![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
Team Udayavani, Apr 3, 2019, 6:00 AM IST
ಬೀದರ: ನರೇಂದ್ರ ಮೋದಿ ಐದು ವರ್ಷಗಳಲ್ಲಿ ಸಂಸತ್ನಲ್ಲಿ ಮಾತಾಡಿದ್ದು ಕೇವಲ 25 ಗಂಟೆ 25 ನಿಮಿಷ. ಉಳಿದೆಲ್ಲ ಮಾತುಗಳನ್ನು ಸಂಸತ್ ಹೊರಗಡೆಯೇ ಆಡಿದ್ದಾರೆ ಎಂದು ಕಲಬುರಗಿ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ್ ಖರ್ಗೆ ಹೇಳಿದರು. ನಗರದ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಮಂಗಳವಾರ ಮೈತ್ರಿ ಪಕ್ಷಗಳು ಏರ್ಪಡಿಸಿದ್ದ
ಪರಿವರ್ತನಾ ಯಾತ್ರೆಯಲ್ಲಿ ಮಾತನಾಡಿ, ನರೇಂದ್ರ ಮೋದಿ ಸರ್ವಾಧಿಕಾರಿಯಾಗಲು ಹೊರಟಿದ್ದು, ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಇದನ್ನು ತಡೆಯಬೇಕಿದೆ ಎಂದರು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದೇಶದಲ್ಲಿ ಅರಾಜಕತೆ ಸೃಷ್ಟಿಗೆಯತ್ನಿಸುತ್ತಿದೆ.
ಈ ಮೂಲಕ ದೇಶದಲ್ಲಿ ಹುಕುಂ ಶಾಹಿ ಆಡಳಿತಕ್ಕೆ ಹುನ್ನಾರ
ನಡೆಸುತ್ತಿರುವ ಬಿಜೆಪಿಗೆ ಆರ್ಎಸ್ಎಸ್ನ ಸಂಪೂರ್ಣ ಸಹಕಾರವಿದೆ. ಈ ಲೋಕಸಭೆ ಚುನಾವಣೆಯಲ್ಲಿ ಸಂವಿಧಾನ ಉಳಿವಿಗಾಗಿ, ದೇಶದ ಅಭಿವೃದಿಟಛಿಗಾಗಿ ಕಾಂಗ್ರೆಸ್ಗೆ ಬೆಂಬಲ ನೀಡಬೇಕು. ನಾವು ಕೆಲಸ ಮಾಡಿದ್ದೇವೆ. ಮತ ಕೇಳುತ್ತಿದ್ದೇವೆ. ಮೋದಿ ಏನೂ ಮಾಡದೆ ಮತ
ಕೇಳುತ್ತಿದ್ದಾರೆ. ಇದೀಗ ನಡೆಯಲಿರುವ ಚುನಾವಣೆ ಖಂಡ್ರೆ ಹಾಗೂ ಬಿಜೆಪಿ ಅಭ್ಯರ್ಥಿ ಭಗವಂತ್ ಖೂಬಾ ನಡುವಿನ ಚುನಾವಣೆ ಅಲ್ಲ. ಇದು ಸಂವಿಧಾನದ ಉಳಿವಿಗಾಗಿ ನಡೆಯುತ್ತಿರುವ ಚುನಾವಣೆ ಎಂದರು.
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
You seem to have an Ad Blocker on.
To continue reading, please turn it off or whitelist Udayavani.