು. ವಕೀಲರ ಸಂಘ ಅಧ್ಯಕ್ಷ ಸೇವಿಯರ್ ಪಾಲೇಲಿ ನೀರಿನ ಮಹತ್ವದ ಕುರಿತು ಮಾಹಿತಿ ನೀಡಿದರು.
ಗ್ರಾಮೀಣ ಶ್ರೇಷ್ಠತಾ ಕೇಂದ್ರದ ನಿರ್ದೇಶಕ ಕೆ. ಬೂದಪ್ಪ ಗೌಡ, ಪ್ರಾಂಶುಪಾಲ ಚಂದ್ರಶೇಖರ್.ಕೆ. ಉಪಸ್ಥಿತರಿದ್ದರು. ವಕೀಲರ ಸಂಘ ಪ್ರಧಾನ ಕಾರ್ಯದರ್ಶಿ ಮನೋಹರ್ ಕುಮಾರ್, ಸಹಾಯಕ ಸರ್ಕಾರಿ ಅಭಿಯೋಜಕ ಕಿರಣ್ ಕುಮಾರ್ ಜಿ.ಕೆ., ವಕೀಲರಾದ ನವೀನ್ ಬಿ.ಕೆ., ಮಮ್ತಾಜ್ ಬೇಗಂ, ಆನಂದ, ಶೈಲೇಶ್ ಠೊಸರ್ ಉಪಸ್ಥಿತರಿದ್ದರು. ಗ್ರಾಮೀಣ ಶ್ರೇಷ್ಠತಾ ಕೇಂದ್ರ ಉಪನ್ಯಾಸಕರಾದ ಬಾಲಕೃಷ್ಣ ಅಳಿಕೆ ಕಾರ್ಯಕ್ರಮ ನಿರ್ವಹಿಸಿದರು.
ಮಾಹಿತಿ ಶಿಬಿರ
ಸಮಾಜದಲ್ಲಿ ಶಾಂತಿ-ನೆಮ್ಮದಿ ನೆಲಸುವಂತಾಗಲು, ಜಾಗೃತ ಸಮಾಜ ನಿರ್ಮಾಣಕ್ಕಾಗಿ ಸಂಘ ಸಂಸ್ಥೆಗಳಿಂದ ಕಾನೂನು ಅರಿವು ಮಾಹಿತಿ ಶಿಬಿರ ಹಮ್ಮಿಕೊಳ್ಳಬೇಕು.
-ಕೆ.ಎಂ. ಆನಂದ
ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?
Vidya Balan; ಮತ್ತೆ ಬಂದಳು ಮಂಜುಳಿಕಾ!
Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.