ಯುಗಾದಿ ನಂತರ ಏರುತ್ತಾ ಪ್ರಚಾರದ ಅಬ್ಬರ?


Team Udayavani, Apr 8, 2019, 3:00 AM IST

ugadi-nana

ಕೋಲಾರ: ಯುಗಾದಿ ಮುಗಿದ ಬಿರು ಬಿಸಿಲು ಏರುತ್ತಿದ್ದು, ಪ್ರಚಾರದ ವೈಖರಿಯಲ್ಲೂ ಬಿಸಿ ಹೆಚ್ಚಿಸಲು ಮುಖಂಡರು ನಿರ್ಧರಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಕೆ.ಎಚ್‌.ಮುನಿಯಪ್ಪ ಹಾಗೂ ಬಿಜೆಪಿ ಅಭ್ಯರ್ಥಿ ಎಸ್‌.ಮುನಿಸ್ವಾಮಿ ಮಾ.25 ರಂದು ನಾಮಪತ್ರ ಸಲ್ಲಿಸಿದರು.

ಅಂದು ಕಾಂಗ್ರೆಸ್‌ ಮತ್ತು ಬಿಜೆಪಿ ಸಾವಿರಾರು ಜನರ ಮೂಲಕ ಮೆರವಣಿಗೆ ನಡೆಸಿದ್ದು ಹೊರತುಪಡಿಸಿದರೆ ಉಳಿದಂತೆ ಕ್ಷೇತ್ರದಲ್ಲಿ ಪ್ರಚಾರದ ಕಾವು ಅಷ್ಟಾಗಿ ಏರಿಲ್ಲ. ಬಿಜೆಪಿ ಪರವಾಗಿ ಸೂಲಿಬೆಲೆ ಚಕ್ರವರ್ತಿ, ಕೇಂದ್ರ ಸಚಿವ ಸ್ಮತಿ ಇರಾನಿ, ಸಿ.ಟಿ.ರವಿ, ಅರವಿಂದ ಲಿಂಬಾವಳಿ ಪ್ರಚಾರ ಸಭೆಗಳನ್ನು ನಡೆಸಿ ಹೋಗಿದ್ದಾರೆ.

ತಾಲೂಕು ಕೇಂದ್ರಗಳಲ್ಲಿ ಪ್ರಚಾರ ಸಭೆಗಳನ್ನು ನಡೆಸುವ ಮೂಲಕ ಕಾಂಗ್ರೆಸ್‌ ಪ್ರಚಾರಕ್ಕೆ ಚಾಲನೆ ನೀಡಿದೆ. ಈ ಪ್ರಚಾರ ಸಭೆಗಳಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್‌ಗುಂಡೂರಾವ್‌ ಆಗಮಿಸಿದ್ದರು. ಕೋಲಾರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಇದುವರೆಗೂ ಮತದಾರರ ಬಳಿಗೆ ತೆರಳಿ ಇನ್ನೂ ಮತ ಯಾಚಿಸುವ ಪ್ರಕ್ರಿಯೆ ಅಷ್ಟಾಗಿ ಆರಂಭವಾಗಿಲ್ಲ.

ಏಕೆಂದರೆ, ಕಾಂಗ್ರೆಸ್‌ ಮತ್ತು ಬಿಜೆಪಿ ಇನ್ನೂ ತನ್ನ ಮುಖಂಡರು ಹಾಗೂ ಕಾರ್ಯಕರ್ತರನ್ನು ಪ್ರಚಾರಕ್ಕೆ ಸಜ್ಜುಗೊಳಿಸುವ ಪ್ರಕ್ರಿಯೆಯಲ್ಲಿಯೇ ತೊಡಗಿದ್ದಾರೆ. ಪ್ರಚಾರ ನಡುವೆ ಆಗಮಿಸಿರುವ ಯುಗಾದಿಯು ನಿರಂತರ ಪ್ರಚಾರಕ್ಕೆ ತೊಡಕುಂಟಾಗಿದೆ.

ಕಾಂಗ್ರೆಸ್‌ ಪಕ್ಷವು ಯುಗಾದಿ ಸಂದರ್ಭದಲ್ಲಿ ಅಲ್ಪಸಂಖ್ಯಾತರನ್ನು ಗುರಿಯಾಗಿಟ್ಟುಕೊಂಡು ಅವರ ಏರಿಯಾದಲ್ಲಿ ಪ್ರಚಾರ ಸಭೆಗಳನ್ನು ನಡೆಸಿದೆ. ಈ ಸಭೆಗಳಿಗೆ ಸಿ.ಎಂ.ಇಬ್ರಾಹಿಂ ಬಂದು ಹೋಗಿದ್ದಾರೆ. ಆದರೂ, ಯುಗಾದಿಯ ಎರಡೂ ದಿನ ಶನಿವಾರ ಮತ್ತು ಭಾನುವಾರ ಪ್ರಚಾರಕ್ಕೆ ಒಂದು ರೀತಿಯ ಬಿಡುವು ಕೊಟ್ಟಂತಾಗಿತ್ತು.

ಇದೀಗ ಸೋಮವಾರದಿಂದ ಪ್ರಚಾರವನ್ನು ಮತ್ತೂಂದು ಹಂತಕ್ಕೇರಿಸಲು ಕಾಂಗ್ರೆಸ್‌ ಮತ್ತು ಬಿಜೆಪಿ ಸನ್ನದ್ಧವಾಗುತ್ತಿದೆ. ಇದುವರೆಗೂ ಮುಖಂಡರು ಹಾಗೂ ಕಾರ್ಯಕರ್ತರ ಮಟ್ಟದಲ್ಲಿದ್ದ ಪ್ರಚಾರವನ್ನು ಇನ್ನು ಮುಂದೆ ಜನಸಾಮಾನ್ಯರ ನಡುವಿಗೆ ತೆಗೆದುಕೊಂಡು ಹೋಗಲು ಎರಡೂ ಪಕ್ಷಗಳಲ್ಲಿ ತಯಾರಿ ನಡೆಯುತ್ತಿದೆ.

ಕಾಂಗ್ರೆಸ್‌ ಮತ್ತು ಬಿಜೆಪಿ ತಂಡಗಳನ್ನು ರಚಿಸುವ ಮೂಲಕ ಆಯಾ ಪ್ರಾಂತ್ಯದಲ್ಲಿ ಸ್ಥಳೀಯ ಮುಖಂಡರ ನೇತೃತ್ವದಲ್ಲಿ ಮನೆ ಮನೆಗೆ ಕರಪತ್ರಗಳನ್ನು ತಲುಪಿಸುವ ಕಾರ್ಯಕ್ರಮ ಇನ್ನು ಆರಂಭವಾಗಲಿದೆ. ಇನ್ನು ಉಳಿದಿರುವ ಹತ್ತು ದಿನಗಳಲ್ಲಿ ಅದಷ್ಟು ಜನರನ್ನು ತಲುಪುವ ಉದ್ದೇಶ ಕಾಂಗ್ರೆಸ್‌ ಬಿಜೆಪಿಗೆ ಇದೆ.

ಆದರೆ, ಕಾಂಗ್ರೆಸ್‌ ಪಕ್ಷಕ್ಕೆ ಇನ್ನು ಆಂತರಿಕ ಭಿನ್ನಮತ ಬಗೆಹರಿದಿಲ್ಲ. ಬಿಜೆಪಿಯು ಕಾಂಗ್ರೆಸ್‌ ಜೆಡಿಎಸ್‌ ಮುಖಂಡರನ್ನು ನೆಚ್ಚಿಕೊಂಡೇ ಪ್ರಚಾರವನ್ನು ಚುರುಕುಗೊಳಿಸಬೇಕಾಗಿದೆ. ಕಾಂಗ್ರೆಸ್‌ ಎದುರಿಸುತ್ತಿರುವ ಭಿನ್ನಮತ ಮತ್ತು ಇದೇ ಭಿನ್ನಮತೀಯರನ್ನು ಬಿಜೆಪಿ ನಂಬಿಕೊಂಡಿರುವುದರಿಂದ ಕೋಲಾರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ಬಹಿರಂಗವಾಗಿ ಚುರುಕುಗೊಂಡಿಲ್ಲ.

ರಂಗೇರಿಲ್ಲ: ಕಾಂಗ್ರೆಸ್‌ ಮತ್ತು ಜೆಡಿಎಸ್‌ ಭಿನ್ನಮತೀಯರು ಸದ್ಯಕ್ಕೆ ಕೆ.ಎಚ್‌.ಮುನಿಯಪ್ಪರಿಗೆ ಮತ ಹಾಕಬೇಡಿ ಎಂದಷ್ಟೇ ಪ್ರಚಾರ ಮಾಡುತ್ತಿದ್ದಾರೆ, ಆದರೆ, ಈ ಮತವನ್ನು ಬಿಜೆಪಿಗೆ ಹಾಕಿ ಎಂದು ಹೇಳುತ್ತಿಲ್ಲವೆಂಬ ಕೊರಗು ಬಿಜೆಪಿಗಿದೆ.

ಇದೇ ಕಾರಣಕ್ಕಾಗಿ ಕೋಲಾರದ ಪ್ರಚಾರ ಕಣ ಬಹಿರಂಗವಾಗಿ ರಂಗೇರಲು ಸಾಧ್ಯವಾಗುತ್ತಿಲ್ಲ. ಇತರೇ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ವಿರುದ್ಧ ಬಿಜೆಪಿ, ಬಿಜೆಪಿ ವಿರುದ್ಧ ಕಾಂಗ್ರೆಸ್‌ ಜೆಡಿಎಸ್‌ ಮುಗಿ ಬಿದ್ದು ಹೇಳಿಕೆ ಪ್ರತಿ ಹೇಳಿಕೆಗಳ ಮೂಲಕ ವ್ಯಾಗುದ್ಧ ನಡೆಯುತ್ತಿದ್ದರೆ,

ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯು ಇತರೇ ಪಕ್ಷದವರನ್ನೇ ನಂಬಿಕೊಂಡಿದ್ದಾರೆ. ಬಿಜೆಪಿಯು ಇತರೇ ಪಕ್ಷಗಳನ್ನೇ ನಂಬಿಕೊಂಡು ಪ್ರಚಾರಕ್ಕಿಳಿದಿರುವುದರಿಂದ ಇಲ್ಲಿ ಪಕ್ಷಾಧಾರಿತ ಪೈಪೋಟಿಯುಕ್ತ ಪ್ರಚಾರ ನಡೆಯುತ್ತಿಲ್ಲ. ಕೇವಲ ವ್ಯಕ್ತಿಗತ ಟೀಕೆಗಳ ಮೂಲಕ ಪ್ರಚಾರ ನಡೆಯುತ್ತಿದೆ.

ಇದುವರೆಗೂ ಕೋಲಾರ ಪ್ರಚಾರ ಕಣದಲ್ಲಿರುವ ಕಾಂಗ್ರೆಸ್‌ ಮತ್ತು ಬಿಜೆಪಿ ಅಭ್ಯರ್ಥಿಗಳು ತಾನು ಗೆದ್ದರೆ ಕೋಲಾರ ಕ್ಷೇತ್ರವನ್ನು ಹೀಗೆ ಅಭಿವೃದ್ಧಿ ಮಾಡುತ್ತೇವೆ ಎಂದು ಯಾವುದೇ ಯೋಜನೆಯನ್ನಾಗಲಿ, ಕಾರ್ಯಕ್ರಮಗಳನ್ನಾಗಲಿ ಪ್ರಕಟಿಸಿ ಪ್ರಚಾರ ನಡೆಸುತ್ತಿಲ್ಲ.

ಏಳು ಅವಧಿಯಲ್ಲಿ ಕೆ.ಎಚ್‌.ಮುನಿಯಪ್ಪ ಮಾಡಿಕೊಂಡಿರುವ ಆಸ್ತಿಎಷ್ಟು, ಬಿಜೆಪಿ ಅಭ್ಯರ್ಥಿ ಎಸ್‌.ಮುನಿಸ್ವಾಮಿ ಮೇಲಿರುವ ಕ್ರಿಮಿನಲ್‌ ಮೊಕದ್ದಮೆಗಳೆಷ್ಟು, ಯಾವ ಠಾಣೆಯಲ್ಲಿ ರೌಡಿಶೀಟರ್‌ ಆಗಿದ್ದಾರೆಂಬ ಕುರಿತೇ ಹೆಚ್ಚು ಪ್ರಚಾರ ನಡೆದಿದೆ.

ಒಟ್ಟಾರೆ ಕಾಂಗ್ರೆಸ್‌ ಮತ್ತು ಬಿಜೆಪಿ ಮುಖಂಡರು ಯುಗಾದಿ ನಂತರ ಬಿರು ಬೇಸಿಗೆಯಲ್ಲಿಯೇ ಬೆವರು ಹರಿಸಿ ಪ್ರಚಾರ ನಡೆಸಲು ಮುಂದಾಗಿರುವುದರಿಂದ ಮುಂದಿನ ಹತ್ತು ದಿನಗಳ ಕಾಲ ಪ್ರಚಾರ ಭರಾಟೆ ಹೆಚ್ಚಬಹುದು ಎಂದು ನಿರೀಕ್ಷಿಸಲಾಗುತ್ತಿದೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.