ಪ್ರಜಾಪ್ರಭುತ್ವ ಉಳಿವಿಗಾಗಿ ಈ ಚುನಾವಣೆ

ಎಸ್‌ಡಿಪಿಐ ಪ್ರಚಾರ ಸಭೆಯಲ್ಲಿ ಶಾಫಿ ಬೆಳ್ಳಾರೆ

Team Udayavani, Apr 13, 2019, 6:00 AM IST

i-14

ಶಾಫಿ ಬೆಳ್ಳಾರೆ ಮಾತನಾಡಿದರು.

ಸುಳ್ಯ: ಎಸ್‌ಡಿಪಿಐ ದ.ಕ. ಲೋಕಸಭಾ ಅಭ್ಯರ್ಥಿ ಇಲ್ಯಾಸ್‌ ಮೊಹಮ್ಮದ್‌ ತುಂಬೆ ಅವರ ಚುನಾವಣಾ ಪ್ರಚಾರ ಸಭೆ, ಮೆರವಣಿಗೆ ಶುಕ್ರವಾರ ನಡೆಯಿತು. ಜ್ಯೋತಿ ಸರ್ಕಲ್‌ನಿಂದ ಗಾಂಧಿನಗರದ ತನಕ ಮೆರವಣಿಗೆ ನಡೆದು ಖಾಸಗಿ ಬಸ್‌ ನಿಲ್ದಾಣದ ಬಳಿ ಪ್ರಚಾರ ಸಭೆ ನಡೆಯಿತು.

ಎಸ್‌ಡಿಪಿಐ ರಾಜ್ಯ ಮುಖಂಡ ಶಾಫಿ ಬೆಳ್ಳಾರೆ ಮಾತನಾಡಿ, ಈ ಚುನಾವಣೆ ಸಂವಿಧಾನ, ಪ್ರಜಾಪ್ರಭುತ್ವ ಉಳಿವಿನ ಚುನಾವಣೆ. ಜನವಿರೋಧಿ, ಕೋಮುವಾದಿ ಬಿಜೆಪಿ ಪಕ್ಷವನ್ನು ತೊಲಗಿಸಿ ಜನಪರ ಸರಕಾರದ ಸ್ಥಾಪನೆಗಾಗಿ ಎಸ್‌ಡಿಪಿಐ ಅಭ್ಯರ್ಥಿಯ ಗೆಲುವು ಅನಿವಾರ್ಯ ಎಂದರು.

ಜಾತ್ಯತೀತ ಮುಖವಾಡ
ಅಯೋಧ್ಯೆ ಸ್ಥಳದ ವಿಚಾರ ಸುಪ್ರೀಂ ಕೋರ್ಟ್‌ನಲ್ಲಿ ಇರುವ ಹೊತ್ತಿನಲ್ಲಿ ರಾಮಮಂದಿರ ನಿರ್ಮಾಣಕ್ಕೆ ಅಡಿಗಲ್ಲು ಹಾಕಲು ಬಿಜೆಪಿ ಹೊರಟಿತ್ತು. ಆ ವೇಳೆ ಜಾತ್ಯತೀತ ಮುಖವಾಡ ಧರಿಸಿದ್ದ ಕಾಂಗ್ರೆಸ್‌ ಕೂಡ ಬಿಜೆಪಿ ನಡೆಯನ್ನು ಖಂಡಿಸಲಿಲ್ಲ ಎಂದರು.

ಎಸ್‌ಡಿಪಿಐ ನ್ಯಾಯಾಲಯದ ಕಾನೂನು ರಕ್ಷಣೆಗೆ ಸಿದ್ಧವಿರುವುದಾಗಿ ಘೋಷಿಸಿದ ಕಾರಣ ಬಿಜೆಪಿ ಶಿಲಾನ್ಯಾಸದಿಂದ ಹಿಂದೆ ಸರಿದಿತ್ತು ಎಂದು ಹೇಳಿದರು. ಅಭ್ಯರ್ಥಿ ಇಲ್ಯಾಸ್‌ ಮೊಹಮ್ಮದ್‌ ತುಂಬೆ ಮಾತನಾಡಿ, ಜಿಲ್ಲೆ ಸಮಗ್ರ ಅಭಿವೃದ್ಧಿಗೆ, ಶಾಂತಿ, ನೆಮ್ಮದಿಗೆ ತನ್ನನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಎಸ್‌ಡಿಪಿಐ ರಾಷ್ಟ್ರೀಯ ಮುಖಂಡ ಅಬ್ದುಲ್‌ ಲತೀಫ್‌ ಪುತ್ತೂರು, ನ್ಯಾಯವಾದಿ ಮಜೀದ್‌ ಖಾನ್‌, ಜಿಲ್ಲಾ ಉಪಾಧ್ಯಕ್ಷ ಆನಂದ ಮಿತ್ತಬೈಲು, ಇಕ್ಬಾಲ್‌, ಇಕ್ಬಾಲ್‌ ಬೆಳ್ಳಾರೆ, ಮಮ್ಮಾಲಿ ಹಾಜಿ, ಜಾಬಿರ್‌ ಅರಿಯಡ್ಕ, ಅಬ್ದುಲ್‌ ಕಲಾಂ ಮೊದಲಾದವರು ಉಪಸ್ಥಿತರಿದ್ದರು. ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ರಫೀಕ್‌ ಸ್ವಾಗತಿಸಿದರು. ಫೈಜಲ್‌ ಬೆಳ್ಳಾರೆ ನಿರೂಪಿಸಿದರು.

ಗೆಲ್ಲುವುದಿಲ್ಲವೆಂದು ವಿದೇಶ ಪ್ರವಾಸ!
ಐದು ವರ್ಷ ಕಳೆದರೆ ಮತ್ತೆ ತಾನು ಗೆಲ್ಲುವುದಿಲ್ಲ ಎನ್ನುವುದು ಮೋದಿಗೆ ಖಚಿತವಾದ ಕಾರಣ ವಿದೇಶಗಳಿಗೆ ಸುತ್ತಾಡಿದ್ದಾರೆ ಎಂದು ಟೀಕಿಸಿದ ಶಾಫಿ ಬೆಳ್ಳಾರೆ, ಅಲ್ಪಸಂಖ್ಯಾಕರ, ದಲಿತರನ್ನು ಮೇಲೆ ಹಲ್ಲೆ, ದೌರ್ಜನ್ಯ ನಡೆಸಿದ ಮೋದಿ ಸರಕಾರ ಸಂವಿಧಾನ ವಿರೋಧಿ. ನೀರವ್‌ ಮೋದಿ, ಮಲ್ಯ ಅವರು ಕೋಟ್ಯಂತರ ರೂ. ವಂಚಿಸಿ ಪರಾರಿಯಾಗಲು ರಕ್ಷಣೆ ನೀಡಿದ್ದೇ ಮೋದಿ ಅವರು ಕಾವಲುದಾರಿಕೆ ಎಂದು ಶಾಫಿ ಬೆಳ್ಳಾರೆ ಹೇಳಿದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.