![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 15, 2019, 3:00 AM IST
ಜೆಡಿಎಸ್ನೊಂದಿಗೆ ಮೈತ್ರಿ ಮಾಡಿಕೊಂಡು ಲೋಕಸಭಾ ಚುನಾವಣೆ ಎದುರಿಸುತ್ತಿರುವ ಕಾಂಗ್ರೆಸ್ ನಾಯಕರಿಗೆ ಈಗ ಮತ್ತೂಂದು ಸಮಸ್ಯೆ ಎದುರಾಗಿದೆ. ಈ ಹಿಂದೆ ದೇವೇಗೌಡರ ಕುಟುಂಬ ರಾಜಕಾರಣವನ್ನು ಸದಾ ವಿರೋಧಿಸುತ್ತಾ ಬಂದಿದ್ದ ಕಾಂಗ್ರೆಸ್ ನಾಯಕರಿಗೆ, ಈಗ ಅದೇ ಕುಟುಂಬ ರಾಜಕಾರಣವನ್ನು ಓಲೈಸುವ ಸ್ಥಿತಿ ಎದುರಾಗಿದೆ.
ಕಾರಣ, ಈ ಚುನಾವಣೆಯಲ್ಲಿ ದೇವೇಗೌಡರ ಕುಟುಂಬದವರು ಸೋತರೆ ಸಮ್ಮಿಶ್ರ ಸರ್ಕಾರದ ಭವಿಷ್ಯಕ್ಕೆ ಧಕ್ಕೆಯಾಗಬಹುದು. ದೇವೇಗೌಡ ಹಾಗೂ ಸಿಎಂ ಮುನಿಸಿಕೊಳ್ಳಬಹುದು ಎಂಬ ಆತಂಕ ಕಾಂಗ್ರೆಸ್ ನಾಯಕರನ್ನು ಕಾಡುತ್ತಿದೆಯಂತೆ. ಹೀಗಾಗಿ, ಏನಾದರಾಗಲಿ, ದೇವೇಗೌಡ, ನಿಖಿಲ್, ಪ್ರಜ್ವಲ್ ಗೆಲ್ಲಲಿ ಎಂದು ಕಾಂಗ್ರೆಸ್ ನಾಯಕರು ದೇವರನ್ನು ಪ್ರಾರ್ಥಿಸುತ್ತಿದ್ದಾರಂತೆ.
ಮಂಡ್ಯದಲ್ಲಿ ಸ್ಥಳೀಯ ಕಾಂಗ್ರೆಸ್ ನಾಯಕರು ಸುಮಲತಾರನ್ನು ಬೆಂಬಲಿಸಲು ಸಿದ್ದರಾಮಯ್ಯ ಅವರ ಪರೋಕ್ಷ ಬೆಂಬಲವಿದೆ ಎಂಬುದು ಸಿಎಂ ಕುಮಾರಸ್ವಾಮಿ ಗುಮಾನಿ. ಹಾಗಾಗಿಯೇ, ಅವರು ಮಂಡ್ಯದಲ್ಲಿ ನಿಖಿಲ್ರನ್ನು ಸೋಲಿಸಲು ಚಕ್ರವ್ಯೂಹ ರಚನೆಯಾಗಿದೆ ಎಂದು ಹೇಳಿಕೆ ನೀಡುತ್ತಾ, ಮನದ ದುಗುಡವನ್ನು ಹೊರಹಾಕುತ್ತಿದ್ದಾರೆ.
ಇನ್ನು, ಹಾಸನದಲ್ಲಿ ಕಾಂಗ್ರೆಸ್ ತೊರೆದು, ಬಿಜೆಪಿ ಸೇರಿರುವ ಮಂಜು ಕೂಡ ಸಿದ್ದರಾಮಯ್ಯನವರ ಬೆಂಬಲಿಗ ಎಂಬುದು ರೇವಣ್ಣ ಅವರ ಆತಂಕ. ಹಾಗಾಗಿ, ನಿಖಿಲ್, ಪ್ರಜ್ವಲ್ ಸೋತರೆ ಅದರ ಹೊಣೆ ಪರೋಕ್ಷವಾಗಿ ಸಿದ್ದು ಹೆಗಲಿಗೆ. ಪರಿಣಾಮ ಮೈತ್ರಿ ಸರ್ಕಾರದಲ್ಲಿ ಬಿರುಕಿಗೆ ಕಾರಣವಾಗಲಿದೆ ಎಂಬುದು “ಕೈ’ ನಾಯಕರ ಆತಂಕ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.