ಧ್ವನಿ ಪ್ರತಿಷ್ಠಾನ ಕಲಾವಿದರಿಂದ ವಿಶ್ವ ರಂಗ ದಿನಾಚರಣೆ


Team Udayavani, Apr 2, 2019, 3:45 PM IST

3103mum07

ಮುಂಬಯಿ: ಧ್ವನಿ ಪ್ರತಿಷ್ಠಾನ ಕಲಾವಿದರು ದುಬಾಯಿ ಇವರಿಂದ ವಿಶ್ವ ರಂಗ ದಿನಾಚರಣೆಯು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಮಾ. 27ರಂದು ನಡೆಯಿತು.

ಹವ್ಯಾಸಿ ರಂಗನಟಿ ಆರತಿ ಅಡಿಗ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, 2002ರಲ್ಲಿ ಗಿರೀಶ್‌ ಕಾರ್ನಾಡ್‌ ಅವರು ಭಾರತದ ಪರವಾಗಿ ನೀಡಿದ ಸಂದೇಶದಲ್ಲಿ ಅವರು ಪ್ರಸ್ತಾಪಿಸಿದ ಭಾರತದ ನಾಟಕದ ಉದಯ ಕಥೆ, ಭರತಮುನಿಯ ನಾಟ್ಯಶಾಸ್ತ್ರದ ಮೊದಲ ಅಧ್ಯಾಯವೇ ನಾಟಕ
ಎನ್ನುವುದರ ಮೂಲಕ ಆರಂಭಗೊಳ್ಳುವ ಭಾರತದ ನಾಟಕದ ಇತಿಹಾಸವನ್ನು ತೆರೆದಿಟ್ಟರು. ವಿಶ್ವಾದ್ಯಂತ ನೂರಾರು ದೇಶಗಳಲ್ಲಿ ಕೇಂದ್ರವನ್ನು ಹೊಂದಿರುವ ಐಟಿಐ ಭಾರತದಲ್ಲಿ ಶೀಘ್ರದಲ್ಲೇ ಕೇಂದ್ರವನ್ನು ಹೊಂದುವಂತಾಗಲಿ. ರಂಗಭೂಮಿಗೆ ವಿಶೇಷ ಕೊಡುಗೆಗಳನ್ನು ನೀಡುತ್ತಿರುವ ಭಾರತದ ಹಲವಾರು ರಂಗ ಸಂಸ್ಥೆಗಳಿಗೆ ನೆರವಾಗಲಿ ಎಂದು ನುಡಿದರು.

ವಿಶೇಷ ಅತಿಥಿಯಾಗಿ ಆಗಮಿಸಿದ ಸಾಹಿತ್ಯ ಹಾಗೂ ರಂಗಭೂಮಿಗೆ ಹಲವಾರು ರೀತಿಯ ಸೇವೆಯನ್ನು ಸಲ್ಲಿಸುತ್ತಿರುವ ಸುಧಾಕರ್‌ ರಾವ್‌ ಪೇಜಾವರ ಅವರು ಮಾತನಾಡಿ, ನಾಟಕ ಆಡುವುದು ಎನ್ನುವ ಮಾತು ಕೇವಲ ವ್ಯಂಗಕ್ಕಾಗಿ ಅಥವಾ ರಾಜಕೀಯ ಭಾಷಣಗಳಿಗೆ ಸೀಮಿತವಾಗದೆ ಅದರ ಹಿಂದಿನ ಗಾಢತೆ, ಪರಿಶ್ರಮ ಮತ್ತು ಸಮಯ ಎಲ್ಲರಿಗೂ ಅರ್ಥವಾಗಬೇಕು. ದುಬೈಯಂತಹ ದೇಶದಲ್ಲಿ ಬಂದು ಧ್ವನಿ ಕಲಾವಿದರು ಹಲವಾರು ಕೊರತೆ ಮತ್ತು ವೈರುಧ್ಯಗಳನ್ನು ಎದುರಿಸಿದರೂ ಛಲ ಬಿಡದೆ ಕೇವಲ ಶ್ರೇಷ್ಠ ಮತ್ತು ಸತ್ವಭರಿತ ನಾಟಕಗಳನ್ನು ಮಾತ್ರ ಪ್ರದರ್ಶಿಸುತ್ತಿರುವುದು ಅಭಿನಂದನೀಯ ಎಂದು ನುಡಿದು ಸಂಸ್ಥೆಯ ಕಲಾವಿದರನ್ನು ಪ್ರಶಂಸಿಸಿದರು. ಕಾರ್ಯಕ್ರಮದ ಅಚ್ಚುಕಟ್ಟುತನ ಹಾಗೂ ಪ್ರತಿಯೋರ್ವ ಕಲಾವಿದ ಪಾಲ್ಗೊಂಡಿರುವುದು ಅಭಿನಂದನೀಯವಾಗಿದೆ ಎಂದು ಹೇಳಿದರು.

ಧ್ವನಿಯ ಹಿರಿಯ ಕಲಾವಿದ ನಾಟಕ, ಯಕ್ಷಗಾನ, ಚಲನಚಿತ್ರ ಕಲಾವಿದ ವಾಸು ಬಾಯಾರು ಮಾತನಾಡಿ, ರಂಗಭೂಮಿ ಅಳಿವಿಲ್ಲದ ಕಲೆಯಾಗಿದೆ. ಆದರೆ ಉಳಿವು ನಮ್ಮ ಕರ್ತವ್ಯವಾಗಿದೆ. ರಂಗಭೂಮಿ ಪ್ರೇಕ್ಷಕರ ಕೊರತೆಯನ್ನು ಕಂಡಾಗ ಬೀದಿ ನಾಟಕ, ಡೇರೆ ನಾಟಕ ಕಂಪೆನಿಗಳು ಅನುಸರಿಸಿದ ಕ್ರಮ ವಿಶೇಷವಾದದ್ದು ಎಂದು ಹೇಳಿದರು.

ಧ್ವನಿ ಪ್ರತಿಷ್ಠಾನದ ಅಧ್ಯಕ್ಷ ಪ್ರಕಾಶ್‌ ರಾವ್‌ ಪಯ್ನಾರ್‌ ಅವರು ಮಾತನಾಡಿ, ರಂಗಭೂಮಿ ಕೇವಲ ಮನೋರಂಜನೆಗಾಗಿ ಅಲ್ಲ. ಮನೋ ವಿಕಾಸಕ್ಕಾಗಿ. ಹಿಂದೆ ಲಕ್ಷಾಂತರ ಜನರಿಗೆ ಉದ್ಯೋಗ ನೀಡುತ್ತಿದ್ದ ರಂಗಭೂಮಿ ಇಂದು ಅಧಃಪತನಗೊಂಡು ಕೇವಲ ಹವ್ಯಾಸಿ ಕಲಾವಿದರ ಕೂಟಕ್ಕೆ ಬಂದು ನಿಂತಿದೆ. ಈ ರಂಗಕಲೆಯನ್ನು ಉಳಿಸಿ-ಬೆಳೆಸುವ ಮಹತ್ತರವಾದ ಜವಾಬ್ದಾರಿ ಈಗ ಹವ್ಯಾಸಿ ಕಲಾವಿದರ ಹೆಗಲ ಮೇಲಿದೆ ಎಂದು ನುಡಿದರು.

ಸಾಂಸ್ಕೃತಿಕ ಕಾರ್ಯಕ್ರಮವಾಗಿ ಧ್ವನಿ ಪ್ರತಿಷ್ಠಾನದ ಪ್ರತಿಯೋರ್ವ ಕಲಾವಿದನಿಂದ ಏಕಪಾತ್ರಾಭಿನಯ, ಜಾನಪದ ಮತ್ತು ರಂಗಗೀತೆಗಳ ಹಾಡುಗಾರಿಕೆ, ಅನುಕರಣೆ, ಶಾಸ್ತ್ರೀಯ ನೃತ್ಯ, ಮೂಕಾಭಿನಯ ಇನ್ನಿತರ ಕಾರ್ಯಕ್ರಮಗಳು ನಡೆದವು. ಕೆ. ವಿ. ಅಡಿಗ, ವಿನಯ್‌ ಪೂಜಾರಿ, ಆದೇಶ್‌ ಹಾಸನ್‌, ಸಪ್ನಾ ಕಿರಣ್‌, ನರಸಿಂಹನ್‌, ಅಶೋಕ್‌ ಅಂಚನ್‌, ರುದ್ರಯ್ಯ, ವಾಸು ಬಾಯಾರು ಮೊದಲಾದವರು ಭಾಗವಹಿಸಿದರು. ರುದ್ರಯ್ಯನವಲಿ ಹಿರೇಮಠ ಅವರು ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

ಹೊಯ್ಸಳ ಕನ್ನಡ ಸಂಘ: ವಿದೇಶದಲ್ಲಿ ಕಣ್ಮನ ಸೆಳೆದ ಗದಾಯುದ್ಧ ಯಕ್ಷಗಾನ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

Desi Swara: ಟ್ಯಾಂಪಾ ಸಾಂಸ್ಕೃತಿಕ ವೇದಿಕೆ – ಹರಿಕಥೆ ಆಯೋಜನೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

ಕ್ಲೀವ್‌ ಲ್ಯಾಂಡ್‌: 40ನೇ ಬೆಳಕಿನ ಕನ್ನಡೋತ್ಸವ, ಹಾಸ್ಯ ಹೊನಲು, ಸಂಗೀತ ಸುಧೆ

Baharain1

ಮೊಗವೀರ್ಸ್‌ ಬಹ್ರೈನ್‌ ಪ್ರೊ ಕಬಡ್ಡಿ;ತುಳುನಾಡ್‌ ತಂಡ ಪ್ರಥಮ,ಪುನಿತ್‌ ಬೆಸ್ಟ್‌ All ರೌಂಡರ್‌

ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ

ಕ್ಯಾಲಿಫೋರ್ನಿಯ: ನಾಡೋತ್ಸವದಲ್ಲಿ ಚಿಣ್ಣರ ಚಿಲಿಪಿಲಿ, ಸಾಂಸ್ಕೃತಿಕ ಪ್ರದರ್ಶನ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.