![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 2, 2019, 5:00 AM IST
ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯ ಕೇಂದ್ರೀಕೃತ ದಾಖಲಾತಿ ಘಟಕ ನಡೆಸಿದ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)ಯ 13 ಪ್ರಶ್ನೆಗಳು ಮತ್ತು ಅವುಗಳಿಗೆ ಸಂಬಂಧಿಸಿದ ಗೊಂದಲ ಬಗೆಹರಿಸುವಂತೆ ಕೋರಿ ಏ.2ರಂದು ನೊಂದ ಅಭ್ಯರ್ಥಿಗಳು ನಗರದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಯಾವುದೇ ರೀತಿಯಲ್ಲೂ ಸಂಚಾರಕ್ಕೆ ತೊಂದರೆ ಮಾಡದಂತೆ ಪ್ರತಿಭಟನೆ ನಡೆಸಲು ಹಲಸೂರು ಪೊಲೀಸ್ ಠಾಣೆಯಿಂದ ಅನುಮತಿ ಪಡೆದುಕೊಂಡಿದ್ದೇವೆ. ಮೈಸೂರು ಬ್ಯಾಂಕ್ ವೃತ್ತದಲ್ಲಿರುವ ಕೇಂದ್ರೀಕೃತ ದಾಖಲಾತಿ ಘಟಕದ ಎದುರು ಪ್ರತಿಭಟನೆ ನಡೆಸಲಿದ್ದೇವೆ ಎಂದು ಅಭ್ಯರ್ಥಿಗಳು “ಉದಯವಾಣಿ’ಗೆ ತಿಳಿಸಿದ್ದಾರೆ.
ಶಿಕ್ಷಕರ ಅರ್ಹತೆಯಲ್ಲಿ ಕೇಳಲಾದ ಪ್ರಶ್ನೆಗಳ ಪೈಕಿ, 13 ಪ್ರಶ್ನೆಗಳು ಮತ್ತು ಅದಕ್ಕೆ ನೀಡಿದ ಉತ್ತರ ಗೊಂದಲಮಯವಾಗಿತ್ತು. ಸರಿ ಉತ್ತರ ಬರೆದವರಿಗೂ ಕೇಂದ್ರೀಕೃತ ದಾಖಲಾತಿ ಘಟಕದಿಂದ ಅಂಕಗಳು ಸಿಗಲಿಲ್ಲ. ಇದರಿಂದ ಹಲವರ ಭವಿಷ್ಯ ಅತಂತ್ರವಾಗಿದೆ. ಇದನ್ನು ಸರಿಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಿದ್ದೇವೆ. ಏ.2ರಂದು ಸಮಸ್ಯೆಗೆ ಸೂಕ್ತ ಸ್ಪಂದನೆ ಸಿಗದಿದ್ದರೆ ಏ.3ರಂದೂ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.