ಬಿಜೆಪಿ ಬಿ.ಟೀಮ್‌ ಯಾರು: ಸಾ.ರಾ.ಮಹೇಶ್‌


Team Udayavani, Apr 4, 2019, 3:00 AM IST

bjp-brtwea

ಕೆ.ಆರ್‌.ನಗರ: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್‌ ಪಕ್ಷೇತರ ಅಭ್ಯರ್ಥಿಯಲ್ಲ. ಅವರು ಪರೋಕ್ಷವಾಗಿ ಬಿಜೆಪಿ ಅಭ್ಯರ್ಥಿಯಾಗಿದ್ದು, ಮತದಾರರು ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ರೇಷ್ಮೆ ಮತ್ತು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‌ ತಿಳಿಸಿದರು.

ತಾಲೂಕಿನ ಹೊಸೂರು ಗ್ರಾಮದಲ್ಲಿ ಜೆಡಿಎಸ್‌ ಅಭ್ಯರ್ಥಿ ನಿಖೀಲ್‌ಕುಮಾರಸ್ವಾಮಿ ಪರ ಮತ ಯಾಚಿಸಿ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷವನ್ನು ಕೆಲವರು ಬಿಜೆಪಿ ಬಿ.ಟೀಮ್‌ ಎಂದು ಟೀಕಿಸುತ್ತಿದ್ದರು. ಆದರೆ, ಈಗ ಬಿ.ಟೀಮ್‌ ಯಾರು ಎಂದು ಅರ್ಥ ಮಾಡಿಕೊಳ್ಳಬೇಕಿದೆ ಎಂದು ಕಾಂಗ್ರೆಸ್‌ಗೆ ತಿರುಗೇಟು ನೀಡಿದರು.

ಯಾರು ಬೇಕು?: ಚಲನಚಿತ್ರ ವೀಕ್ಷಿಸಿ ಭರವಸೆ ಇಟ್ಟುಕೊಂಡು ಮನೆ ಬಾಗಿಲಿಗೆ ಹೋದವರನ್ನು ಮಾತನಾಡಿಸದೇ ದೂರ ತಳ್ಳುವವರು ಬೇಕೋ ಅಥವಾ 80 ವರ್ಷ ಇಳಿ ವಯಸ್ಸಿನಲ್ಲಿಯೂ ರಾಜ್ಯವನ್ನು ಸುತ್ತಿ ಜನರ ಸಂಕಷ್ಟ ಆಲಿಸುವ ಎಚ್‌.ಡಿ.ದೇವೇಗೌಡರಂತಹ ರಾಷ್ಟ್ರ ನಾಯಕ ಬೇಕೆ ಎಂಬುದನ್ನು ಮತದಾರರು ನಿರ್ಧರಿಸಬೇಕಿದೆ. ಜನರು ಬುದ್ಧಿವಂತರಿದ್ದು, ಉತ್ತಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.

ತಾಲೂಕಿಗೆ 800 ಕೋಟಿ ರೂ.: ರೈತರ ಜೀವನಾಡಿಯಾಗಿರುವ ತಾಲೂಕಿನ ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆಯನ್ನು 40 ವರ್ಷಗಳ ಅವಧಿಗೆ ಟೆಂಡರ್‌ ನೀಡಿ ಕಬ್ಬು ಅರೆಯುವ ಕಾರ್ಯ ಪ್ರಾರಂಭಿಸಲು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕ್ರಮ ಕೈಗೊಂಡಿದ್ದಾರೆ. ತಾಲೂಕಿನ ಅಭಿವೃದ್ಧಿಗೆ 800 ಕೋಟಿ ರೂ. ಅನುದಾನ ನೀಡಿದ್ದು, ಮತದಾರರು ಇದನ್ನರಿತು ನಿಖೀಲ್‌ಗೆೆ ಮತ ನೀಡಬೇಕೆಂದು ಕೋರಿದರು.

ನಂತರ ಸಚಿವ ಸಾ.ರಾ.ಮಹೇಶ್‌ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರೊಡನೆ ಚುಂಚನಕಟ್ಟೆ ಹೋಬಳಿಯ ಚುಂಚನಕಟ್ಟೆ, ದಿಡ್ಡಹಳ್ಳಿ, ಸಾಲೆಕೊಪ್ಪಲು, ದೊಡ್ಡಕೊಪ್ಪಲು, ಚಿಕ್ಕಕೊಪ್ಪಲು, ಕುಪ್ಪೆ, ಮುದ್ದನಹಳ್ಳಿ ಮತ್ತಿತರ ಗ್ರಾಮಗಳಿಗೆ ತೆರಳಿ ಮತಯಾಚಿಸಿದರು.

ಈ ಸಂದರ್ಭದಲ್ಲಿ ತಾಲೂಕು ಯುವ ಜೆಡಿಎಸ್‌ ಅಧ್ಯಕ್ಷ ಹೆಚ್‌.ಆರ್‌.ಮಧುಚಂದ್ರ, ಟಿಎಪಿಸಿಎಂಎಸ್‌ ನಿರ್ದೇಶಕ ಎಸ್‌.ಟಿ.ಕೀರ್ತಿ, ಜೆಡಿಎಸ್‌ ವಕ್ತಾರ ಕೆ.ಎಲ್‌.ರಮೇಶ್‌, ಕಾರ್ಯಾಧ್ಯಕ್ಷ ಪ್ರದೀಪ್‌ ಪಾಪಣ್ಣಿ, ಭೂ ನ್ಯಾಯಮಂಡಳಿ ಸದಸ್ಯ ಬಿ.ರಮೇಶ, ಜೆಡಿಎಸ್‌ ಮುಖಂಡರಾದ ಎಚ್‌.ಕೆ.ಮಧುಚಂದ್ರ ಇತರರು ಹಾಜರಿದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.