RJD-JDU ತಥಾಕಥಿತ ವಿಲಯನ: ಲಾಲು ಬಹಿರಂಗ ಚರ್ಚೆಗೆ ಬರಲಿ: ಪ್ರಶಾಂತ್ ಕಿಶೋರ್
Team Udayavani, Apr 13, 2019, 11:11 AM IST
ಪಟ್ನಾ : ತಥಾಕಥಿತ ಆರ್ಜೆಡಿ – ಜೆಡಿಯು ವಿಲಯನದ ಬಗ್ಗೆ ಮುಕ್ತ ಚರ್ಚೆಗೆ ಬರುವಂತೆ ಜೆಡಿಯು ಉಪಾಧ್ಯಕ್ಷ ಪ್ರಶಾಂತ್ ಕಿಶೋರ್ ಅವರು ಬಹುಕೋಟಿ ಮೇವು ಹಗರಣದಲ್ಲಿ ಜೈಲು ಪಾಲಾಗಿರುವ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರಿಗೆ ಚ್ಯಾಲೆಂಜ್ ಹಾಕಿದ್ದಾರೆ.
ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಎನ್ಡಿಎ ಸೇರಿದ ಬಳಿಕ ಬಿಹಾರದ ಮಹಾಘಟಬಂಧನ ಸೇರುವ ಹಂಬಲದಲ್ಲಿ ತನ್ನ ಪ್ರತಿನಿಧಿ ಪ್ರಶಾಂತ್ ಕಿಶೋರ್ ಅವರನ್ನು ಐದು ಬಾರಿ ತನ್ನಲ್ಲಿಗೆ ಕಳುಹಿಸಿದ್ದರು ಎಂದು ಲಾಲು ಆರೋಪಿಸಿದ್ದರು.
ಈ ಆರೋಪದ ಸತ್ಯಾಸತ್ಯತೆಯನ್ನು ಬಯಲು ಮಾಡುವ ನಿಟ್ಟಿನಲ್ಲಿ ಬಹಿರಂಗ ಚರ್ಚೆಗೆ ಬರುವಂತೆ ಲಾಲುಗೆ ಪ್ರಶಾಂತ್ ಕಿಶೋರ್ ಅವರು ಟ್ವಿಟರ್ ನಲ್ಲಿ ಚ್ಯಾಲೆಂಜ್ ಹಾಕಿದ್ದಾರೆ.
“ಸಾರ್ವಜನಿಕ ಹುದ್ದೆಗಳನ್ನು ದುರುಪಯೋಗಿಸಿಕೊಂಡು ಜನರ ಹಣವನ್ನು ದುರ್ಬಳಕೆ ಮಾಡಿದವರು ಸತ್ಯದ ಗುತ್ತಿಗೆ ಹಿಡಿದವರಂತೆ ಮಾತನಾಡುತ್ತಿರುವುದು ವಿಪರ್ಯಾಸಕರ’ ಎಂದು ಪ್ರಶಾಂತ್ ಕಿಶೋರ್ ಟ್ವಿಟರ್ನಲ್ಲಿ ವ್ಯಂಗ್ಯವಾಡಿದ್ದಾರೆ.
ಬಿಹಾರ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಅವರು “ಚುನಾವಣಾ ರಣತಂತ್ರಗಾರ ಪ್ರಶಾಂತ್ ಕಿಶೋರ್ ಅವರು ನಿತೀಶ್ ಕುಮಾರ್ ಅವರ ಜೆಡಿಯು ಮತ್ತು ಆರ್ಜೆಡಿ ವಿಲೀನವಾಗುವ ಪ್ರಸ್ತಾವವೊಂದನ್ನು ಹಿಡಿದುಕೊಂಡು ನನ್ನ ಪತಿ ಲಾಲು ಪ್ರಸಾದ್ ರನ್ನು ಭೇಟಿಯಾಗಿದ್ದರು. ಹೀಗೆ ವಿಲಯನಗೊಳ್ಳುವ ಉಭಯ ಪಕ್ಷಗಳು 2019ರ ಲೋಕಸಭಾ ಚುನಾವಣೆಗೆ ಮುನ್ನ ಪ್ರಧಾನಿ ಅಭ್ಯರ್ಥಿಯನ್ನು ಘೋಷಿಸಬೇಕು ಎಂದು ಹೇಳಿದ್ದರು’ ಎಂಬುದಾಗಿ ಕೆಲ ದಿನಗಳ ಹಿಂದಷ್ಟೇ ಹೇಳಿಕೆ ನೀಡಿದ್ದರು.
ರಾಬ್ರಿ ಅವರ ಈ ಹೇಳಿಕೆಯ ಹಿನ್ನೆಲೆಯಲ್ಲಿ ಆರ್ಜೆಡಿ – ಜೆಡಿಯು ವಿಲಯನ ಕುರಿತ ಸತ್ಯಾಸತ್ಯತೆಯನ್ನು ಜಗಜ್ಜಾಹೀರು ಪಡಿಸುವ ದಿಶೆಯಲ್ಲಿ ಲಾಲು ಅವರು ಬಹಿರಂಗ ಚರ್ಚೆಗೆ ಬರಬೇಕು ಎಂಬ ಸವಾಲನ್ನು ಪ್ರಶಾಂತ್ ಕಿಶೋರ್ ಒಡ್ಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!
Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ
J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ
ಗಂಟಲಲ್ಲಿ ಇಡ್ಲಿ ಸಿಲುಕಿ ವ್ಯಕ್ತಿ ಮೃತ್ಯು… ಜೀವಕ್ಕೆ ಮುಳುವಾದ ಇಡ್ಲಿ ತಿನ್ನುವ ಸ್ಪರ್ಧೆ
Fake Visa: ನಕಲಿ ವೀಸಾ ಉತ್ಪಾದನೆಯ ಫ್ಯಾಕ್ಟರಿ ಪತ್ತೆ-ಮೂವರು ಆರೋಪಿಗಳ ಬಂಧನ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.