ಕೊಚ್ಚಿಯ ಬ್ಯೂಟಿ ಪಾರ್ಲರ್ ಶೂಟೌಟ್ ಪ್ರಕರಣ: ಪೈವಳಿಕೆಯ ಮನೆಗೆ ದಾಳಿ; ಮಾರಕಾಸ್ತ್ರ ವಶಕ್ಕೆ
Team Udayavani, Apr 20, 2019, 9:44 AM IST
ಮಂಜೇಶ್ವರ: ಕೊಚ್ಚಿ ಪನಂಬಳ್ಳಿ ನಗರದಲ್ಲಿರುವ ನಟಿ ಲೀನಾ ಮರಿಯಾ ಪೋಲ್ ಅವರ ಮಾಲಕತ್ವದ ನೈಲ್ ಬ್ಯೂಟಿ ಪಾರ್ಲರ್ಗೆ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿ ಕ್ರೈಂ ಬ್ರಾಂಚ್ ಅಧಿಕಾರಿಗಳು ಮಂಜೇಶ್ವರ ಪೈವಳಿಕೆ ಸಮೀಪದ ಕಾಯರ್ಕಟ್ಟೆಯ ಮನೆ ಯೊಂದಕ್ಕೆ ದಾಳಿ ನಡೆಸಿ ಅಪಾರ ಪ್ರಮಾಣದ ಮಾರಕಾಯುಧಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಮನೆಯಿಂದ ಪಿಸ್ತೂಲು, ತಲವಾರುಗಳು, ಸ್ಪ್ರಿಂಗ್ ಚಾಕು ಮತ್ತಿತರ ಆಯುಧಗಳು, ಹಲವು ಮೊಬೈಲ್ಗಳು ಮತ್ತು ವಾಹನಗಳ ನಂಬರ್ ಪ್ಲೇಟ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕ್ರೈಂಬ್ರಾಂಚ್ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಕರಣದ ವಿವರ
ಬ್ಯೂಟಿ ಪಾರ್ಲರ್ಗೆ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿ ಸುಪಾರಿ ತಂಡಕ್ಕೆ ಸೇರಿದ ಪೆರುಂ ಬಾವೂರಿನ ಬಿಲಾಲ್ ಸಹಿತ ಇಬ್ಬರನ್ನು ಕ್ರೈಂಬ್ರಾಂಚ್ ಕೆಲವು ದಿನಗಳ ಹಿಂದೆ ಬಂಧಿಸಿತ್ತು. ಆ ಪೈಕಿ ಬಿಲಾಲ್ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಸಿಕ್ಕಿದ ಮಾಹಿತಿಯಂತೆ ಪೈವಳಿಕೆಯ ಮನೆಗೆ ದಾಳಿ ನಡೆಸಲಾಗಿದೆ.
ಮೋನಾಯಿ ಎಂಬಾತ ಶೂಟೌಟ್ ಪ್ರಕರಣದ ಸೂತ್ರಧಾರನಾಗಿದ್ದು, ಈಗ ತಲೆ ಮರೆಸಿಕೊಂಡಿದ್ದಾನೆ. ಮೂಲತಃ ತೃಶೂರು ನಿವಾಸಿರುವ ಆತ ಮಲೇಶ್ಯಾಕ್ಕೆ ಪರಾರಿಯಾಗಿರಬೇಕು ಎಂದು ಶಂಕಿಸಲಾಗುತ್ತಿದೆ. ಕೆಲವು ವರ್ಷ ಕಾಸರಗೋಡಿನಲ್ಲೂ ನೆಲೆಸಿದ್ದ. ಬ್ಯೂಟಿ ಪಾರ್ಲರ್ಗೆ ಗುಂಡು ಹಾರಿಸಲು ಈತನೇ ಬಿಲಾಲ್ ಮತ್ತು ಇನ್ನೋರ್ವನಿಗೆ ಸುಪಾರಿ ನೀಡಿ ಬಂದೂಕು ಮತ್ತು ಬೈಕ್ ಒದಗಿಸಿದ್ದ ಎಂದು ಕ್ರೈಂಬ್ರಾಂಚ್ ತಿಳಿಸಿದೆ.
ಮೋನಾಯಿ ಕಾಸರಗೋಡಿನೊಂದಿಗೆ ಸಂಪರ್ಕ ಹೊಂದಿರುವ ಕಾರಣ ಆತನ ಪತ್ತೆಗಾಗಿ ತನಿಖೆಯನ್ನು ಕಾಸರಗೋಡಿಗೂ ವಿಸ್ತರಿಸಲಾಗಿದೆ. ಕೊಚ್ಚಿಯ ಕ್ರೈಂಬ್ರಾಂಚ್ ಡಿವೈಎಸ್ಪಿ ಜೋಸ್ ಚೆರಿಯನ್ ನೇತೃತ್ವದ ತಂಡ ತನಿಖೆ ನಡೆಸುತ್ತಿದೆ.
ಕ್ರಿಮಿನಲ್ಗಳ ಅಡ್ಡೆ ?
ಮಾರಕಾಯುಧಗಳು ಪತ್ತೆಯಾದ ಪೈವಳಿಕೆಯ ಮನೆ ಕ್ರಿಮಿನಲ್ ಪ್ರಕರಣ ತಂಡಗಳು ಕಾರ್ಯ ವೆಸಗುವ ರಹಸ್ಯ ತಾಣವಾಗಿದ್ದು, ದಾಳಿ ಸಂದರ್ಭ ಇಲ್ಲಿ ಹಾಸಿಗೆ ಹಿಡಿದಿದ್ದ ಅಸ್ವಸ್ಥ ವೃದ್ಧ ಮಾತ್ರ ಇದ್ದರು. ಆ ಮನೆಯಲ್ಲಿ ಹಲವು ಬಟ್ಟೆಗಳು ಪತ್ತೆಯಾಗಿದ್ದು, ಆ ಬಗ್ಗೆ ವೃದ್ಧನ ಹೇಳಿಕೆಯನ್ನು ಕ್ರೈಂಬ್ರಾಂಚ್ ದಾಖಲಿಸಿಕೊಂಡಿದೆ. ಆದರೆ ಈ ಹೇಳಿಕೆಯನ್ನು ಸಂಪೂರ್ಣವಾಗಿ ನಂಬುವಂತಿಲ್ಲವೆಂದು ಕ್ರೈಂಬ್ರಾಂಚ್ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Martin: ಇಂದು ಧ್ರುವ ಸರ್ಜಾ ಬರ್ತ್ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್ ಇವೆಂಟ್
New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ
Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.