ತಾವೇ ಗೆಲ್ಲಲಾಗದವರು ನನ್ನ ಸೋಲಿಸ್ತಾರಾ?

ಮೋದಿ ಹೆಸರಲ್ಲಿ ಭಿಕ್ಷೆ ಬೇಡುವ ಬಿಜೆಪಿಗೆ ನೈತಿಕತೆಯಿಲ್ಲ

Team Udayavani, Apr 10, 2019, 1:43 PM IST

10-April-18

ಚಿತ್ತಾಪುರ: ದಂಡೋತಿ ಗ್ರಾಮದಲ್ಲಿ ಕಲಬುರಗಿ ಲೋಕಸಭೆ ಚುನಾವಣೆ ಪ್ರಯುಕ್ತ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಯಲ್ಲಿ ಸಂಸದ ಡಾ| ಮಲ್ಲಿಕಾರ್ಜುನ ಖರ್ಗೆ ಮಾತನಾಡಿದರು

ಚಿತ್ತಾಪುರ: ಜನರಿಗೆ ಸುಳ್ಳು ಹೇಳುತ್ತಾ ಬಿಜೆಪಿ ಮತ್ತು ನರೇಂದ್ರ ಮೋದಿ ತಂಡ ಜಾತಿ, ಧರ್ಮದ ಹೆಸರಲ್ಲಿ ಕೋಮುವಾದ ಸೃಷ್ಟಿಸಿ ದೇಶ, ಸಮಾಜ ಒಡೆಯುವ ಕೆಲಸ ಮಾಡುತ್ತಿದೆ ಎಂದು ಹಾಲಿ ಸಂಸದ, ಕಲಬುರಗಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಾ| ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ತಾಲೂಕಿನ ತೆಂಗಳಿ ಜಿಪಂ ವ್ಯಾಪ್ತಿಯ ದಂಡೋತಿ ಗ್ರಾಮದಲ್ಲಿ ಕಲಬುರಗಿ ಲೋಕಸಭೆ ಚುನಾವಣೆ ಪ್ರಯುಕ್ತ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಚುನಾವಣೆಯಲ್ಲಿ ಜನರಿಂದ ತಿರಸ್ಕಾರಗೊಂಡು ಸೋತ ಕೂಡಲೇ ಸುಳ್ಳಿನ ಹಾಗೂ ಕೋಮುವಾದಿ ಬಿಜೆಪಿಗೆ ಸೇರಿ ನನ್ನನ್ನು ಸೋಲಿಸಲು ಸಾಧ್ಯವೇ? ಸೋತವರ ಸಂಘ ಕಟ್ಟಿಕೊಂಡು ಕೆಲವರು ಖರ್ಗೆ ಅದು ಮಾಡಿಲ್ಲ, ಇದು ಮಾಡಿಲ್ಲ ಎಂದು ನನ್ನ ವಿರುದ್ಧ ಪ್ರಚಾರ ಮಾಡುತ್ತಾ ತಿರುಗಾಡುತ್ತಿದ್ದಾರೆ. ಆದರೆ ನೀವು ಕಾಂಗ್ರೆಸ್‌ ಪಕ್ಷದಲ್ಲಿದ್ದುಕೊಂಡು ನಿವೇನ್‌ ಜನರಿಗೆ ಉಪಕಾರ
ಮಾಡಿದ್ದೀರಿ ಹೇಳಿ? ಅದನ್ನು ಬಿಟ್ಟು ಕಾಂಗ್ರೆಸ್‌ ಪಕ್ಷದಿಂದ ಗೆದ್ದು ಅ ಧಿಕಾರ, ಸಚಿವ ಸ್ಥಾನ ಪಡೆದು, ಖರ್ಗೆ ನಮ್ಮ ಪಾಲಿಗೆ ದೇವರು ಎಂದು ಹೇಳಿ, ಸೋತ ಕೂಡಲೇ ಖರ್ಗೆ ಅವರು ಕಲಬುರಗಿಗೆ ಏನು ಮಾಡಿದ್ದಾರೆ? ಎಂದು ಕೇಳುತ್ತಿರಲ್ಲ ಎಂದು ಕಾಂಗ್ರೆಸ್‌ ತೊರೆದವರ ವಿರುದ್ಧ ವಾಗ್ಧಾಳಿ ನಡೆಸಿದರು.

ಕಲಬುರಗಿ ಜನತೆಗೆ ಗೊತ್ತು ನಾನು ಏನೇನು ಮಾಡಿದ್ದೇನೆ ಎನ್ನುವುದು. ಕಲಬರುಗಿ ಜನರ ಆಶೀರ್ವಾದ ಸದಾ ನನ್ನ ಮೇಲಿದೆ. ಅವರ ಆಶಿರ್ವಾದದಿಂದಲೇ ನಾನು ಅಧಿಕಾರದಲ್ಲಿದ್ದೇನೆ. ಕಲಬುರಗಿ ಜನರ ಆಶಿರ್ವಾದ ಇರುವವರೆಗೂ ನನ್ನನ್ನು ಸೋಲಿಸಲು ಯಾರಿಂದಲೂ ಆಗುವುದಿಲ್ಲ ಎಂದು ಹೇಳಿದರು.
ನನ್ನ ರಾಜಕೀಯ ಹಣೆಬರಹ ಬರೆಯುವವರು
ಮತದಾರರು. ನನಗೆ ಅಧಿಕಾರ ನೀಡುವವರು ಮತದಾರರು. ನನಗೆ ಸೋಲಿಸುವ ತಾಕತ್ತು ಸೋತವರಿಗೆ ಎಲ್ಲಿದೆ. ದ್ರೋಹದ ಕೆಲಸ ಮಾಡುವವರನ್ನು ಜನರು ಕ್ಷಮಿಸುವುದಿಲ್ಲ. ಸುಮ್ನೆ ಬಿಡುವುದೂ ಇಲ್ಲ. ಮೋದಿ ಹೆಸರಲ್ಲಿ ಮತಭಿಕ್ಷೆ ಬೇಡುವ ನಿಮಗೆ ಅದೇನು ನೈತಿಕತೆ ಇದೆ. ವ್ಯಕ್ತಿ ಹೆಸರು ಬಿಟ್ಟು ಕೆಲಸದ ಆಧಾರದಲ್ಲಿ ಮತ ಕೇಳಿ ಎಂದು ತರಾಟೆಗೆ ತೆಗೆದುಕೊಂಡರು.

ರಾಜಕೀಯವಾಗಿ ನಮ್ಮನ್ನು ಮಣ್ಣಲ್ಲಿ ಹೂತುಹಾಕುವ ದುಸ್ಸಾಹಸ ಮಾಡುತ್ತಿದ್ದಾರೆ. ಅವರಿಗೇನ್‌ ಗೋತ್ತು ನಾನು ಬೀಜ ಎನ್ನುವುದು. ನೀವು ಮಣ್ಣಲ್ಲಿ ಹೂತುಹಾಕುವ ಪ್ರಯತ್ನ ಮಾಡಿದರೂ ಮತ್ತೆ ಮೇಲೆ ಬರುವುದೇ ಬೀಜದ ಗುಣ ಎಂಬ ಸತ್ಯವನ್ನು ಮರೆಯಬೇಡಿ. ನಾನು ಕಲ್ಲಬಂಡೆ ಮೇಲೆ ನಿಂತಿದ್ದೇನೆ. ಕಲಬುರಗಿ ಜನತೆ ಮುಂದೆ ಮೋದಿಯ ಸುಳ್ಳಿನ ಆಟ ನಡೆಯುವುದಿಲ್ಲ ಎಂದರು.

ಮಾಜಿ ಸಚಿವ ಬಾಬುರಾವ ಚವ್ಹಾಣ ಮಾತನಾಡಿ, ಡಾ| ಉಮೇಶ ಜಾಧವ ಅವರಿಗೆ ಕಾಂಗ್ರೆಸ್‌ ಪಕ್ಷ ಉಪಕಾರ ಮಾಡಿತ್ತು. ಆದರೆ ಅವರು ಉಪಕಾರ ಮಾಡಿದ ಪಕ್ಷ ಬಿಟ್ಟು ದ್ರೋಹ ಮಾಡಿದ್ದಾರೆ. ಇವರಿಗೆ ಕಲಬುರಗಿ ಜನರೆ ಲೋಕಸಭೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತಾರೆ. ಇಡೀ ಬಂಜಾರ ಸಮಾಜ ಅವರ ಹಿಂದೆ ಇಲ್ಲ.
ಚುನಾವಣೆಯಲ್ಲಿ ಅಧಿಕ ಸಂಖ್ಯೆಯಲ್ಲಿ ಬಂಜಾರ ಜನರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಬಲಿಸಲಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್‌ ಮುಖಂಡ ತಿಪ್ಪಣಪ್ಪ ಕಮಕನೂರ, ಮುಕ್ತಾರ ಪಟೇಲ್‌, ಡಾ| ದಾವುದ್‌ ಪಟೇಲ್‌, ಬ್ಲಾಕ್‌ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ, ತಾಲೂಕು ಅಧ್ಯಕ್ಷ ಭೀಮಣ್ಣ ಸಾಲಿ, ಜಿಪಂ ಸದಸ್ಯೆ ಶಶಿಕಲಾ ತಿಮ್ಮನಾಯಕ, ಶಿವರುದ್ರ ಭೀಣಿ, ಶಿವಾನಂದ ಪಾಟೀಲ, ತಾಪಂ ಸದಸ್ಯ ಮುನಿಯಪ್ಪ ಕೊಳ್ಳಿ, ಆಲಂ ಖಾನ್‌, ವೀರಣ್ಣಗೌಡ
ಪರಸರೆಡ್ಡಿ, ರಾಜಗೋಪಾಲರೆಡ್ಡಿ, ಅಜೀಜ ಸೇs…, ಶ್ರೀನಿವಾಸ ಸಗರ, ಎಂ.ಎ. ರಶೀದ್‌, ವಿರೂಪಾಕ್ಷಪ್ಪ ಗಡ್ಡದ್‌, ಶಂಭುಲಿಂಗ ಗುಂಡಗುರ್ತಿ, ಮಹ್ಮದ್‌ ಇಸಾಕ್‌ ಸೌದಾಗರ್‌, ರಶೀದ್‌ ಪಠಾಣ, ಭೀಮರಾವ ತೋಟದ್‌, ಸೈಯದ್‌ ಅಹ್ಮದ್‌ ಪಠಾಣ, ಸಾಬಣ್ಣ ಕೊಳ್ಳಿ ಮತ್ತಿತರರು ಇದ್ದರು.

ರಾಜಶೇಖರ ತಿಮ್ಮನಾಯಕ ಸ್ವಾಗತಿಸಿದರು, ರೇವಣಸಿದ್ದಪ್ಪ ಕೊಂಚೂರ ನಿರೂಪಿಸಿ, ವಂದಿಸಿದರು. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಕೋಲಿ ಸಮಾಜವನ್ನು ಎಸ್‌.ಟಿ ಪಟ್ಟಿಗೆ ಸೇರಿಸುವಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಶಿಫಾರಸು ಕಳುಹಿಸಲಾಗಿತ್ತು. ಎರಡು ಸಲ ಮೋದಿ ಸರ್ಕಾರ ಪ್ರಸ್ತಾವ ವಾಪಸು ಕಳುಹಿಸಿದೆ. ಈಗ ಕೆಲವರು ಎಸ್‌.ಟಿಗೆ ಸೇರಿಸಲು ಬಿಜೆಪಿಗೆ ಹೋಗಿರುವುದಾಗಿ ಹೇಳುತ್ತಾ ತಿರುಗುತ್ತಿದ್ದಾರೆ.
ಇದೆಂತಹ ನಾಚಿಕೆಗೇಡು ಕೆಲಸ.
ಆರ್‌.ಬಿ. ತಿಮ್ಮಾಪುರ, ಸಚಿವ

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sharana-Patil

Covid Scam: ಕೋವಿಡ್‌ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌

All set for the Indian Cultural Festival

Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Collection of donations in the name of Sri Siddalinga of Siddaganga Math: Old students upset

ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ

Togari completely destroyed by neti disease

Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.