‘ಪತ್ನಿ ಪೀಡಿತರ ಸಂಘ’ದ ಮುಖ್ಯಸ್ಥ ಲೋಕಸಭೆಗೆ ಸ್ಪರ್ಧೆ!

ಪತ್ನಿ ಪೀಡಿತರ ಎನ್‌.ಜಿ.ಒ. ಮುಖ್ಯಸ್ಥ ದಶರಥ್‌ ಗೆ ಸಂಸತ್‌ ಪ್ರವೇಶಿಸುವ ಹಂಬಲ!

Team Udayavani, Apr 3, 2019, 12:37 PM IST

NGO-3-4

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ : Representative Image Used

ಅಹಮ್ಮದಾಬಾದ್‌: ರೈತ ಸಂಘದವರು, ಕಲಾವಿದರು, ಮಾಜೀ ಸೈನಿಕರು, ನಿವೃತ್ತ ಕ್ರೀಡಾಪಟುಗಳು ಹೀಗೆ ಸಮಾಜದ ವಿವಿಧ ವರ್ಗಗಗಳ ಜನರು ಚುನಾವಣೆಗೆ ನಿಲ್ಲುವುದನ್ನು ನೀವು ಕೇಳಿಯೇ ಇರುತ್ತೀರಿ. ಹಾಗೆಯೇ ಇಲ್ಲೊಬ್ಬರು ಪತ್ನಿ ಪೀಡಿತರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ತನ್ನ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ!

‘ಆಖಿಲ ಭಾರತೀಯ ಪತ್ನಿ ಅತ್ಯಾಚಾರ ವಿರೋಧಿ ಸಂಘ’ (‘Akhil Bhartiya Patni Atyachar Virodhi Sangh’) ಎಂಬ ಸರಕಾರೇತರ ಸಂಘಟನೆಯನ್ನು (NGO) ನಡೆಸುತ್ತಿರುವ ಧಶರಥ್‌ ದೇವ್ದಾ ಎಂಬ ಮಹಾನುಭಾವನೇ ಚುನಾವಣೆಗೆ ಸ್ಪರ್ಧಿಸುತ್ತಿರುವ ವ್ಯಕ್ತಿ. ಈತ ಮಂಗಳವಾರದಂದು ಅಹಮ್ಮದಾಬಾದ್‌ ಉತ್ತರ ಲೋಕಸಭಾ ಕ್ಷೇತ್ರದಿಂದ ತನ್ನ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ. ಮತ್ತು ತಾನು ಈ ಬಾರಿ ಸಂಸತ್ತಿಗೆ ಆಯ್ಕೆಗೊಂಡರೆ ತಮ್ಮ ತಮ್ಮ ಪತ್ನಿಯರಿಂದ ನೊಂದಿರುವ ಪುರುಷರ ಪರವಾಗಿ ಸಂಸತ್ತಿನಲ್ಲಿ ಧ್ವನಿ ಎತ್ತುವುದಾಗಿ ಧಶರಥ್‌ ಭರವಸೆ ನೀಡಿದ್ದಾರೆ. ಸುಳ್ಳು ವರದಕ್ಷಿಣೆ ಪ್ರಕರಣದಲ್ಲಿ ಸಿಲುಕಿ ತಮ್ಮ ಪತ್ನಿ ಹಾಗೂ ಅವರ ಹೆತ್ತವರ ಕಡೆಯಿಂದ ಹಿಂಸೆ ಅನುಭವಿಸುವ ಪತಿ ಮಹಾಶಯರ ಪರವಾಗಿ ನನ್ನ ಹೋರಾಟ ಎಂದು ದಶರಥ್‌ ಅವರು ನಾಮಪತ್ರ ಸಲ್ಲಿಕೆಯ ಬಳಿಕ ಸುದ್ದಿಗಾರರಿಗೆ ತಿಳಿಸಿದರು.

ದಶರಥ್‌ ದೇವ್ದಾ ಅವರ ಈ ಎನ್‌.ಜಿ.ಒ. 69,000 ಸದಸ್ಯರನ್ನು ಹೊಂದಿದೆಯಂತೆ. ಇದು ದಶರಥ್‌ ಅವರಿಗೆ ಮೂರನೇ ಚುನಾವಣೆ. 2014ರ ಲೋಕಸಭೆ ಹಾಗೂ 2017ರಲ್ಲಿ ಗುಜರಾತ್‌ ವಿಧಾನಸಭೆಗೆ ಸ್ಪರ್ಧಿಸಿ ಸೋಲನುಭವಿಸಿದ್ದರು. ಈ ಸಂದರ್ಭದಲ್ಲಿ ಅವರಿಗೆ ಕ್ರಮವಾಗಿ 2300 ಮತ್ತು 400 ಮತಗಳಷ್ಟೇ ಲಭಿಸಿದ್ದವು. ಆದರೆ ಛಲ ಬಿಡದ ದಶರಥ್‌ ಈ ಬಾರಿಯೂ ಪ್ರಧಾನಿ ಮೋದಿ ತವರಿನಿಂದ ‘ಹ್ಯಾಟ್ರಿಕ್‌’ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

‘ನನ್ನದು ಮನೆ ಮನೆ ಪ್ರಚಾರ, ನಾನು ಇತರರಂತೆ ಹಣದ ರಾಜಕೀಯ ಮಾಡುವುದಿಲ್ಲ. ಗಂಡಸರಿಗೂ ಸಮಾನ ಹಕ್ಕು ದೊರಕಿಸಿಕೊಡುವ ವಾಗ್ದಾನವನ್ನು ನನ್ನ ಮನೆಮನೆ ಭೇಟಿ ಪ್ರಚಾರ ಸಂದರ್ಭದಲ್ಲಿ ನೀಡುತ್ತಿದ್ದೇನೆ. ಐಪಿಸಿ ಸೆಕ್ಷನ್‌ 498 (ಗೃಹ ಹಿಂಸೆ) ಕಾಯ್ದೆಯನ್ನು ದುರ್ಬಲಕೆ ಮಾಡಿಕೊಂಡು ತಮ್ಮ ಪತ್ನಿ ಹಾಗೂ ಆಕೆಯ ಕುಟುಂಬ ಸದಸ್ಯರಿಂದ ಹಿಂಸೆ ನುಭವಿಸುತ್ತಿರುವ ಗಂಡಂದಿರ ಪರವಾಗಿ ನನ್ನ ಧ್ವನಿ ಇರುತ್ತದೆ ಎಂದು ದಶರಥ್‌ ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ. ಗೃಹ ಹಿಂಸೆ ಕಾನೂನನ್ನು ಪರಿಷ್ಕರಿಸಬೇಕಾದ ಅಗತ್ಯತೆಯನ್ನೂ ಸಹ ದಶರಥ್‌ ಅವರು ಒತ್ತಿ ಹೇಳುತ್ತಾರೆ.

ಟಾಪ್ ನ್ಯೂಸ್

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

1-GGV

Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

Thumbe: ಅಗೆದಲ್ಲಿ ಕಡೆಗೂ ಡಾಮರು

Thumbe: ಅಗೆದಲ್ಲಿ ಕಡೆಗೂ ಡಾಮರು

9-bng

Bengaluru: ʼರಾಹುಲ್‌ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್‌ ವಿರುದ್ಧ ಕೇಸ್‌

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Supreme Court slams Karnataka High Court judge for Pakistan statement

Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್‌ ಜಡ್ಜ್‌ ಗೆ ಸುಪ್ರೀಂ ಕೋರ್ಟ್ ತರಾಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.