![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Apr 11, 2019, 6:00 AM IST
ಹೊಸದಿಲ್ಲಿ: ಬಹುಕೋಟಿ ಮೇವು ಹಗರಣದ ಮೂರು ಪ್ರಕರಣಗಳಲ್ಲಿ ಜಾಮೀನು ಕೋರಿದ್ದ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ರ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ನ್ಯಾಯಪೀಠ ಬುಧವಾರ ಈ ಆದೇಶ ನೀಡಿದೆ. “ನಾವು ನಿಮ್ಮನ್ನು ಬಿಡುಗಡೆ ಮಾಡುವುದಿಲ್ಲ ಎಂದು ನಿರೀಕ್ಷಿಸು ತ್ತೇವೆ’ ಎಂದು ಹೇಳಿತು. ಆರ್ಜೆಡಿ ಸಂಸ್ಥಾಪಕನ ಪರ ವಾದ ಮಂಡಿಸಿದ ಕೇಂದ್ರದ ಮಾಜಿ ಸಚಿವ ಕಪಿಲ್ ಸಿಬಲ್ “ನನ್ನ ಕಕ್ಷೀದಾರರು 24 ತಿಂಗಳುಗಳಿಂದ ಕಾರಾಗೃಹ ದಲ್ಲಿ ದ್ದಾರೆ’ ಎಂದು ಹೇಳಿದರು. ಅದಕ್ಕೆ ಉತ್ತರ ನೀಡಿದ ನ್ಯಾಯಪೀಠ 24 ತಿಂಗಳ ಜೈಲು ಶಿಕ್ಷೆಯನ್ನು 14 ವರ್ಷದ ಶಿಕ್ಷೆಗೆ ಹೋಲಿಕೆ ಮಾಡಬಾರದು ಎಂದು ಹೇಳಿತು.
ಕಪಿಲ್ ಸಿಬಲ್ ವಾದ ಮಂಡಿಸಿ, ಲಾಲು ಯಾದವ್ ವಿರುದ್ಧ ಸಂಚು ಹೂಡಿ ಕೇಸು ದಾಖಲಿಸಲಾಗಿದೆ. ಜತೆಗೆ ಅವರ ವಿರುದ್ಧದ ಆರೋಪಕ್ಕೆ ಸಂಬಂಧಿಸಿದಂತೆ ಹಗರಣದ ಮೊತ್ತ ವಶಪಡಿಸಲಾಗಿಲ್ಲ ಎಂದರು. ಅದಕ್ಕೆ ಉತ್ತರಿಸಿದ ನ್ಯಾಯಪೀಠ “ಸದ್ಯ ಜಾಮೀನು ನೀಡಬೇಕೋ ಬೇಡವೊ ಎಂಬ ಬಗ್ಗೆ ಮಾತ್ರ ವಿಚಾರಣೆ ನಡೆಸಲಿದ್ದೇವೆ. ಪ್ರಕರಣದ ಬಗೆಗಿನ ಇತರ ಅಂಶಗಳನ್ನು ಹೈಕೋರ್ಟ್ ನಿರ್ಧರಿಸಲಿದೆ’ ಎಂದು ಹೇಳಿತು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.