ಚುನಾವಣೆ ಪ್ರಕ್ರಿಯೆ ಸುಸೂತ್ರವಾಗಿ ನಡೆಸಿ


Team Udayavani, Apr 12, 2019, 2:46 PM IST

8

ಕೋಲಾರ: ಚುನಾವಣಾ ಪ್ರಕ್ರಿಯೆ ಯಾವುದೇ ಗೊಂದಲಗಳಿಲ್ಲದೇ ಸುಸೂತ್ರವಾಗಿ ನಡೆಯಲು ಮತದಾನ ಕಾರ್ಯಕ್ಕೆ ನೇಮಕಗೊಂಡಿರುವ ಮತಗಟ್ಟೆ ಸಿಬ್ಬಂದಿ ಕ್ರಮವಹಿಸಿ ಎಂದು ಸಹಾಯಕ ಚುನಾವಣಾಧಿಕಾರಿ ವಿಠಲ್‌ ತಿಳಿಸಿದರು.

ನಗರದ ಜೂನಿಯರ್‌ ಕಾಲೇಜಿನಲ್ಲಿ ಗುರುವಾರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತಗಟ್ಟೆ ಅಧಿಕಾರಿಗಳಾಗಿ ನೇಮಕಗೊಂಡಿರುವ ಸಿಬ್ಬಂದಿಗೆ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಏ.18ರಂದು ಚುನಾವಣೆ ನಿಗದಿಯಾಗಿದೆ. ಈ ಕಾರ್ಯ ಚೆನ್ನಾಗಿ ನಡೆಯುವಲ್ಲಿ ಅಧಿಕಾರಿಗಳ ಪಾತ್ರ ಅತಿ ಮುಖ್ಯ, ನಿಮಗೆ ನೀಡುತ್ತಿರುವ ತರಬೇತಿ ಪ್ರಯೋಜನ ಪಡೆದುಕೊಳ್ಳಿ, ಸಮಸ್ಯೆಗಳು ಎದುರಾಗದಂತೆ ಕಾರ್ಯನಿರ್ವಹಿಸಿ ಎಂದರು.

ಅಣುಕು ಮತದಾನ: ಈಗಾಗಲೇ ರೂಪಿಸಲಾಗಿರುವ ಯೋಜನೆಯಂತೆಯೇ ಪ್ರತಿಯೊಂದು ಕೆಲಸ ಸಮರ್ಪಕವಾಗಿ ಮಾಡಿಕೊಳ್ಳಬೇಕು. ಮತದಾನಕ್ಕೆ ಅಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಕಾಲಾವಕಾಶ ನೀಡಲಾಗಿದ್ದು, ತಾವು ಬೆಳಗ್ಗೆ ಮತದಾನ ಆರಂಭಕ್ಕೂ ಮುನ್ನ ಅಣುಕು ಮತದಾನವನ್ನು ಅಭ್ಯರ್ಥಿಗಳ ಪರ ಏಜೆಂಟರ ಸಮ್ಮುಖದಲ್ಲಿ ಕಡ್ಡಾಯವಾಗಿ ನಡೆಸಬೇಕೆಂದರು. ಪ್ರತಿ ಅಭ್ಯರ್ಥಿಗೂ ಮತ ಹಾಕಿ, ಖಾತ್ರಿ ಚೀಟಿಯನ್ನು ಅವರಿಗೆ ತೋರಿಸಿ, ಎಲ್ಲ ಪ್ರಕ್ರಿಯೆ ಮುಗಿಸಿ, ಅದನ್ನು ಅಳಿಸಿದ ಬಳಿಕ ನೈಜ ಮತದಾನಕ್ಕೆ ವ್ಯವಸ್ಥೆ.ಕಲ್ಪಿಸಬೇಕು. ಚುನಾವಣಾ ಸಿಬ್ಬಂದಿಗೆ ಈ ಬಾರಿ ಪೋಸ್ಟಲ್‌ ಬ್ಯಾಲೆಟ್‌ ಬದಲು ನೀವು ಕಾರ್ಯನಿರ್ವ ಹಿಸುವ ಸ್ಥಳದಲ್ಲಿಯೇ ಮತದಾನಕ್ಕೆ ಅವಕಾಶ ನೀಡಲಾಗುವುದು. ಅದಕ್ಕಾಗಿ ಎಪಿಕ್‌ ಸಂಖ್ಯೆ,
ಬ್ಯಾಂಕ್‌ ಖಾತೆ ನೀಡಬೇಕು ಎಂದು ತಿಳಿಸಿದರು.

4 ಸಾವಿರ ಮಂದಿಗೆ ಚುನಾವಣಾ ತರಬೇತಿ: ಈಗಾಗಲೇ ಪ್ರತಿ ಮತಗಟ್ಟೆಗೆ ತಲಾ ಪ್ರಿಸೈಂಡಿಂಗ್‌, ಒಬ್ಬ ಸಹಾಯಕ ಪ್ರಿಸೈಂಡಿಂಗ್‌ ಅ ಧಿಕಾರಿ ಹಾಗೂ ಇಬ್ಬರು ಪೋಲಿಂಗ್‌ ಅ ಧಿಕಾರಿಗಳನ್ನು ನೇಮಕಾತಿ ಮಾಡಿ ಆದೇಶ ಪತ್ರ ನೀಡಲಾಗಿದೆ ಎಂದು ತಿಳಿಸಿದರು. ಕೋಲಾರ ತಾಲೂಕಿನಲ್ಲಿ 583 ಪಿಆರ್‌ಒ ಮತ್ತು 780 ಎಪಿಆರ್‌ಒಗಳಿದ್ದು ಅವರಿಗೆ ಈಗಾಗಲೇ ಒಂದು ಸುತ್ತಿನ ತರಬೇತಿ ಮುಗಿದಿದೆ. ಇದು ಎರಡನೇ ಸುತ್ತಿನ ತರಬೇತಿಯಾಗಿದ್ದು, ಇಲ್ಲಿ ಪೋಲಿಂಗ್‌ ಅಧಿಕಾರಿಗಳು ಅರಿವು ಪಡೆದುಕೊಳ್ಳಿ ಎಂದರು.

ಅದೇ ರೀತಿ ಮಾಲೂರು, ಬಂಗಾರಪೇಟೆ, ಮುಳಬಾಗಿಲು, ಕೆಜಿಎಫ್‌, ಶ್ರೀನಿವಾಸಪುರದಲ್ಲಿಯೂ ಇದೇ ನಡೆ ನಡೆಸಲಾಗುತ್ತಿದೆ. ಮೊದಲನೇ ಹಂತದಲ್ಲಿ ಮಾಹಿತಿ ನೀಡಲಾಗುವುದು, ಎರಡನೇ ಹಂತದಲ್ಲಿ ಮತಯಂತ್ರ ಜೋಡಣೆ, ಬಳಕೆ ಬಗ್ಗೆ ತಿಳಿಸಿಕೊಡಲಾಗುತ್ತಿರುವುದಾಗಿ ಹೇಳಿದರು.
ಚುನಾವಣೆ ಸರಾಗವಾಗಿ ನಡೆಸಲು ತರಬೇತಿ ಪ್ರಮುಖ ಅಂಗವಾಗಿದೆ. ಮತದಾನದ ದಿನದಂದು ನಿಭಾಯಿಸಬೇಕಾದ ಕರ್ತವ್ಯಗಳನ್ನು ಸಂಪೂರ್ಣವಾಗಿ ತಿಳಿಸಿ ಕೊಡಲಾಗುತ್ತಿದೆ. ಮತದಾನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಪುರುಷ ಸಿಬ್ಬಂದಿಯನ್ನು ಅವರು ಕಾರ್ಯ ನಿರ್ವಹಿಸುವ ತಾಲೂಕು ಹೊರತುಪಡಿಸಿ ಬೇರೆ ಕಡೆ ಹಾಕಲಾಗುತ್ತದೆ. ಮಹಿಳಾ ಸಿಬ್ಬಂದಿಯನ್ನು ಆಯಾ ತಾಲೂಕಿನಲ್ಲೇ ನಿಯೋಜಿಸಲಾಗಿದ್ದು, ಚುನಾವಣಾ ಕರ್ತವ್ಯದಲ್ಲಿ ಲೋಪವಾಗದಂತೆ ಎಚ್ಚರವಹಿಸಲು ಸೂಚಿಸಿದರು. ತಹಶೀಲ್ದಾರ್‌ ಶ್ರೀನಿವಾಸ್‌ ಪ್ರಸಾದ್‌, ಸಂಪನ್ಮೂಲ ವ್ಯಕ್ತಿಗಳಾಗಿ ಮಾಸ್ಟರ್‌ ಟ್ರೆನರ್ ಹಾಗೂ ಸೆಕ್ಟರ್‌ ಅಧಿ ಕಾರಿ ಸಿ.ಎನ್‌.ಪ್ರದೀಪ್‌ಕುಮಾರ್‌, ರುದ್ರಪ್ಪ,
ಸುರೇಶ್‌, ರಾಮಚಂದ್ರಪ್ಪ, ಅಪ್ಪಯ್ಯಚಾರಿ, ಸೀನಪ್ಪ, ನಾಗರಾಜ್‌ ಮತ್ತಿತರರು ತರಬೇತಿ ನೀಡಿದರು.

ನೀವು ಈ ಹಿಂದೆ ಹಲವಾರು ಚುನಾವಣೆಗಳಲ್ಲಿ ಭಾಗವಹಿಸಿರಬಹುದು, ಎಲ್ಲಾ ವಿಚಾರಗಳು ತಿಳಿದಿರಬಹುದು. ಆದರೆ ಚುನಾವಣೆ ಹೊಸದು ಎನ್ನುವುದನ್ನು ಮರೆಯುವಂತಿಲ್ಲ. ಪ್ರತಿಯೊಬ್ಬರೂ ತರಬೇತುದಾರರಿಂದ ಎಲ್ಲಾ ಮಾಹಿತಿ ಪಡೆದು ತಮ್ಮ ಸಮಸ್ಯೆ, ಗೊಂದಲಗಳಿದ್ದರೆ ಬಗೆಹರಿಸಿಕೊಳ್ಳಿ.
ವಿಠಲ್‌, ಸಹಾಯಕ, ಚುನಾವಣಾಧಿಕಾರಿ

ಟಾಪ್ ನ್ಯೂಸ್

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.