ತಾಯಿ ಮರಣ-ಅನಿಮಿಯಾ ಮುಕ್ತ ದೇಶಕ್ಕೆ ಶ್ರಮಿಸಿ


Team Udayavani, Apr 10, 2019, 3:00 AM IST

tayi

ಗುಡಿಬಂಡೆ: ಆರೈಕೆ ಸಿಗದೆ ತಾಯಿ ಮರಣ ಹಾಗೂ ಅನಿಮಿಯಾ ಮುಕ್ತ ಭಾರತ ಮಾಡಲು ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಸುರಕ್ಷಾ ಮಾತೃತ್ವ ಅಭಿಯಾನ ಜಾರಿಗೆ ತಂದಿದ್ದು ಸದ್ಬಳಕೆ ಮಾಡಿಕೊಳ್ಳಬೇಕೆಂದು ತಾಲೂಕು ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ಡಾ.ನರಸಿಂಹಮೂರ್ತಿ ಹೇಳಿದರು.

ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ಮಾತೃತ್ವ ಅಭಿಯಾನದಡಿ ಮಂಗಳವಾರ ಹಮ್ಮಿಕೊಂಡಿದ್ದ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮದಲ್ಲಿ ಮಾತನಾಡಿದರು.

ತಾಯಿ ಮರಣ ದೇಶದ ಪ್ರಗತಿಗೆ ಮಾರಕ. ಭಾರತದಲ್ಲಿ ವೈದ್ಯರ ಕೊರತೆ ಇದೆ. ಬದಲಾದ ಕಾಲ ಘಟ್ಟದಲ್ಲಿ ಸೂಕ್ತ ಸಮಯದಲ್ಲಿ ಗುಣಮಟ್ಟದ ಚಿಕಿತ್ಸೆ ವೈದ್ಯಕೀಯ ಆರೈಕೆ ದೊರಕುತ್ತಿಲ್ಲ. ಹೀಗಾಗಿ ತಾಯಿ ಮರಣ ಸಂಭವಿಸುತ್ತಿದೆ ಎಂದು ಹೇಳಿದರು.

ಒಂದು ತಾಯಿಯ ಮರಣಕ್ಕೆ ಅನೇಕ ಕಾರಣಗಳಿದ್ದು ಅದರಲ್ಲಿ ವೈದ್ಯಕೀಯ, ಅವೈದ್ಯಕೀಯ ಎಂದು ವಿಂಗಡಿಸಬಹುದು. ವೈದ್ಯಕೀಯ ಕಾರಣಗಳಲ್ಲಿ ಬಹಳಷ್ಟು ಮರಣಗಳು ಸೂಕ್ತ ಸಮಯದಲ್ಲಿ ಚಿಕಿತ್ಸೆ ದೊರಕದೆ ಸಂಭವಿಸುತ್ತವೆ ಎಂಬುದು ವಿಷಾಧನೀಯ ಸಂಗತಿ ಎಂದು ತಿಳಿಸಿದರು.

ಎಚ್ಚರವಹಿಸಿ: ಸಾಮಾಜಿಕ, ಆರ್ಥಿಕ ಕಾರಣಗಳಿಂದ ಗರ್ಭಿಣಿ ಒಂದೇ ಊರಿನಲ್ಲಿ ಇರುವುದಿಲ್ಲ. ಬರ ಪೀಡಿತ ಪ್ರದೇಶದ ಜನರು ಕೆಲಸಕ್ಕಾಗಿ ನಗರಗಳ ಕಡೆಗೆ ವಲಸೆ ಹೋಗುತ್ತಾರೆ. ಸೂಕ್ತ ಗರ್ಭಿಣಿ ಆರೈಕೆ ಮಾಡಿಕೊಳ್ಳುವುದಿಲ್ಲ. ಸೂಕ್ತ ವೈದ್ಯಕೀಯ ತಪಾಸಣೆಗೆ ಒಳ ಪಡುವುದಿಲ್ಲ. ಹೆರಿಗೆಗೆ 1 ವಾರ ಇಲ್ಲವೇ 1 ತಿಂಗಳು ಇರುವಾಗ ತಾಯಿ ಮನೆಗೆ ಹೆರಿಗೆಗೆ ಬರುತ್ತಾರೆ.

ಗಂಡಾಂತರ ಹೆರಿಗೆ ಲಕ್ಷಣಗಳು ಇದ್ದರೆ ಸ್ಥಳೀಯ ವೈದ್ಯರು ಮೇಲ್ದರ್ಜೆ ಅಥವಾ ಇತರೆ ಆಸ್ಪತ್ರೆಗೆ ಕಳುಹಿಸುತ್ತಾರೆ. ಈ ವೇಳೆ ದಾರಿ ಮಧ್ಯೆ ಸಾವು ಸಂಭವಿಸಬಹುದು. ವೈದ್ಯರ ನಿರ್ಲಕ್ಷ್ಯದಿಂದಲೂ ಸಾವು ಸಂಭವಿಸಬಹುದಾಗಿದೆ ಎಂದು ಹೇಳಿದರು.

ಕ್ರಮ ವಹಿಸಿ: ತಾಲೂಕು ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ವಿಜಯಲಕ್ಷಿ, ದೇಶದಲ್ಲಿ ತಾಯಿ ಮರಣ ತಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿಗಳು ಆರೋಗ್ಯ ಇಲಾಖೆಯಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ಮಾತೃತ್ವ ಅಭಿಯಾನ ಯೋಜನೆ ಜಾರಿಗೆ ತಂದಿದ್ದಾರೆ.

ಇದರ ಮೂಲ ಉದ್ಧೇಶ ಪ್ರತಿ ತಿಂಗಳು 9 ನೇ ತಾರೀಖೀನಂದು ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ, ಜಿಲ್ಲಾಸ್ಪತ್ರೆ, ಸರ್ಕಾರಿ/ ಅರೆ ಸರ್ಕಾರಿ/ಖಾಸಗಿ ಸ್ತ್ರೀ ರೋಗ ತಜ್ಞರು ಗರ್ಭಿಣಿ ಸ್ತ್ರೀಯರ ಪರೀಕ್ಷೆ ಮಾಡಿ ಸೂಕ್ತ ಮಾರ್ಗದರ್ಶನ ನೀಡಬೇಕು. ಮುಖ್ಯವಾಗಿ ತಾಯಿ ಮರಣ ಸಂಭವಿಸದಂತೆ ಕ್ರಮ ವಹಿಸಬೇಕೆಂದರು.

ಉಚಿತ ಔಷಧಿ: ಇದೊಂದು ಗ್ರಾಮೀಣ ಮತ್ತು ಬಡ ಹೆಣ್ಣು ಮಕ್ಕಳ ಪಾಲಿಗೆ ವರವಾಗಿದ್ದು ಹೊಸದಾದ ರಾಷ್ಟ್ರೀಯ ಕಾರ್ಯಕ್ರಮವಾಗಿದೆ. ಇದರ ಪೂರ್ಣ ಪ್ರಯೋಜನವನ್ನು ಗರ್ಭಿಣಿಯರು ಪಡೆಯಬೇಕು. ವೈದ್ಯರಿಗೆ ಹಣ ನೀಡಬೇಕಿಲ್ಲ. ಈ ವೇಳೆ ಗರ್ಭಿಣಿಗೆ ಅಗತ್ಯ ಇರುವ ಔಷಧಿಯನ್ನು ಜೆ.ಎಸ್‌.ಎಸ್‌.ಕೆ ಕಾರ್ಯಕ್ರಮದಡಿ ಭರಿಸಲಾಗುವುದೆಂದರು.

ತಾಯ್ತನಕ್ಕೆ ಯಾವುದೇ ಜಾತಿ, ಕುಲದ ಹಂಗು ನೋಡದೇ, ಬಡವ, ಶ್ರೀಮಂತ ಎಂದು ಬೇಧವೆಣಿಸದೆ ಉಚಿತವಾದ ಚಿಕಿತ್ಸೆ ನೀಡಲಾಗುವುದು. ಮೂಲಕ ತಾಯಿ ಮರಣ ಶಿಶು ಮರಣ ತಡೆಗಟ್ಟಬೇಕೆಂದರು.

ಗರ್ಭಿಣಿಯರಿಗೆ ಉಚಿತ ಔಷಧಿ: ಪ್ರತಿ ಗರ್ಭಿಣಿ ಕನಿಷ್ಠ 4 ಬಾರಿ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಂಡು ರಕ್ತದಲ್ಲಿ ಹಿಮೋಗ್ಲೊಬಿನ್‌ ಪ್ರಮಾಣ, ಬಿ.ಪಿ, ಕಬ್ಬಿಣಾಂಶ ಮತ್ತಿತರ ವಿಷಯಗಳ ಕಡೆ ಗಮನ ಹರಿಸಬೇಕು. ಅನಿಮಿಯಾ ಎಂದು ಕಂಡು ಬಂದಲ್ಲಿ, ಬಿ.ಪಿ ಹೆಚ್ಚು ಇರುವುದು ಕಂಡು ಬಂದಲ್ಲಿ ಸೂಕ್ತ ಮಾತ್ರೆ- ಔಷಧಿ ಪಡೆಯಬೇಕು.

ಎಚ್‌ಐವಿ ಮತ್ತಿತರ ಪರೀಕ್ಷೆಗೊಳಪಟ್ಟು ಮುಂಜಾಗ್ರತಾ ಕ್ರಮವಾಗಿ ಚಿಕಿತ್ಸೆ ಪಡೆಯಬಹುದು. ಅಲ್ಲದೇ, ಮಗುವಿಗೆ ಕಾಯಿಲೆ ಹರಡದಂತೆ ತಡೆಯಬಹುದು ಎಂದು ವೈದ್ಯಾಧಿಕಾರಿ ಡಾ.ನರಸಿಂಹಮೂರ್ತಿ ಹೇಳಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.