ಹೀಗಿದೆ ನೋಡಿ ಪಡುಮಲೆ ದಾರಿ

ಪೇರಾಲು-ಮೈಂದನಡ್ಕ ನಡುವೆ 1.5 ಕಿ.ಮೀ. ರಸ್ತೆ ಅಭಿವೃದ್ಧಿಗೆ ಒತ್ತಡ

Team Udayavani, Apr 10, 2019, 6:00 AM IST

G-9

ಮುಡಿಪಿನಡ್ಕ- ಸುಳ್ಯಪದವು ಜಿ.ಪಂ. ರಸ್ತೆಯ ನಡುವಿನ ಪೇರಾಲು- ಮೈಂದನಡ್ಕ ರಸ್ತೆ ತೀರಾ ಹದಗೆಟ್ಟಿದೆ.

ಬಡಗನ್ನೂರು: ಪಡುಮಲೆ ಕೋಟಿ- ಚೆನ್ನಯರ ಜನ್ಮಸ್ಥಳ ಅಭಿವೃದ್ಧಿಯಲ್ಲಿ ರಾಜಕೀಯ ಇಚ್ಛಾಶಕ್ತಿ ಕೊರತೆ ಹಾಗೂ ಅಧಿಕಾರಿಗಳ ಉದಾಸೀನ ಮನೋಭಾವ ದಿಂದ ಇಲ್ಲಿಗೆ ಬರುವ ಮುಡಿಪಿನಡ್ಕ- ಸುಳ್ಯಪದವು ಜಿ.ಪಂ. ರಸ್ತೆಯ ನಡುವಿನ ಪೇರಾಲು- ಮೈಂದನಡ್ಕ ರಸ್ತೆ ತೀರಾ ಹದ ಗೆಟ್ಟಿದ್ದು, ದೊಡ್ಡ ಹೊಂಡಗಳು ಬಿದ್ದು, ವಾಹನ ಚಾಲಕರು ಹರಸಾಹಸ ಪಡುವಂತಾ ಗಿದೆ. ಮಳೆಗಾಲದ ಮೊದಲು ರಸ್ತೆ ಸರಿಪಡಿಸದಿದ್ದರೆ ಸಂಚಾರ ಇನ್ನಷ್ಟು ದುಸ್ತರವಾಗಲಿದೆ.

ಪಡುಮಲೆ ಪ್ರವಾಸಿ ತಾಣವಾಗಿ ಅಭಿವೃದ್ಧಿ ಹೊಂದುತ್ತಿದ್ದು, ರಾಜ್ಯದ ವಿವಿಧ ಭಾಗಗಳಿಂದ ಆಗಮಿಸುವ ಪ್ರವಾಸಿ ಗರ ಸಂಖ್ಯೆ ಹೆಚ್ಚಾ ಗುತ್ತಿದೆ. ಆದರೆ ರಸ್ತೆ ಸುಸ್ಥಿತಿ ಯಲ್ಲಿ ಇಲ್ಲದಿರುವುದರಿಂದ ಪ್ರವಾಸಿಗರು ತೊಂದರೆ ಅನುಭವಿಸುತ್ತಿದ್ದಾರೆ.

ವಾಹನ ಸಂಚಾರಕ್ಕೆ ಮಾರಕ
ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಒನ್‌ ಟೈಮ್‌ ಯೋಜನೆಯಲ್ಲಿ ಮುಡಿಪಿನಡ್ಕ- ಪೇರಾಲು ಮಧ್ಯದ 2.2 ಕಿ.ಮೀ. ಹಾಗೂ ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿ ಮೈಂದನಡ್ಕ- ಕನ್ನಡ್ಕದ 2.75 ಕಿ.ಮೀ. ರಸ್ತೆಯನ್ನು ಅಭಿವೃದ್ಧಿ ಪಡಿಸಿದ್ದಾರೆ. ಜತೆಗೆ ಶಾಸಕರ ಕ್ಷೇತ್ರಾಭಿವೃದ್ಧಿ ಯೋಜನೆಯ 50 ಸಾವಿರ ರೂ.ಗಳಿಂದ ಇದೇ ರಸ್ತೆಯನ್ನು ಕನ್ನಡ್ಕದಿಂದ ನಗರದವರೆಗೆ ಅಭಿವೃದ್ಧಿ ಪಡಿಸಲಾಗುತ್ತದೆ. ಈ ನಡುವೆ ಪೇರಾಲು – ಮೈಂದನಡ್ಕ 1.5 ಕಿ.ಮೀ. ರಸ್ತೆ ತೀರಾ ಹದಗೆಟ್ಟಿದೆ.

ಈಡೇರದ ಭರವೆಸೆ
ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ಮುಡಿಪಿನಡ್ಕ- ಸುಳ್ಯಪದವು ರಸ್ತೆ ಅಭಿವೃದ್ಧಿಗೆ 5 ಕೋಟಿ ರೂ. ಬಿಡುಗಡೆ ಮಾಡಲಾಗಿತ್ತು. ಚುನಾವಣೆ ಹತ್ತಿರ ಬಂದ ಕಾರಣ ಅನುದಾನ ಬಿಡುಗಡೆಗೆ ತಡೆಯಾಗಿತ್ತು. ಸಂಸದ ನಳೀನ್‌ ಕುಮಾರ್‌ ಕಟೀಲು, ಡಿಸೆಂಬರ್‌ನಲ್ಲಿ ಕಾಮಗಾರಿ ಪ್ರಾರಂಭ ಮಾಡುವ ಭರವಸೆ ನೀಡಿದ್ದರು. ಅದು ಈಡೇರಿಲ್ಲ. 10 ವರ್ಷಗಳ ಅವರ ಅವಧಿಯಲ್ಲಿ ಬಡಗನ್ನೂರು ಗ್ರಾ.ಪಂ.ಗೆ ಒಟ್ಟು 6 ಲಕ್ಷ ರೂ. ಅನುದಾನ ಬಂದಿದೆ.

ಲೋಕಸಭಾ ಚುನಾವಣೆ ಸಮೀಪ ವಾಗುತ್ತದ್ದಂತೆ ಶಾಸಕ ಸಂಜೀವ ಮಠಂದೂರು ಕ್ಷೇತ್ರಾಭಿವೃದ್ಧಿ ಯೋಜನೆ ಯಡಿ 80 ಲಕ್ಷ ರೂ. ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದರು. ಫೆ. 20ಕ್ಕೆ ಟೆಂಡರ್‌ ನಡೆಯಲಿದೆ ಎಂದು ಪ್ರಕಟವಾದರೂ ಮೂರು ಬಾರಿ ಮುಂದೂಡಲಾಯಿತು. ಮಾ. 10ಕ್ಕೆ ಚುನಾವಣಾ ನೀತಿ ಸಂಹಿತೆ ಹೊರ ಬಂತು. ಹೀಗಾಗಿ, ಕಾಮಗಾರಿ ಟೆಂಡರ್‌ ನಡೆದಿಲ್ಲ. ಆದರೆ ರಸ್ತೆ ಗುದ್ದಲಿ ಪೂಜೆ ನಡೆಸಲಾಗಿದೆ. ರಸ್ತೆ ಅಭಿವೃದ್ಧಿ ಅನಂತರವೇ ಮತ ಕೇಳಲು ಬರಬೇಕು. ಇಲ್ಲವಾದರೆ ಮತದಾನ ಬಹಿಷ್ಕಾರ ಮಾಡಲಾಗುವುದು ಎಂದು ಗ್ರಾಮಸ್ಥರು ಹೇಳುತ್ತಾರೆ. ಈ ಮಧ್ಯೆ ಬಡಗನ್ನೂರು ಹಿತರಕ್ಷಣ ಸಮಿತಿ ವತಿಯಿಂದ ಎರಡು ಬಾರಿ ಶಾಸಕರನ್ನು ಭೇಟಿ ಮಾಡಿ ರಸ್ತೆ ಅಭಿವೃದ್ಧಿ ಪಡಿಸುವಂತೆ ಮನವಿ ಸಲ್ಲಿಸಲಾಗಿತ್ತು.

ರಸ್ತೆ ಅಭಿವೃದ್ಧಿಗೆ ಹೋರಾಟ
ಈ ರಸ್ತೆ ಅಭಿವೃದ್ಧಿ ಪಡಿಸುವಂತೆ ಬಡಗನ್ನೂರು ಹಿತರಕ್ಷಣ ಸಮಿತಿ ವತಿಯಿಂದ ಒಂದು ದಿವಸ ರಸ್ತೆ ತಡೆ ಮಾಡಿ ಶಾಂತಿಯುತ ಪ್ರತಿಭಟನೆ, ಬಳಿಕ ಒಂದು ವಾರ ಆಹೋರಾತ್ರಿ ಸತ್ಯಾಗ್ರಹ, ಕೌಡಿಚ್ಚಾರು ಬಳಿ ಮಾಣಿ- ಮೈಸೂರು ಹೆದ್ದಾರಿಯಲ್ಲಿ 5 ನಿಮಿಷ ಕಾಲ ರಸ್ತೆ ತಡೆ, ಶಾಸಕರ ಕಚೇರಿ, ಎ.ಸಿ. ಕಚೇರಿ ಎದುರು ಪ್ರತಿಭಟನೆ, ಉಸ್ತುವಾರಿ ಸಚಿವ, ಲೋಕಸಭಾ ಸದಸ್ಯರ ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ. ಇದರಿಂದಾಗಿ ಮುಡಿಪಿನಡ್ಕ- ಸುಳ್ಯಪದವು ಮಧ್ಯದ 7 ಕಿ.ಮೀ. ರಸ್ತೆಯಲ್ಲಿ 5 ಕಿ.ಮೀ. ಅಭಿವೃದ್ಧಿಗೊಂಡಿದೆ. ಉಳಿದ 2 ಕಿ.ಮೀ. ಅಭಿವೃದ್ಧಿಯಾಗಬೇಕಿದೆ.

ಸರಕಾರಿ ಬಸ್‌ ಸಂಚಾರ
ಪ್ರತಿ ದಿನ ಬೆಳಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ 10 ಬಾರಿ ಕೆಸ್ಸಾರ್ಟಿಸಿ, 8 ಬಾರಿ ಖಾಸಗಿ ಬಸ್‌ಗಳು ಈ ರಸ್ತೆಯಲ್ಲಿ ಸಂಚರಿಸುತ್ತವೆ. ಜತೆಗೆ ಮೂರು ಖಾಸಗಿ ಅಂಗ್ಲ ಮಾಧ್ಯಮ ಶಾಲೆಯ ಬಸ್‌, ಖಾಸಗಿ ವಾಹನ ಸಂಚರಿಸುತ್ತಿರುತ್ತವೆ.

ಭರವಸೆಯೊಂದೇ ಸಾಧನೆ
ಭರವಸೆ ನೀಡುವುದೊಂದೇ ರಾಜಕೀಯ ಪಕ್ಷದವರ ಸಾಧನೆ. ಯಾವ ಪಕ್ಷ ಅಧಿಕಾರ ಹಿಡಿದರೂ ಈ ಭಾಗದ ಜನರ ಗೋಳು ಕೇಳುವವರಿಲ್ಲ. ಅನಾರೋಗ್ಯ ಪೀಡಿತರನ್ನು ಕರೆದೊಯ್ಯಲು ಜನ ಪರದಾಡುವಂತಾಗಿದೆ.
ಪ್ರಶಾಂತ್‌ ಭಟ್‌ ಸಿ.ಎಚ್‌. ವಕೀಲ

ಚುನಾವಣೆ ಬಳಿಕ ಕೆಲಸ
ಚುನಾವಣಾ ನೀತಿ ಸಂಹಿತೆ ಬಂದ ಕಾರಣ ಟೆಂಡರ್‌ ಕರೆಯಲು ಸಾಧ್ಯವಾಗಿಲ್ಲ. ಚುನಾವಣೆ ಅನಂತರ ಟೆಂಡರ್‌ ಓಪನ್‌ ಮಾಡಿ ಗುತ್ತಿಗೆಗಾರರನ್ನು ಆಯ್ಕೆ ಮಾಡಿ ವರ್ಕ್‌ ಆರ್ಡರ್‌ ನೀಡಲಾಗುವುದು.
ಬಿ. ರಾಜಾರಾಮ್‌
ಸಹಾಯ ಕಾರ್ಯನಿರ್ವಾಹಕ ಎಂಜಿನಿಯರ್‌, ಲೋಕೋಪಯೋಗಿ ಇಲಾಖೆ, ಪುತ್ತೂರು

ದಿನೇಶ್‌ ಪೇರಾಲು

ಟಾಪ್ ನ್ಯೂಸ್

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ

Cap-Brijesh-Chowta

Putturu: ವಿದೇಶಗಳಿಂದ ಅಡಿಕೆ ಆಮದು ಪರಿಣಾಮ ಅಧ್ಯಯನ: ಸಂಸದ ಕ್ಯಾ.ಬ್ರಿಜೇಶ್‌ ಚೌಟ

Bela1

Wild Elephant: ಧರ್ಮಸ್ಥಳ, ಚಾರ್ಮಾಡಿಯಲ್ಲಿ ಕಾಡಾನೆಗಳ ಹಾವಳಿ

Crime

Sulya: ವಾರಂಟ್‌ ಆರೋಪಿ ಪರಾರಿ

police

Uppinangady: ವರದಕ್ಷಿಣೆಗಾಗಿ ನಿತ್ಯ ಮಾನಸಿಕ, ದೈಹಿಕ ಹಿಂಸೆ: ದೂರು ದಾಖಲು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.