ಪರಂಪರಾಗತ ಸಂಸ್ಕೃತಿ ಬದುಕಿನಲ್ಲಿ ಅಳವಡಿಸಿ: ಕೊಟ್ಟಾರಿ


Team Udayavani, Apr 10, 2019, 6:00 AM IST

g-6

ಬಂಟ್ವಾಳ: ನಮ್ಮ ಪರಂಪರಾಗತ ಸಂಸ್ಕೃತಿಯನ್ನು ಬದುಕಿನಲ್ಲಿ ಅಳವಡಿಸಿ ಕೊಳ್ಳುವ ಮೂಲಕ ಧಾರ್ಮಿಕ ಸಂಪನ್ನತೆ ಯನ್ನು ಉಳಿಸಿ ಬೆಳೆಸಬೇಕು. ಆಮಂತ್ರಣ ಪತ್ರಿಕೆ, ಫ್ಲೆಕ್ಸ್‌ಗಳಲ್ಲಿ ದೇವರ ಚಿತ್ರವನ್ನು ಕಡ್ಡಾಯವಾಗಿ ನಾವೇ ನಿಷೇಧಿಸೋಣ. ಮದ್ಯಪಾನದ ಚಟಕ್ಕೆ ಬಲಿ ಬೀಳದಿರುವ ಸಂಕಲ್ಪ ನಮ್ಮದಾಗಲಿ. ಶುಭ ಕಾರ್ಯ ಕ್ರಮಗಳಲ್ಲಿ ಪಾಶ್ಚಾತ್ಯ ಸಂಸ್ಕೃತಿಗಳ ಅನುಕರಣೆ ಬೇಡ ಎಂಬ ಸಂಕಲ್ಪ ನಮ್ಮೆಲ್ಲರದಾಗಲಿ ಎಂದು ಶ್ರೀರಾಮ ನಾಮ ತಾರಕ ಜಪಯಜ್ಞ ಸಮಿತಿ ಅಧ್ಯಕ್ಷ ತಾರಾನಾಥ ಕೊಟ್ಟಾರಿ ಕರೆ ನೀಡಿದರು.

ಅವರು ಎ. 7ರಂದು ಕಳ್ಳಿಗೆ ಬೀಡು ಬಾಕಿಮಾರು ಗದ್ದೆಯಲ್ಲಿ ನಡೆದ ಶ್ರೀರಾಮ ನಾಮ ತಾರಕ ಜಪಯಜ್ಞದ ಪೂರ್ಣಾ ಹುತಿ ಬಳಿಕದ ಸುಧರ್ಮ ಸಭೆಯಲ್ಲಿ ಮಾತನಾಡಿದರು. ಆಧ್ಯಾತ್ಮಿಕ ಚಿಂತಕ, ವಿದ್ವಾಂಸ ಹಿರಣ್ಯ ವೆಂಕಟೇಶ್‌ ಭಟ್‌, “ಯಜ್ಞ, ಜಪಗಳಲ್ಲಿ ಭಗವಂತನೇ ಇರುತ್ತಾನೆ. ಜಪಯಜ್ಞದಲ್ಲಿ ಭಗವಂತ ಶ್ರೀಕೃಷ್ಣ ಇರುತ್ತಾನೆ. ಶ್ರೀರಾಮ ನಾಮ ತಾರಕ ಮಂತ್ರವನ್ನು ಉಪನಿಷತ್‌ನಲ್ಲಿಯೂ ಹೇಳಿದ್ದಾರೆ. ಸಂಸ್ಕಾರಗಳನ್ನು ಉತ್ತರಿಸುವ ಮಂತ್ರವೇ ತಾರಕ ಮಂತ್ರ. ಶ್ರೀರಾಮ ನಾಮ ಜಪ ಮನಸ್ಸಿಗೆ ಶಾಂತಿ, ಬದುಕಿಗೆ ದೃಢತೆ, ನ್ಯಾಯದ ಹಾದಿಯಲ್ಲಿ ನಡೆಯಲು ಪ್ರೇರಣೆ, ಸನ್ಮಾರ್ಗದ ಚಿಂತನೆ, ಎಲ್ಲರನ್ನು ಒಗ್ಗೂಡಿಸಿ ಮುನ್ನಡೆಯುವ ನಾಯಕತ್ವದ ಗುಣ ನೀಡುವುದು’ ಎಂದರು.

ಸಭಾಧ್ಯಕ್ಷತೆ ವಹಿಸಿದ್ದ ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರ ರಮಾನಾಥ ಹೆಗ್ಡೆ ಮಾತನಾಡಿ, ಎಲ್ಲವೂ ಭಗವದ್‌ ಸಂಕಲ್ಪದಲ್ಲಿ ನಡೆಯುತ್ತದೆ. ಪೂರ್ಣಾಹುತಿ ಆದಾಗ ನಮ್ಮ ಮನಸ್ಸಿನ ಒತ್ತಡ ನಿವಾರಣೆಯಾಗಿ ಇದೆಲ್ಲವನ್ನು ನಾವು ಮಾಡಿಸಿದ್ದೇ ಎಂಬ ಚಿಂತನೆ ಬರುವುದೇ ನಿಜವಾದ ದೈವ ಸಂಕಲ್ಪದ ಅರಿವನ್ನು ತರುವುದು ಎಂದರು.

ಪೊಳಲಿ ರಾಮಕೃಷ್ಣ ತಪೋವನದ ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿ, ಸಮಿತಿ ಗೌ.ಸಲಹೆಗಾರ ಕೊಡಾಣ್‌ ಕಾಂತಪ್ಪ ಶೆಟ್ಟಿ, ಯಜ್ಞ ಪುರೋಹಿತ ಕಶೆಕೋಡಿ ಸೂರ್ಯನಾರಾಯಣ ಭಟ್‌, ಎಂ.ಆರ್‌. ನಾಯರ್‌ ರಾಮಲ್‌ಕಟ್ಟೆ, ಪ್ರವೀಣ್‌ ತುಂಬೆ, ಉಮೇಶ್‌ ಸುವರ್ಣ ತುಂಬೆ, ಐತಪ್ಪ ಆಳ್ವ, ಭಾಸ್ಕರ ಚೌಟ ಕುಮೆಲು, ರಾಜಶೇಖರ ರೈ ಕಳ್ಳಿಗೆ, ಪ್ರಕಾಶ್‌ ಶೆಟ್ಟಿ ಶ್ರೀಶೈಲ ತುಂಬೆ, ಶಶಿಧರ ಬ್ರಹ್ಮರಕೂಟ್ಲು, ದೂಮ ಮೂಲ್ಯ, ನವೀನ್‌ಚಂದ್ರ ಶೆಟ್ಟಿ ಮುಂಡಾಜೆಗುತ್ತು ಉಪಸ್ಥಿತರಿದ್ದರು. ಯುವಭಾರತಿ ನೆತ್ತರಕೆರೆ ಸದಸ್ಯರು ಆಶಯಗೀತೆ ಹಾಡಿದರು. ಜ್ಯೋತಿಗುಡ್ಡೆ ದುರ್ಗಾಪರಮೇಶ್ವರೀ ಭಜನ ಮಂದಿರದ ಸದಸ್ಯರು ಸಹಕರಿಸಿದರು.

ಸಮಿತಿ ಅಧ್ಯಕ್ಷರು ಸ್ವಾಗತಿಸಿ, ಸಂಚಾಲಕ ದಾಮೋದರ ನೆತ್ತರಕೆರೆ ವಂದಿಸಿ, ಉಮೇಶ್‌ ರೆಂಜೋಡಿ, ಪ್ರವೀಣ್‌ ಕುಮಾರ್‌ ಜ್ಯೋತಿಗುಡ್ಡೆ ಸಹಕರಿಸಿದರು. ಸದಸ್ಯ ಚೇತನ್‌ ಮುಂಡಾಜೆ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

1

Crime: ಯೂಟ್ಯೂಬ್‌ ನೋಡಿ ಪ್ರೇಯಸಿಯ 59 ತುಂಡು ಮಾಡಿದ್ದ ಹಂತಕ!

INDvsBAN: New openers for India in T20; Who is the opener with Sharma?

INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್‌ ಯಾರು?

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Cap-Brijesh-Chowta

Putturu: ವಿದೇಶಗಳಿಂದ ಅಡಿಕೆ ಆಮದು ಪರಿಣಾಮ ಅಧ್ಯಯನ: ಸಂಸದ ಕ್ಯಾ.ಬ್ರಿಜೇಶ್‌ ಚೌಟ

Bela1

Wild Elephant: ಧರ್ಮಸ್ಥಳ, ಚಾರ್ಮಾಡಿಯಲ್ಲಿ ಕಾಡಾನೆಗಳ ಹಾವಳಿ

Crime

Sulya: ವಾರಂಟ್‌ ಆರೋಪಿ ಪರಾರಿ

police

Uppinangady: ವರದಕ್ಷಿಣೆಗಾಗಿ ನಿತ್ಯ ಮಾನಸಿಕ, ದೈಹಿಕ ಹಿಂಸೆ: ದೂರು ದಾಖಲು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

7

Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.