ಎನಿ ಟೈಮ್‌, ಎನಿವೇರ್‌ ಚರ್ಚೆಗೆ ರೆಡಿ


Team Udayavani, Apr 11, 2019, 12:47 PM IST

sumalatha

ಪಾಂಡವಪುರ: ಮಂಡ್ಯಜಿಲ್ಲೆಯ ಅಭಿವೃದ್ಧಿ ಬಗ್ಗೆ ಮಾತನಾಡುವುದಕ್ಕೆ ನಾನು ಸಿದ್ಧಳಿದ್ದೇನೆ. ಎನಿ ಟೈಮ್‌, ಎನಿ ವೇರ್‌ ನಾನು ಚರ್ಚೆಗೆ ರೆಡಿ
ಎಂದು ಹೇಳುವ ಮೂಲಕ ಅಭಿವೃದ್ಧಿ ಬಗ್ಗೆ ಮಾತನಾಡೋಲ್ಲ ಕೇವಲ ಆರೋಪ ಮಾಡುತ್ತಾರೆ ಎನ್ನುವ ನಿಖೀಲ್‌ಗೆ ಸುಮಲತಾ ಬಹಿರಂಗ ಸವಾಲು ಹಾಕಿದ್ದಾರೆ.

ತಾಲೂಕಿನ ಬಿ.ಟಿ.ಕೊಪ್ಪಲು, ಎಣ್ಣೆಹೊಳೆ ಕೊಪ್ಪಲು ಸೇರಿದಂತೆ ವಿವಿಧೆಡೆ ಪ್ರಚಾರ ನಡೆಸುವ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಮಂಡ್ಯ ಅಭಿವೃದ್ಧಿ ಬಗ್ಗೆ ಮಾತ ನಾಡುವುದಕ್ಕೆ ನಾನು ಸಿದ್ಧಳಿದ್ದೇನೆ. ಅವರು ಎಲ್ಲಿ, ಯಾವಾಗ ಬೇಕಾದರೂ ಕರೆಯಲಿ. ಚರ್ಚೆಗೆ ಬರಲು ಸಿದ್ಧಲಿದ್ದೇನೆ. ಜೆಡಿಎಸ್‌ ನಾಯಕರು ನನ್ನನ್ನು ಟೀಕೆ ಮಾಡುವಾಗ ಮಂಡ್ಯ ಅಭಿವೃದ್ಧಿ ನೆನಪಾಗಲಿಲ್ಲವೇ ಎಂದು ಟಾಂಗ್‌ ನೀಡಿದರು.

ಜೆಡಿಎಸ್‌ ನಾಯಕರ ಹೇಳಿಕೆಗಳನ್ನು ಜನರು ಕೇಳಿದ್ದಾರೆ. ಈ ಹೇಳಿಕೆಗಳ ಬಗ್ಗೆ ಜನರಿಗೆ ಕೋಪವಿದೆ. ಈಗ ಅಭಿವೃದ್ಧಿಯ ಬಗ್ಗೆ ಮಾತನಾಡಿದರೆ ಜನರು ನಂಬುವುದಿಲ್ಲ ಎಂದ ಸುಮಲತಾ, ದರ್ಶನ್‌ ಹಾಗೂ ಯಶ್‌ಗೆ ಅಭಿಮಾನಿಗಳು ಎಲ್ಲಾ ಪಕ್ಷದಲ್ಲೂ ಇದ್ದಾರೆ. ದರ್ಶನ್‌ ಅಭಿಮಾನಿಗಳು ಈಗ ಜೆಡಿಎಸ್‌
ಸೇರಿದ್ದಾರೆ ಎಂದರೆ ಅದರ ಹಿಂದೆ ಏನಿರಬಹುದು ಎನ್ನುವುದನ್ನು ಯೋಚನೆ ಮಾಡಬೇಕು ಎಂದು ನಯವಾಗಿಯೇ ಉತ್ತರಿಸಿದರು.

ನ್ಯಾಯ ಸಿಕ್ಕಿದೆ: ಅನ್ಯಾಯದ ವಿರುದ್ಧ ಎತ್ತಿದ ಧ್ವನಿಗೆ ನ್ಯಾಯ ಸಿಕ್ಕಿದೆ. ಅಧಿಕಾರದಲ್ಲಿದ್ದಾಗ ಇವರು ಯಾರನ್ನೂ ವರ್ಗಾವಣೆ ಮಾಡಿಲ್ವಾ.
ಅಧಿಕಾರದಲ್ಲಿರುವ ಪಕ್ಷಗಳು, ಅಧಿಕಾರಿಗಳನ್ನು ಚುನಾವಣೆಗೆ ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಇದನ್ನು ಗಮನಿಸಿಯೇ
ಚುನಾವಣಾ ಆಯೋಗ ಮಂಡ್ಯ ಜಿಲ್ಲಾ ಚುನಾವಣಾಧಿಕಾರಿಯನ್ನು ಬೇರೆಡೆಗೆ ವರ್ಗಾವಣೆ ಮಾಡಿದೆ. ಅವರ ವರ್ಗಾವಣೆಯಿಂ ಇವರಿಗಾದ ನಷ್ಟವೇನು? ಚುನಾವಣಾ ಆಯೋಗದ ಬಗ್ಗೆ ಮಾತನಾಡ್ತಿದ್ದಾರೆ ಎಂದು ಸುಮಲತಾ ಪ್ರಶ್ನಿಸಿದರು.

ಲಾಭ ಪಡೆಯಲು ಯತ್ನ: ವಿಷ್ಣುವರ್ಧನ್‌ ಸ್ಮಾರಕ ನಿರ್ಮಾಣ ಹೆಸರಿನಲ್ಲಿ ಚುನಾವಣಾ ಲಾಭ ಪಡೆಯಲು ಸಿಎಂ ಕುಮಾರಸ್ವಾಮಿ ಪ್ರಯತ್ನಿಸುತ್ತಿದ್ದಾರೆ. ಇಲ್ಲಿವರೆಗೆ ವಿಷ್ಣು ಸ್ಮಾರಕದ ಬಗ್ಗೆ ಮಾತನಾಡದಿರುವುದು ಈಗ
ಮಾತನಾಡುತ್ತಿರುವುದೇಕೆ. ಚುನಾವಣಾ ಸಂದರ್ಭದಲ್ಲಿ ಏನೆಲ್ಲಾ ಮಾಡುತ್ತಿದ್ದಾರೆ ಅನ್ನೋದನ್ನು ಜನರು ನೋಡ್ತಿದ್ದಾರೆ. ಮಂಡ್ಯದ ಸ್ವಾಭಿಮಾನ ಏನು ಅನ್ನೋದು ಏ.23ರಂದು ಫ‌ಲಿತಾಂಶದಲ್ಲಿ ಗೊತ್ತಾಗಲಿದೆ ಎಂದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme court

ಒಂದೂವರೆ ತಿಂಗಳಲ್ಲಿ 20 ಕೇಸು; ಬಿಜೆಪಿ ಅಭ್ಯರ್ಥಿಗೆ ಸುಪ್ರೀಂ ರಕ್ಷಣೆ

s-28

ಚೌಕಿದಾರರಾಗಿ ಬದಲಾದ ಪ್ರತಿಪಕ್ಷಗಳ ಕಾರ್ಯಕರ್ತರು!

Voting 1

ಲೋಕನಾಟಕ, ಮತದಾರ ಮೂಕಪ್ರೇಕ್ಷಕ

Modi 5

ಫಿರ್‌ ಏಕ್‌ ಬಾರ್‌ ಚೌಕಿದಾರ್‌

b-36

ಆಂಧ್ರದಲ್ಲಿ ಜಗನ್‌ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.