“ಕಾರ್ಮಿಕ ವಿರೋಧಿ ಸರಕಾರ ಅಧಿಕಾರಕ್ಕೆ ಬಾರದಿರಲಿ’
ಮಹಿಳಾ ಹಮಾಲಿ ಕಾರ್ಮಿಕರ ಸಮಾವೇಶ
Team Udayavani, Apr 12, 2019, 6:24 AM IST
ಮಹಾನಗರ: 5 ವರ್ಷಗಳಿಂದ ನರೇಂದ್ರ ಮೋದಿ ಸರಕಾರವು ಜನತೆಗೆ ನೀಡಿದ ಘೋಷಣೆಗಳು ಸುಳ್ಳಾಗಿವೆ. ಒಳ್ಳೆಯ ದಿನಗಳು ಈ ದೇಶದ ಜನಸಾಮಾನ್ಯರಿಗೆ ಬಂದಿ ಲ್ಲ. ಇಂತಹ ಕಾರ್ಮಿಕ ವಿರೋಧಿ ಸರಕಾರವನ್ನು ಮತ್ತೆ ಅಧಿಕಾರಕ್ಕೇರದಂತೆ ತಡೆಯಲು ಇಡೀ ದೇಶದ ಕಾರ್ಮಿಕ ವರ್ಗ ಒಂದಾಗಬೇಕು ಎಂದು ಸಿಐಟಿಯು ರಾಜ್ಯ ಉಪಾಧ್ಯಕ್ಷ ವಸಂತ ಆಚಾರಿ ಹೇಳಿದರು.
ಬಂದರು ಪ್ರದೇಶದ ಮಹಿಳಾ ಹಮಾಲಿ ಕಾರ್ಮಿಕರ ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡಿದರು.
ಜೀವನಾವಶ್ಯಕ ವಸ್ತುಗಳ ಬೆಲೆಗಳು ದಿನದಿಂದ ದಿನಕ್ಕೆ ಏರುತ್ತಿವೆೆ. ಕಾರ್ಮಿಕರ ಪರವಾದ ಕಾನೂನುಗಳನ್ನು ಮಾಲಿಕರ ಪರವಾಗಿ ತಿದ್ದುಪಡಿ ಮಾಡಿ, ಕನಿಷ್ಠ ಕೂಲಿ, ಸಾಮಾಜಿಕ ಭದ್ರತೆ, ಪಿಂಚಣಿ ಮುಂತಾದ ಸವಲತ್ತುಗಳನ್ನು ಇನ್ನಿಲ್ಲವಾಗಿಸಲು ಪ್ರಯ ತ್ನಿಸುತ್ತಿದೆ ಎಂದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮಾತನಾಡಿ, ಸಂಸದ ನಳಿನ್ ಕುಮಾರ್ ಕಟೀಲು ಅವರು 10 ವರ್ಷಗಳಿಂದ ಜಿಲ್ಲೆಯ ಅಭಿವೃದ್ಧಿಗೆ ಕಿಂಚಿತ್ತೂ ಗಮನ ನೀಡಲಿಲ್ಲ, ಬದಲಾಗಿ ಜಿಲ್ಲೆಯ ಶಾಂತಿ ನೆಮ್ಮದಿಗೆ ಭಂಗ ತರುವ ಹೇಳಿಕೆ ನೀಡಿ ಜಿಲ್ಲೆಯ ಜನತೆಯನ್ನು ತಲೆ ತಗ್ಗಿಸುವಂತೆ ಮಾಡಿದ್ದಾರೆ. ಯುವ ಜನರಿಗೆ ಉದ್ಯೋಗ ಸೃಷ್ಠಿಸುವ ಒಂದೇ ಒಂದು ಯೋಜನೆಯನ್ನು ತರಲು ಅಸಾಧ್ಯವಾದ ಸಂಸದರನ್ನು ಈ ಬಾರಿ ಮನೆಗೆ ಕಳುಹಿಸಲು ಕಾರ್ಮಿಕ ವರ್ಗ ಚಿಂತಿಸಬೇಕಿದೆ ಎಂದರು.
ಅಧ್ಯಕ್ಷತೆಯನ್ನು ಬಂದರು ಹಮಾಲಿ ಕಾರ್ಮಿಕರ ಸಂಘದ ಅಧ್ಯಕ್ಷ ಅಹಮ್ಮದ್ ಬಾವಾ ವಹಿಸಿದ್ದರು.ಸುಲೋಚನಾ, ಕುಶಾಲಾಕ್ಷಿ, ಮುಕ್ತಾ,ಸುಶೀಲಾ,ಗಿರಿಜಾ ಮೊದಲಾದ ವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ
Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್ ಆರೋಪ
Kinnigoli ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ
Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ
Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್ ಮುನಿರಾಜು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್ ಮರೆತಿದ್ದಾರೆ: ಬಬಿತಾ ಫೋಗಾಟ್
Bigg Boss: ಬಿಗ್ ಬಾಸ್ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ
Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.