ವಿಭಿನ್ನ ಸಾಹಿತ್ಯ ಓದುವ ಹವ್ಯಾಸ ಅಗತ್ಯ


Team Udayavani, Apr 3, 2019, 3:00 AM IST

vibinna

ಬೆಂಗಳೂರು: ವಿವಿಧ ಭಾಷೆಗಳಿಂದ ಕನ್ನಡಕ್ಕೆ ಹಲವು ಕೃತಿಗಳು ಅನುವಾದಗೊಂಡಿದ್ದು, ಅವುಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳುವಂತೆ ಯುವ ಸಮುದಾಯಕ್ಕೆ ವಿಮರ್ಶಕ ಡಾ.ಎಚ್‌.ಎಸ್‌.ರಾಘವೇಂದ್ರ ರಾವ್‌ ಕರೆ ನೀಡಿದರು.

ಕನ್ನಡ ಸಂಘರ್ಷ ಸಮಿತಿ, ಮಂಗಳವಾರ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಲೇಖಕಿ ಡಾ.ವಿಜಯಾ ಸುಬ್ಬರಾಜ್‌ ಅವರ “ಲೂಷನ್‌ ಅವರ ಆಯ್ದ 10 ಚೀನೀ ಕಥೆಗಳು’ ಮತ್ತು “ಮರಳ ದಿಬ್ಬಗಳಲ್ಲಿ ಮಹಿಳೆ’ ಅನುವಾದಿತ ಕೃತಿಗಳನ್ನು ಬಿಡುಗಡೆ ಗೊಳಿಸಿ ಮಾತನಾಡಿದ ಅವರು, ಕನ್ನಡಕ್ಕೆ ಅನುವಾದಗೊಂಡ ಅನ್ಯ ಭಾಷೆಯ ಕೃತಿಗಳನ್ನು ಓದುವುದರಿಂದ ಬರಹಗಾರರ ಆಲೋಚನಾ ಲಹರಿ ವಿಸ್ತಾರಗೊಳ್ಳುತ್ತದೆ ಎಂದರು.

ಈ ಹಿಂದೆ ಅನುವಾದ ಎಂದರೆ ಸಂಸ್ಕೃತದಿಂದ ಕನ್ನಡಕ್ಕೆ ಹಾಗೂ ಆಂಗ್ಲಭಾಷೆಯಿಂದ ಕನ್ನಡಕ್ಕೆ ತರುವುದಾಗಿತ್ತು. ಆದರೆ ಈಗ ಆ ಸಂಸ್ಕೃತಿ ಬದಲಾಗಿದೆ. ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಹಲವು ಕೃತಿಗಳನ್ನು ಅನುವಾದ ಮಾಡುತ್ತದೆ. ಬೇರೆ ಬೇರೆ ಭಾಷೆಯ ಕೃತಿಗಳನ್ನು ಓದುವುದರಿಂದ ಅಲ್ಲಿನ ಸಾಂಸ್ಕೃತಿ ಮತ್ತು ಸಾಹಿತ್ಯದ ಪರಿಚಯವಾಗುತ್ತದೆ ಎಂದು ತಿಳಿಸಿದರು.

ಲೇಖಕಿ ವಿಜಯಾ ಸುಬ್ಬರಾಜ್‌ ಅವರ ಬರವಣಿಗೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಇತ್ತೀಚಿನ ದಿನಗಳಲ್ಲಿ ಒಂದೇ ಒಂದು ಕೃತಿ ಬರೆದವರಿಗೂ, ಹೆಚ್ಚಿನ ಮನ್ನಣೆ ಸಿಗುತ್ತದೆ. ಆದರೆ ವಿಜಯಾ ಅವರು ಐವತ್ತು ದಶಕಗಳಿಂದ ಸಾಹಿತ್ಯದ ಕೃಷಿಯಲ್ಲಿ ತೊಡಗಿ ಕೊಂಡಿದ್ದಾರೆ. ಆದರೆ ಅವರಿಗೆ ಸಿಗಬೇಕಾದ ಗೌರವ, ಮನ್ನಣೆ ಇನ್ನೂ ಸಿಕ್ಕಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಇದೇ ವೇಳೆ ವಿಜಯಾ ಅವರ “ಲೂಷನ್‌ ಅವರ ಆಯ್ದ 10 ಚೀನೀ ಕಥೆಗಳು’ ಮತ್ತು “ಮರಳ ದಿಬ್ಬಗಳಲ್ಲಿ ಮಹಿಳೆ’ ಕೃತಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಾಹಿತಿ ರಾಮರಾವ್‌ ಕುಲಕರ್ಣಿ, ಕನ್ನಡ ಸಂಘರ್ಷ ಸಮಿತಿ ಅಧ್ಯಕ್ಷ ಡಾ. ಕೋ.ವೆಂ.ರಾಮಕೃಷ್ಣೇಗೌಡ, ಲೇಖಕಿ ಡಾ. ವಿಜಯಾ ಸುಬ್ಬರಾಜ್‌, ಸದ್ಭಾವನ ಪ್ರತಿಷ್ಠಾನದ ಅಧ್ಯಕ್ಷ ಎಂ. ಪ್ರಕಾಶಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.