ತಂದೆಯ ಅನಾರೋಗ್ಯದ ನಡುವೆ ಪಾರ್ಥಿವ್ ಐಪಿಎಲ್ ಆಟ
Team Udayavani, Apr 11, 2019, 6:30 AM IST
ಹೊಸದಿಲ್ಲಿ: ಈ ಬಾರಿಯ ಐಪಿಎಲ್ ರಾಯಲ್ ಚಾಲೆಂಜರ್ ಬೆಂಗಳೂರು ತಂಡಕ್ಕೆ ಉತ್ತಮವಾಗಿಲ್ಲ. ಇಲ್ಲಿಯವರೆಗೆ ಆಡಿರುವ ಆರೂ ಪಂದ್ಯಗಳನ್ನು ಸೋತಿರುವ ಆರ್ಸಿಬಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಟೀಕೆಗೆ ಒಳಗಾಗುತ್ತಿದೆ. ಆದರೆ ವಿಕೆಟ್ ಕೀಪರ್ ಪಾರ್ಥಿವ್ ಪಟೇಲ್ ಅವರು ವೈಯಕ್ತಿಕ ಸಮಸ್ಯೆಯ ನಡೆವೆಯೂ ಕ್ರಿಕೆಟ್ ಆಡುತ್ತಿರುವುದು ಎಲ್ಲರ ಪ್ರಶಂಸೆಗೆ ಕಾರಣವಾಗಿದೆ.
ಪಾರ್ಥಿವ್ ಪಟೇಲ್ ಅವರ ತಂದೆ ಅಜಯ್ ಪಟೇಲ್ ಮಿದುಳಿನ ರಕ್ತಸ್ರಾವದಿಂದಾಗಿ ತವರೂರಾದ ಅಹಮದಾಬಾದ್ನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಪಟೇಲ್ ವೈದ್ಯರಿಂದ ಕೆಟ್ಟ ಸುದ್ದಿ ಪಡೆಯುವ ಭಯದಲ್ಲೇ ದಿನವನ್ನು ಕಳೆಯುತ್ತಿದ್ದಾರೆ. ಐಪಿಎಲ್ ಆರಂಭಕ್ಕೂ ಮುನ್ನ ತಂದೆ ಆರೋಗ್ಯದ ವಿಷಯವನ್ನು ಟ್ವಿಟರ್ನಲ್ಲಿ ಪ್ರಕಟಿಸಿದ್ದ ಪಾರ್ಥಿವ್ ತಮ್ಮ ಫಾಲೋವರ್ ಗಳಿಗೆ ದೇವರಲ್ಲಿ ಪ್ರಾರ್ಥಿಸುವಂತೆ ಬೇಡಿಕೊಂಡಿದ್ದರು.
“ವೈದ್ಯರಿಂದ ಯಾವುದೇ ಕೆಟ್ಟ ಸುದ್ದಿ ಬಾರಬಾರದು ಎಂದು ನಾನು ಬೇಡಿಕೊಳ್ಳುತ್ತಿದ್ದೇನೆ. ಆಟದ ವೇಳೆ ಯಾವುದೇ ವಿಷಯಗಳು ನನ್ನ ತಲೆಗೆ ಬರುವುದಿಲ್ಲ. ಆದರೆ ಪಂದ್ಯವಾದ ಬಳಿಕ ನನ್ನ ಹೃದಯ ಮನೆಯಲ್ಲಿರುತ್ತದೆ. ನನ್ನ ದಿನ ತಂದೆ ಆರೋಗ್ಯದಲ್ಲಿನ ಪ್ರಗತಿ, ವೈದ್ಯರಲ್ಲಿ ಮಾತುಕತೆಯ ಅನಂತರ ಆರಂಭವಾಗುತ್ತದೆ. ಕೆಲವೊಂದು ಬಾರಿ ಪ್ರಮುಖ ಹಾಗೂ ಕಠಿನ ನಿರ್ಧಾ ರಗಳನ್ನು ಕೈಗೊಳ್ಳಬೇಕಾಗುತ್ತದೆ’ ಎಂದು ಪಾರ್ಥಿವ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.