ಬೆಳ್ತಂಗಡಿಯ ಸುದೆಮುಗೇರಿನಲ್ಲಿ ಯುವಕ, ಬಾಲಕಿ ನೇಣಿಗೆ ಶರಣು


Team Udayavani, Apr 16, 2019, 10:17 AM IST

suicide

ಬೆಳ್ತಂಗಡಿ: ಬೆಳ್ತಂಗಡಿ ನಗರದ ಸುದೆಮುಗೇರಿನ ಬಾಡಿಗೆ ಮನೆಯೊಂದರಲ್ಲಿ ಯುವಕ ಹಾಗೂ ಬಾಲಕಿ ಮನೆಯ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ರೆಂಕೆದಗುತ್ತು ನಿವಾಸಿ ಕಿರಣ್‌ಕುಮಾರ್‌ (29) ಹಾಗೂ ಲಾೖಲದ 16ರ ಹರೆಯದ ಬಾಲಕಿ ಆತ್ಮಹತ್ಯೆ ಮಾಡಿಕೊಂಡವರು. ಇವರು ಪರಸ್ಪರ ಪ್ರೀತಿಸುತ್ತಿದ್ದು, ಕಿರಣ್‌ ಪತ್ನಿ ಲವೀನಾ ವಿರೋಧಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಸಂಶಯಿಸಲಾಗಿದೆ.

ಕಿರಣ್‌ಕುಮಾರ್‌ ಲಾೖಲದಲ್ಲಿ ಮೆಕ್ಯಾನಿಕ್‌ ಆಗಿದ್ದು, ಕೆಲವು ವರ್ಷ ಗಳ ಹಿಂದೆ ಬೇರೆ ಜಾತಿಯ ಯುವತಿಯನ್ನು ಪ್ರೀತಿಸಿ ವಿವಾಹವಾಗಿದ್ದ. ಬಳಿಕ ಅವರ ಮಧ್ಯೆ ಭಿನ್ನಾಭಿಪ್ರಾಯ ಬಂದು ವಿಚ್ಛೇದ‌ನ ಪಡೆದಿದ್ದರು.

ಬಳಿಕ ಪುತ್ರಬೈಲಿನ ಸಂಬಂಧಿಕರ ಮನೆಯಲ್ಲಿ ವಾಸವಿದ್ದ ಬಣಕಲ್‌ ಮೂಲದ ಲವೀನಾಳನ್ನು ಪ್ರೀತಿಸಿ ವಿವಾಹವಾಗಿದ್ದ. ಮೃತ ಕಿರಣ್‌ನ ಹೆತ್ತವರ ಮನೆ ರೆಂಕೆದಗುತ್ತಿನಲ್ಲಿದ್ದರೂ ಆತ ಮನೆಗೆ ಹೋಗುತ್ತಿರಲಿಲ್ಲ. ಕಿರಣ್‌-ಲವೀನಾ ದಂಪತಿ ಸುದೆಮುಗೇರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಇವರಿಬ್ಬರ ಜತೆ ಲವೀನಾಳ ಸಂಬಂಧಿಯಾಗಿದ್ದ ಬಾಲಕಿಯೂ ವಾಸವಿದ್ದಳು. ಈ ಬಾಲಕಿ ಮತ್ತು ಕಿರಣ್‌ ಬೈಕಿನಲ್ಲಿ ಸುತ್ತಾಡುತ್ತಿದ್ದಾರೆ ಎಂದು ಆರೋಪಿಸುತ್ತಿದ್ದಳು ಮತ್ತು ಇದೇ ಕಾರಣಕ್ಕೆ ದಂಪತಿ ನಡುವೆ ಜಗಳವಾಗುತ್ತಿತ್ತು. ಎ. 14ರಂದು ಕೂಡ ತಡರಾತ್ರಿ ದಂಪತಿ ನಡುವೆ ಜಗಳವಾಗಿ ಹೊಡೆದಾಡಿಕೊಂಡಿದ್ದು, ಬಳಿಕ ಕಿರಣ್‌ ಪತ್ನಿ ಲವೀನಾಳನ್ನು ಮನೆಯಿಂದ ಹೊರ ಹಾಕಿದ್ದ ಎಂದು ಹೇಳಲಾಗುತ್ತಿದೆ.  ಬಳಿಕ ಲವೀನಾ ನೇರವಾಗಿ ಬೆಳ್ತಂಗಡಿ ಠಾಣೆಗೆ ಬಂದಿದ್ದಳಾದರೂ ಪತಿ ವಿರುದ್ಧ ದೂರು ನೀಡಲು ಸಿದ್ಧಳಿರಲಿಲ್ಲ. ಪತಿಯ ಹಲ್ಲೆ ಯಿಂದ ಗಾಯಗೊಂಡಿದ್ದ ಆಕೆಯನ್ನು ಆಸ್ಪತ್ರೆಗೆ ಹೋಗುವಂತೆ ಪೊಲೀಸರು ಸಲಹೆ ನೀಡಿದರೂ, ಆಕೆ ನೇರವಾಗಿ ಸಂಬಂಧಿಕರ ಮನೆಗೆ ಹೋಗಿದ್ದಳು.

ಸೋಮವಾರ ಬೆಳಗ್ಗೆ ಲವೀನಾ ಮನೆಗೆ ಬಂದಾಗ ಪತಿ ಮತ್ತು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದುದು ಕಂಡು ಬಂದಿತ್ತು.  ಬೆಳ್ತಂಗಡಿ ಸಿಐ ಸಂದೇಶ್‌ ಪಿ.ಜಿ., ಎಸ್‌ಐ ರವಿ ಬಿ.ಎಸ್‌. ಹಾಗೂ ಸಿಬಂದಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ. ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

ಪಕ್ಕಾಸು ತುಂಡಾಗಿತ್ತು!
ಕಿರಣ್‌ ಹಾಗೂ ಬಾಲಕಿಯು ಶಾಲಿನಿಂದ ನೇಣು ಬಿಗಿದುಕೊಂಡಿದ್ದರು. ನೇಣು ಹಾಕಿದ್ದ ಒಂದು ಪಕ್ಕಾಸು ತುಂಡಾಗಿದ್ದು, ಬಳಿಕ ಮತ್ತೂಂದು ಪಕ್ಕಾಸಿಗೆ ನೇಣು ಹಾಕಿಕೊಂಡಿದ್ದುದು ಕಂಡುಬಂದಿದೆ. ಬಾಲಕಿಯು ಎರಡು ತಿಂಗಳ ಹಿಂದೆ ಮನೆಬಿಟ್ಟು ಬಂದಿದ್ದಳು ಆಕೆಯ ಸಹೋದರ ತಿಳಿಸಿದ್ದಾರೆ.

ಟಾಪ್ ನ್ಯೂಸ್

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

Mumbai Coast: ಗೇಟ್‌ವೇ ಆಫ್‌ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

BYV-Modi

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

13

Alankar: ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

Brahmavar

Aranthodu: ಅಸೌಖ್ಯ; ಆಟೋ ಚಾಲಕ ಸಾವು

police-ban

Bantwal: ಜೂಜಾಟಕ್ಕೆ ದಾಳಿ; 7.81 ಲಕ್ಷ ರೂ.ವಶ

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

Mumbai Coast: ಗೇಟ್‌ವೇ ಆಫ್‌ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.