2017ರಲ್ಲಿ ಭಾರತದಲ್ಲಿ ವಾಯು ಮಾಲಿನ್ಯಕ್ಕೆ ಬಲಿಯಾದವರ ಸಂಖ್ಯೆ 12 ಲಕ್ಷ

ವಾಯುಮಾಲಿನ್ಯದ ದುಷ್ಪರಿಣಾಮಗಳಿಗೆ ವಿಶ್ವಾದ್ಯಂತ 50ಲಕ್ಷ ಜನ ಸಾವು!

Team Udayavani, Apr 3, 2019, 2:33 PM IST

Air-Pollution-726

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ : Representative Image Used

ನವದೆಹಲಿ: 2017ನೇ ಇಸವಿಯೊಂದರಲ್ಲೇ ಭಾರತದಲ್ಲಿ ವಾಯುಮಾಲಿನ್ಯಕ್ಕೆ ಬಲಿಯಾದವರ ಸಂಖ್ಯೆ ಬರೋಬ್ಬರಿ 1.2 ಮಿಲಿಯನ್‌ ಅಂದರೆ 12 ಲಕ್ಷ! ಈ ಆಘಾತಕಾರಿ ಮಾಹಿತಿ ಬಹಿರಂಗವಾಗಿರುವುದು ವಾಯುಮಾಲಿನ್ಯಕ್ಕೆ ಸಂಬಂಧಿಸಿ ಹೊರಬಿದ್ದಿರುವ ಜಾಗತಿಕ ವರದಿ ಮೂಲಕ.

ಇನ್ನು ಜಾಗತಿಕ ವಾಯು ಪರಿಸ್ಥಿತಿ ಮಟ್ಟ 2019 ವರದಿಗಳ ಪ್ರಕಾರ ಹೊರಭಾಗದಲ್ಲಿ ಮತ್ತು ಒಳಭಾಗದಲ್ಲಿನ ವಿವಿಧ ರೀತಿಯ ವಾಯು ಮಾಲಿನ್ಯಗಳಿಗೆ ದೀರ್ಘ‌ಕಾಲೀನ ಒಳಪಡುವಿಕೆಯಿಂದ ಸ್ಟ್ರೋಕ್‌, ಮಧುಮೇಹ, ಹೃದಯಾಘಾತ, ಶ್ವಾಸಕೋಶದ ಕ್ಯಾನ್ಸರ್‌ ಹಾಗೂ ಗಂಭೀರ ಸ್ವರೂಪದ ಶ್ವಾಸಕೋಶ ಸಂಬಂಧಿ ಕಾಯಿಲೆಗಳಿಗೆ 2017ರಲ್ಲಿ ವಿಶ್ವಾದ್ಯಂತ 5 ಮಿಲಿಯನ್‌ ಜನ ಸಾವಿಗೀಡಾಗಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದ್ದು ಇದು ವಾಯು ಮಾಲಿನ್ಯ ಸಮಸ್ಯೆಯ ಗಂಭೀರತೆಯನ್ನು ಸಾರುತ್ತಿದೆ.

ಅಮೆರಿಕಾ ಮೂಲದ ಹೆಲ್ತ್‌ ಎಫೆಕ್ಟ್ಸ್ ಇನ್ಸ್ಟಿಟ್ಯೂಟ್‌ ಎಂಬ ಸಂಸ್ಥೆಯು ಈ ವರದಿಯನ್ನು ತಯಾರಿಸಿದ್ದು ಇದರ ಫ‌ಲಿತಾಂಶಗಳನ್ನು ಬುಧವಾರದಂದು ಈ ಸಂಸ್ಥೆ ಬಿಡುಗಡೆಗೊಳಿಸಿದೆ. ಈ ವರದಿಯಲ್ಲಿ ಉಲ್ಲೇಖವಾಗಿರುವಂತೆ ಒಟ್ಟು 5 ಮಿಲಿಯನ್‌ ಸಾವುಗಳಲ್ಲಿ 3 ಮಿಲಿಯನ್‌ ಸಾವು ನೇರವಾಗಿ ಪಿ.ಎಂ.2.5 ಕಾರಣದಿಂದಲೇ ಸಂಭವಿಸಿದ್ದು, ಇವುಗಳಲ್ಲಿ ಅರ್ಧದಷ್ಟು ಸಾವುಗಳು ಭಾರತ ಮತ್ತು ಚೀನಾದಲ್ಲಿ ಸಂಭವಿಸಿದೆ ಮಾತ್ರವಲ್ಲದೇ ವಿಶ್ವದಲ್ಲಿ ನೇರ ವಾಯುಮಾಲಿನ್ಯದಿಂದ ಸಂಭವಿಸುತ್ತಿರುವ ಸಾವುಗಳಲ್ಲಿ ಅರ್ಧದಷ್ಟು ಸಾವುಗಳಿಗೆ ಭಾರತ ಮತ್ತು ಚೀನಾದಲ್ಲಿ ಉಂಟಾಗುತ್ತಿರುವ ವಾಯುಮಾಲಿನ್ಯವೇ ನೇರ ಕಾರಣವಾಗಿದೆ ಎಂಬ ಅಂಶವನ್ನೂ ಈ ವರದಿ ಪತ್ತೆ ಮಾಡಿದೆ.

ಈ ವರದಿಯಲ್ಲಿ ಬಹಿರಂಗವಾಗಿರುವ ಇನ್ನೊಂದು ಕಳವಳಕಾರಿ ಅಂಶವೆಂದರೆ, ದಕ್ಷಿಣ ಏಷ್ಯಾದಲ್ಲಿ ಜನಿಸುವ ಮಗುವಿನ ಆಯಸ್ಸು ಎರಡು ವರ್ಷ ಆರು ತಿಂಗಳು ಕಡಿಮೆಯಾಗುತ್ತಿದೆ ಮತ್ತಿದಕ್ಕೆ ಈ ಭಾಗಗಳಲ್ಲಿ ದಿನೇ ದಿನೇ ವಿಕೋಪಕ್ಕೆ ಹೋಗುತ್ತಿರುವ ವಾಯುಮಾಲಿನ್ಯವೇ ಕಾರಣವಾಗಿದೆ. ಅದೇ ರೀತಿ ಜಾಗತಿಕ ಜೀವಿತಾವಧಿ 20 ತಿಂಗಳುಗಳಷ್ಟು ಕಡಿಮೆಗೊಳ್ಳುತ್ತಿದೆ. ವಿಶ್ವಾದ್ಯಂತ ರಸ್ತೆ ಅಪಘಾತ ಅಥವಾ ಮಲೇರಿಯಾ ಕಾರಣಗಳಿಂದ ಉಂಟಾಗುತ್ತಿರುವ ಒಟ್ಟು ಸಾವಿನ ಸಂಖ್ಯೆಗಿಂತ ವಾಯುಮಾಲಿನ್ಯ ಸಂಬಂಧಿತ ಕಾಯಿಲೆಗಳಿಂದ ಸಾಯುವವರ ಸಂಖ್ಯೆ ಹೆಚ್ಚು ಎಂಬ ಅಂಶವನ್ನು ಈ ವರದಿ ಹೊರಹಾಕಿದೆ.

ಟಾಪ್ ನ್ಯೂಸ್

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

11-bantwala

Bantwala: ಸಂಬಂಧಿಕರ ಮನೆಗೆ ಹೋಗುವುದಾಗಿ ಹೇಳಿದ್ದ ಯುವತಿ ನಾಪತ್ತೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

West Bengal ಕೋರ್ಟ್‌ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

Supreme court ಯೂಟ್ಯೂಬ್‌ ಲೈವ್‌ ಸ್ಟ್ರೀಮ್‌ ಚಾನೆಲ್‌ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!

ಶಸ್ತ್ರಾಸ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಕೇಂದ್ರ ಸಚಿವ ಅಮಿತ್ ಶಾ ಮನವಿ

Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Malpe: ಪೊಟ್ಟುಕೆರೆ ಅಭಿವೃದ್ಧಿಪಡಿಸಿದರೆ ಶಾಶ್ವತ ನೀರಿನ ಒರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Udupi ತಮಿಳುನಾಡಿನ ಎಳನೀರು; ಸ್ಥಳೀಯ ಕಾರ್ಮಿಕರ ಕೊರತೆ

Bellary; poor food supply; Protest in SC, ST hostel

Bellary; ಕಳಪೆ ಆಹಾರ ಪೂರೈಕೆ; ಎಸ್‌ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Udupi: ಉಡುಪಿಗೆ ಬರುವುದೆಂದು ವಾರಾಹಿ ನೀರು?; ಶೇ.90 ಕಾಮಗಾರಿ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.